ರಾಜ್ಯ ಸರ್ಕಾರಗಳಿಗೆ ಈ ಹಿಂದೆ ಇದ್ದ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿರುವುದನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸ್ವಾಗತಿಸಿದ ಸ್ವಾಮೀಜಿ, ‘ಕೇಂದ್ರ ಸರ್ಕಾರದ ಈ ಕ್ರಮದಿಂದ ಮೀಸಲಾತಿ ನೀಡಲು ಯೋಗಾಯೋಗ ಕೂಡಿಬಂದಿದೆ. ಕೂಡಲೇ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಂಡು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.