<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆ ಬಳಿಕ ‘ಮೈತ್ರಿ’ ಸರ್ಕಾರ ಉರುಳಲಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.</p>.<p>ಬಿಎಸ್ವೈ ಮುಖ್ಯಮಂತ್ರಿಯಾದರೆ ಸಹಜವಾಗಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗುತ್ತದೆ. ನಮ್ಮ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿಯಮವಿದೆ ಎಂದು ಅವರು ಬೆಂಗಳೂರು ಪ್ರೆಸ್ಕ್ಲಬ್ ಆಯೋಜಿಸಿದ್ದ ಮಾತು–ಮಂಥನ ಸಂವಾದದಲ್ಲಿ ತಿಳಿಸಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎರಡು ಮತ ಚಲಾವಣೆ ಮಾಡಿ ಎಂದು ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದರ ಅರ್ಥವೆಂದರೆ, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಅವಕಾಶ ಹೆಚ್ಚುತ್ತದೆ ಎಂದರು.</p>.<p>ಮೈತ್ರಿ ಪಕ್ಷದಲ್ಲಿನ ಗೊಂದಲ, ಅಪನಂಬಿಕೆ ಮತ್ತು ಕಿತ್ತಾಟದ ಪರಿಣಾಮ ಸರ್ಕಾರ ಪತನವಾಗುತ್ತದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುತ್ತದೆ. ಇಡೀ ದೇಶದಲ್ಲಿ ಮೋದಿ ಅಲೆ ಇರುವಂತೆ ರಾಜ್ಯದಲ್ಲೂ ಮೋದಿ ಅಲೆ ಇದೆ ಎಂದರು.</p>.<p><strong>ಡಿಎನ್ಎ ಪದ ಕಠೋರ:</strong> ಪಕ್ಷದಲ್ಲಿ ಡಿಎನ್ಎ ಮತ್ತು ಜೀನ್ ಕಾರಣಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆಯ ಪದ ಬಳಕೆ ಕಠೋರವಾಯಿತು ಎಂಬ ಅಭಿಪ್ರಾಯ ಪಕ್ಷದಲ್ಲಿದೆ ಎಂದೂ ಅವರು ಹೇಳಿದರು.</p>.<p><strong>ಸುಮಲತಾ ಅವಿರೋಧ ಆಯ್ಕೆ ಆಗಬೇಕಿತ್ತು</strong><br />ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಅವಿರೋಧವಾಗಿ ಆಯ್ಕೆ ಮಾಡಬೇಕಿತ್ತು ಎಂದು ಅರವಿಂದ ಲಿಂಬಾವಳಿ ಹೇಳಿದರು.</p>.<p>ದಿವಂಗತ ಅಂಬರೀಷ್ ಮತ್ತು ಅವರ ಪತ್ನಿ ಸುಮಲತಾ ಅವರು ಸಾಂಸ್ಕೃತಿಕವಾಗಿ ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ, ಅಂಬರೀಷ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಇದ್ದರು. ಆ ಎರಡೂ ಪಕ್ಷಗಳು ಸುಮಲತಾ ಅವರ ಕೈ ಬಿಟ್ಟಿರುವುದರಿಂದ ಅಂಬರೀಷ್ ಅವರ ಮನೆತನಕ್ಕೆ ಗೌರವ ನೀಡಿ ಬೆಂಬಲ ಸೂಚಿಸಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆ ಬಳಿಕ ‘ಮೈತ್ರಿ’ ಸರ್ಕಾರ ಉರುಳಲಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದರು.</p>.<p>ಬಿಎಸ್ವೈ ಮುಖ್ಯಮಂತ್ರಿಯಾದರೆ ಸಹಜವಾಗಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗುತ್ತದೆ. ನಮ್ಮ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿಯಮವಿದೆ ಎಂದು ಅವರು ಬೆಂಗಳೂರು ಪ್ರೆಸ್ಕ್ಲಬ್ ಆಯೋಜಿಸಿದ್ದ ಮಾತು–ಮಂಥನ ಸಂವಾದದಲ್ಲಿ ತಿಳಿಸಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎರಡು ಮತ ಚಲಾವಣೆ ಮಾಡಿ ಎಂದು ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದರ ಅರ್ಥವೆಂದರೆ, ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಅವಕಾಶ ಹೆಚ್ಚುತ್ತದೆ ಎಂದರು.</p>.<p>ಮೈತ್ರಿ ಪಕ್ಷದಲ್ಲಿನ ಗೊಂದಲ, ಅಪನಂಬಿಕೆ ಮತ್ತು ಕಿತ್ತಾಟದ ಪರಿಣಾಮ ಸರ್ಕಾರ ಪತನವಾಗುತ್ತದೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುತ್ತದೆ. ಇಡೀ ದೇಶದಲ್ಲಿ ಮೋದಿ ಅಲೆ ಇರುವಂತೆ ರಾಜ್ಯದಲ್ಲೂ ಮೋದಿ ಅಲೆ ಇದೆ ಎಂದರು.</p>.<p><strong>ಡಿಎನ್ಎ ಪದ ಕಠೋರ:</strong> ಪಕ್ಷದಲ್ಲಿ ಡಿಎನ್ಎ ಮತ್ತು ಜೀನ್ ಕಾರಣಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆಯ ಪದ ಬಳಕೆ ಕಠೋರವಾಯಿತು ಎಂಬ ಅಭಿಪ್ರಾಯ ಪಕ್ಷದಲ್ಲಿದೆ ಎಂದೂ ಅವರು ಹೇಳಿದರು.</p>.<p><strong>ಸುಮಲತಾ ಅವಿರೋಧ ಆಯ್ಕೆ ಆಗಬೇಕಿತ್ತು</strong><br />ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಅವಿರೋಧವಾಗಿ ಆಯ್ಕೆ ಮಾಡಬೇಕಿತ್ತು ಎಂದು ಅರವಿಂದ ಲಿಂಬಾವಳಿ ಹೇಳಿದರು.</p>.<p>ದಿವಂಗತ ಅಂಬರೀಷ್ ಮತ್ತು ಅವರ ಪತ್ನಿ ಸುಮಲತಾ ಅವರು ಸಾಂಸ್ಕೃತಿಕವಾಗಿ ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ, ಅಂಬರೀಷ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಇದ್ದರು. ಆ ಎರಡೂ ಪಕ್ಷಗಳು ಸುಮಲತಾ ಅವರ ಕೈ ಬಿಟ್ಟಿರುವುದರಿಂದ ಅಂಬರೀಷ್ ಅವರ ಮನೆತನಕ್ಕೆ ಗೌರವ ನೀಡಿ ಬೆಂಬಲ ಸೂಚಿಸಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>