‘ಪಕ್ಷದ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ’ ಎಂಬ ಮುಖಂಡ ರಾಮಲಿಂಗಾರೆಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಹಿರಿಯ ರಾಜಕಾರಣಿಯಾದ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಆದಾಗ್ಯೂ ಏನಾದರೂ ಅಸಮಾಧಾನ ಇದ್ದರೆ ವರಿಷ್ಠರು ಸರಿಪಡಿಸುತ್ತಾರೆ. ಶಾಸಕ ರೋಷನ್ ಬೇಗ್ ಅವರ ಅನಿಸಿಕೆ ಹೇಳಿದ್ದಾರೆ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಕೆಲವು ವಿಚಾರಗಳನ್ನು ಜನರಿಗೆ ಹೇಳುತ್ತಿರುತ್ತೇವೆ’ ಎಂದರು.