<p>ವಿಜಯಪುರ: ‘ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗದೇ ಇದ್ದರೆ ನಾನು ರಾಜಕೀಯ ನಿವೃತ್ತಿಯಾಗುತ್ತೇನೆ. ಈ ವಿಷಯದಲ್ಲಿ ಬೇಕಾದರೆ ನಾನು ಸವಾಲು ಹಾಕುತ್ತೇನೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಈ ಸವಾಲು ಸ್ವೀಕರಿಸಲು ಸಿದ್ದರಿದ್ದಾರೆಯೇ? ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನಮ್ಮ ಸಮೀಕ್ಷೆ ಪ್ರಕಾರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷಗಳಲ್ಲಿ ಜೆಡಿಎಸ್ ಪ್ರಥಮ ಸ್ಥಾನದಲ್ಲಿದೆ ಎಂದರು.</p>.<p>ಮುಂಬರುವ ಚುನಾವಣೆ ಬಳಿಕ ಜೆಡಿಎಸ್ ಎದುರು ಕಾಂಗ್ರೆಸ್, ಬಿಜೆಪಿ ತಗ್ಗಿ, ಬಗ್ಗಿ ನಡೆಯುವ ಕಾಲ ಬರಲಿದೆ. ಜೆಡಿಎಸ್ ಯಾರ ಜೊತೆ ಮದುವೆ, ಸಂಸಾರ ಮಾಡಲಿದೆ ಎಂಬುದು ಕಾದು ನೋಡಿ ಎಂದು ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಖಚಿತ ಎಂದು ಪರೋಕ್ಷವಾಗಿ ತಿಳಿಸಿದರು.</p>.<p>ಜೆಡಿಎಸ್ನ 80 ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ. ನಮ್ಮ ಗುರುಗಳಾದ ರೇವಣ್ಣ ಹೇಳಿದ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.</p>.<p>ಹಳೇ ಮೈಸೂರು ಭಾಗಕ್ಕಿಂತ ಉತ್ತರ ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ. ಲಿಂಗಾಯತ–ಒಕ್ಕಲಿಗ, ಲಿಂಗಾಯತ–ಮುಸ್ಲಿಂ, ಲಿಂಗಾಯತ–ಕುರುಬರು ಸೇರಿದರೆ ರಾಜ್ಯದಲ್ಲಿ ಚುನಾವಣೆ ಫಲಿತಾಂಶ ವಿಭಿನ್ನವಾಗಿರಲಿದೆ ಎಂದು ಹೇಳಿದರು.</p>.<p class="Subhead"><strong>ಪಂಚರತ್ನ:</strong></p>.<p>ಜೆಡಿಎಸ್ ಆರಂಭಿಸಿರುವ ‘ಪಂಚರತ್ನ’ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ ಎಂದರು.</p>.<p>ಡಿಸೆಂಬರ್ 18ರ ಬಳಿಕ ವಿಜಯಪುರ, ಬಾಗಲಕೋಟೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.</p>.<p>ಜನರಿಗೆ ಉಚಿತ ಆರೋಗ್ಯ ಸೌಲಭ್ಯ, ಗುಣಮಟ್ಟದ ಶಿಕ್ಷಣ, ಮಹಿಳಾ ಸಬಲೀಕರಣ, ನೀರಾವರಿ ಯೋಜನೆಗಳ ಪೂರ್ಣ ಮಡುವ ಭರವಸೆಯನ್ನು ಜೆಡಿಎಸ್ ಈ ಬಾರಿ ರಾಜ್ಯದ ಜನತೆಗೆ ನೀಡಿದೆ. ಒಂದು ವೇಳೆ ಐದು ವರ್ಷದಲ್ಲಿ ಈ ಭರವಸೆ ಈಡೇರಿಸಲು ಸಾಧ್ಯವಾಗದಿದ್ದರೆ ಮುಂದೆಂದೂ ಚುನಾವಣೆಗೆ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.</p>.<p class="Subhead"><strong>ಮೋದಿ ವಿರುದ್ಧ ವಾಗ್ದಾಳಿ:</strong></p>.<p>ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಉದ್ಯಮಿಗಳಾದ ಅದಾನಿ, ಅಂಬಾನಿ ಜೊತೆಗೂಡಿ ‘ನಾವಿಬ್ಬರು ನಮಗಿಬ್ಬರು’ ಎಂಬ ನೀತಿ ಅನುಸರಿಸುತ್ತಿದ್ದಾರೆ. ದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ, ತೈಲ ದರ ಗಗನಕ್ಕೆ ಏರಿದೆ, ರಸಗೊಬ್ಬರ ಬೆಲೆ ಏರಿಕೆಯಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ, ಸರ್ಕಾರಿ ಉದ್ದಿಮೆ, ಕಂಪನಿಗಳು ಖಾಸಗಿಯವರಿಗೆ ಮಾರಾಟವಾಗುತ್ತಿವೆ, ಸರ್ಕಾರಿ ಬ್ಯಾಂಕುಗಳು ಮುಚ್ಚುವ ಭೀತಿ ಎದುರಿಸುತ್ತಿವೆ ಈ ಬಗ್ಗೆ ಪ್ರಧಾನಿ ಮೋದಿ ಮನ್ ಕೀ ಬಾತ್ನಲ್ಲಿ ಎಲ್ಲಿಯೂ ಪ್ರಸ್ತಾಪಿಸುತ್ತಿಲ್ಲ. ಇದು ಜನರ ಮಾತಲ್ಲ, ಕೇವಲ ಮೋದಿ ಮಾತು, ಮನ್ ಕಿ ಬಾತ್ಗೆ ಯಾವುದೇ ಮಹತ್ವ ಇಲ್ಲ ಎಂದು ಹೇಳಿದರು.</p>.<p class="Subhead">ಅಧ್ಯಕ್ಷ ಹುದ್ದೆ ಹೆಚ್ಚು:</p>.<p>ಮುಖ್ಯಮಂತ್ರಿ ಹುದ್ದೆಗಿಂತ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹೆಚ್ಚು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬಂದರೆ ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಎಂದಾದರೂ ಈ ಕೆಲಸ ಮಾಡಿದೆಯಾ? ಜೆಡಿಎಸ್ನಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ಮಾಡಗಿ, ಮಲ್ಲಿಕಾರ್ಜುನ ಯಂಡಿಗೇರಿ, ಸ್ನೇಹಾ ಶೆಟ್ಟಿ, ಬಿಸ್ಮಿಲ್ಲಾ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p>****</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹಿಂದುತ್ವ, ಕೇಶವಕೃಪ ಬಿಟ್ಟು ಯಾವತ್ತು ಬಸವ ತತ್ವಕ್ಕೆ ಬದಲಾಗುತ್ತಾರೋ ಅಂದು ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ</p>.<p>– ಸಿ.ಎಂ.ಇಬ್ರಾಹಿಂ, ಅಧ್ಯಕ್ಷ, ಜೆಡಿಎಸ್ ರಾಜ್ಯ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗದೇ ಇದ್ದರೆ ನಾನು ರಾಜಕೀಯ ನಿವೃತ್ತಿಯಾಗುತ್ತೇನೆ. ಈ ವಿಷಯದಲ್ಲಿ ಬೇಕಾದರೆ ನಾನು ಸವಾಲು ಹಾಕುತ್ತೇನೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಈ ಸವಾಲು ಸ್ವೀಕರಿಸಲು ಸಿದ್ದರಿದ್ದಾರೆಯೇ? ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನಮ್ಮ ಸಮೀಕ್ಷೆ ಪ್ರಕಾರ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷಗಳಲ್ಲಿ ಜೆಡಿಎಸ್ ಪ್ರಥಮ ಸ್ಥಾನದಲ್ಲಿದೆ ಎಂದರು.</p>.<p>ಮುಂಬರುವ ಚುನಾವಣೆ ಬಳಿಕ ಜೆಡಿಎಸ್ ಎದುರು ಕಾಂಗ್ರೆಸ್, ಬಿಜೆಪಿ ತಗ್ಗಿ, ಬಗ್ಗಿ ನಡೆಯುವ ಕಾಲ ಬರಲಿದೆ. ಜೆಡಿಎಸ್ ಯಾರ ಜೊತೆ ಮದುವೆ, ಸಂಸಾರ ಮಾಡಲಿದೆ ಎಂಬುದು ಕಾದು ನೋಡಿ ಎಂದು ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಖಚಿತ ಎಂದು ಪರೋಕ್ಷವಾಗಿ ತಿಳಿಸಿದರು.</p>.<p>ಜೆಡಿಎಸ್ನ 80 ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ. ನಮ್ಮ ಗುರುಗಳಾದ ರೇವಣ್ಣ ಹೇಳಿದ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.</p>.<p>ಹಳೇ ಮೈಸೂರು ಭಾಗಕ್ಕಿಂತ ಉತ್ತರ ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ. ಲಿಂಗಾಯತ–ಒಕ್ಕಲಿಗ, ಲಿಂಗಾಯತ–ಮುಸ್ಲಿಂ, ಲಿಂಗಾಯತ–ಕುರುಬರು ಸೇರಿದರೆ ರಾಜ್ಯದಲ್ಲಿ ಚುನಾವಣೆ ಫಲಿತಾಂಶ ವಿಭಿನ್ನವಾಗಿರಲಿದೆ ಎಂದು ಹೇಳಿದರು.</p>.<p class="Subhead"><strong>ಪಂಚರತ್ನ:</strong></p>.<p>ಜೆಡಿಎಸ್ ಆರಂಭಿಸಿರುವ ‘ಪಂಚರತ್ನ’ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ ಎಂದರು.</p>.<p>ಡಿಸೆಂಬರ್ 18ರ ಬಳಿಕ ವಿಜಯಪುರ, ಬಾಗಲಕೋಟೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.</p>.<p>ಜನರಿಗೆ ಉಚಿತ ಆರೋಗ್ಯ ಸೌಲಭ್ಯ, ಗುಣಮಟ್ಟದ ಶಿಕ್ಷಣ, ಮಹಿಳಾ ಸಬಲೀಕರಣ, ನೀರಾವರಿ ಯೋಜನೆಗಳ ಪೂರ್ಣ ಮಡುವ ಭರವಸೆಯನ್ನು ಜೆಡಿಎಸ್ ಈ ಬಾರಿ ರಾಜ್ಯದ ಜನತೆಗೆ ನೀಡಿದೆ. ಒಂದು ವೇಳೆ ಐದು ವರ್ಷದಲ್ಲಿ ಈ ಭರವಸೆ ಈಡೇರಿಸಲು ಸಾಧ್ಯವಾಗದಿದ್ದರೆ ಮುಂದೆಂದೂ ಚುನಾವಣೆಗೆ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.</p>.<p class="Subhead"><strong>ಮೋದಿ ವಿರುದ್ಧ ವಾಗ್ದಾಳಿ:</strong></p>.<p>ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಉದ್ಯಮಿಗಳಾದ ಅದಾನಿ, ಅಂಬಾನಿ ಜೊತೆಗೂಡಿ ‘ನಾವಿಬ್ಬರು ನಮಗಿಬ್ಬರು’ ಎಂಬ ನೀತಿ ಅನುಸರಿಸುತ್ತಿದ್ದಾರೆ. ದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ, ತೈಲ ದರ ಗಗನಕ್ಕೆ ಏರಿದೆ, ರಸಗೊಬ್ಬರ ಬೆಲೆ ಏರಿಕೆಯಾಗಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ, ಸರ್ಕಾರಿ ಉದ್ದಿಮೆ, ಕಂಪನಿಗಳು ಖಾಸಗಿಯವರಿಗೆ ಮಾರಾಟವಾಗುತ್ತಿವೆ, ಸರ್ಕಾರಿ ಬ್ಯಾಂಕುಗಳು ಮುಚ್ಚುವ ಭೀತಿ ಎದುರಿಸುತ್ತಿವೆ ಈ ಬಗ್ಗೆ ಪ್ರಧಾನಿ ಮೋದಿ ಮನ್ ಕೀ ಬಾತ್ನಲ್ಲಿ ಎಲ್ಲಿಯೂ ಪ್ರಸ್ತಾಪಿಸುತ್ತಿಲ್ಲ. ಇದು ಜನರ ಮಾತಲ್ಲ, ಕೇವಲ ಮೋದಿ ಮಾತು, ಮನ್ ಕಿ ಬಾತ್ಗೆ ಯಾವುದೇ ಮಹತ್ವ ಇಲ್ಲ ಎಂದು ಹೇಳಿದರು.</p>.<p class="Subhead">ಅಧ್ಯಕ್ಷ ಹುದ್ದೆ ಹೆಚ್ಚು:</p>.<p>ಮುಖ್ಯಮಂತ್ರಿ ಹುದ್ದೆಗಿಂತ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹೆಚ್ಚು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬಂದರೆ ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಎಂದಾದರೂ ಈ ಕೆಲಸ ಮಾಡಿದೆಯಾ? ಜೆಡಿಎಸ್ನಲ್ಲಿ ಮಾತ್ರ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸನಗೌಡ ಮಾಡಗಿ, ಮಲ್ಲಿಕಾರ್ಜುನ ಯಂಡಿಗೇರಿ, ಸ್ನೇಹಾ ಶೆಟ್ಟಿ, ಬಿಸ್ಮಿಲ್ಲಾ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p>****</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹಿಂದುತ್ವ, ಕೇಶವಕೃಪ ಬಿಟ್ಟು ಯಾವತ್ತು ಬಸವ ತತ್ವಕ್ಕೆ ಬದಲಾಗುತ್ತಾರೋ ಅಂದು ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ</p>.<p>– ಸಿ.ಎಂ.ಇಬ್ರಾಹಿಂ, ಅಧ್ಯಕ್ಷ, ಜೆಡಿಎಸ್ ರಾಜ್ಯ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>