<p><strong>ದಾವಣಗೆರೆ:</strong> ಕೇಂದ್ರ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದೆ. ದೇಶ ಇನ್ನಾದರೂ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>‘ಬಿಜೆಪಿ ಅಧಿಕಾರದಲ್ಲಿ ಇರಬಾರದು, ಅದು ದೇಶದಿಂದ ತೊಲಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ದೇಶದ ಜನಾಭಿಪ್ರಾಯ ಬಿಜೆಪಿಗೆ ಸಿಕ್ಕಿದೆ. ದೇಶದ ಒಳಿತಿಗೆ ಪ್ರಧಾನಿ ಬದಲಾಗಬೇಕು’ ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ದೇಶವನ್ನು ಒಬ್ಬರೇ ನಡೆಸಲು ಸಾಧ್ಯವಿಲ್ಲ. ಕೇಂದ್ರದ ಐವರು ಸಚಿವರ ಹೆಸರು ಜನರಿಗೆ ಗೊತ್ತಿಲ್ಲ. ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೀರೋ ಮಾಡಿವೆ. ದೀಪಾವಳಿಯಲ್ಲಿ ಸಿಡಿಸುವ ಪಟಾಕಿ ಕೂಡ ಚೀನಾದಿಂದ ಬರುತ್ತಿದೆ. ಹಾಗದರೆ ಮೇಕ್ ಇನ್ ಇಂಡಿಯಾ ಏನಾಯಿತು’ ಎಂದು ಪ್ರಶ್ನಿಸಿದರು.</p>.<p>‘ಕುಂಭಮೇಳದಲ್ಲಿ ನೀರು ಕಲುಷಿತ ಕಲುಷಿತಗೊಂಡಿರುವುದನ್ನು ವರದಿಗಳು ಖಚಿತಪಡಿಸಿವೆ. ಭಕ್ತರಿಗೆ ಕಲ್ಪಿಸಿದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡಲಾಗಿದೆ. ಶ್ರೀಮಂತರಿಗೆ ಲಕ್ಷಾಂತರ ರೂಪಾಯಿ ಟೆಂಟ್ಗಳಿವೆ. ಬಡವರು ಪುಣ್ಯ ಸ್ನಾನಕ್ಕೆ ಹಲವು ದಿನ ಕಾಯಬೇಕಿದೆ. ಕಾಲ್ತುಳಿತದಲ್ಲಿ ಮೃತಪಟ್ವರ ಲೆಕ್ಕವನ್ನೂ ಸರ್ಕಾರ ಸರಿಯಾಗಿ ತಿಳಿಸಲಿಲ್ಲ. ದೆಹಲಿಯ ಸಂಸತ್ ಭವನದಿಂದ 3 ಕಿ.ಮೀ ದೂರದ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಪ್ರಾಣ ಕಳೆದುಕೊಂಡರು. ಸೌಜನ್ಯಕ್ಕೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಲಿಲ್ಲ’ ಎಂದು ಕಿಡಿಕಾರಿದರು.</p>.<p>‘ಮುಡಾ’ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ಸಿಕ್ಕಿದೆ. ಇದು ನ್ಯಾಯಕ್ಕೆ ಸಂದ ಜಯ. ದೇಶದ ಏಕೈಕ ಹಿಂದುಳಿದ ಸಮುದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡಬೇಕು ಎಂಬ ಬಿಜೆಪಿ ಹುನ್ನಾರ ಸಫಲವಾಗಿಲ್ಲ. ‘ಮುಡಾ’ ಪ್ರಕರಣದಲ್ಲಿ ಕೇವಲ 14 ನಿವೇಶನಗಳ ಬಗ್ಗೆ ಮಾತ್ರ ಚರ್ಚೆ ಆಯಿತು. ಇನ್ನೂ ಬಾಕಿ ಇರುವ 110 ನಿವೇಶನಗಳ ಬಗ್ಗೆಯೂ ಚರ್ಚೆ ಆಗುವ ಅಗತ್ಯ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.ಸಿದ್ದರಾಮಯ್ಯರನ್ನ ಬಿಡಿ, ಅಲ್ಲಿ ಮೋದಿಯನ್ನೇ ಬದಲಾಯಿಸ್ತಿದಾರೆ: ಸಂತೋಷ್ ಲಾಡ್ ಕುಹಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೇಂದ್ರ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದೆ. ದೇಶ ಇನ್ನಾದರೂ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>‘ಬಿಜೆಪಿ ಅಧಿಕಾರದಲ್ಲಿ ಇರಬಾರದು, ಅದು ದೇಶದಿಂದ ತೊಲಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ದೇಶದ ಜನಾಭಿಪ್ರಾಯ ಬಿಜೆಪಿಗೆ ಸಿಕ್ಕಿದೆ. ದೇಶದ ಒಳಿತಿಗೆ ಪ್ರಧಾನಿ ಬದಲಾಗಬೇಕು’ ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ದೇಶವನ್ನು ಒಬ್ಬರೇ ನಡೆಸಲು ಸಾಧ್ಯವಿಲ್ಲ. ಕೇಂದ್ರದ ಐವರು ಸಚಿವರ ಹೆಸರು ಜನರಿಗೆ ಗೊತ್ತಿಲ್ಲ. ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೀರೋ ಮಾಡಿವೆ. ದೀಪಾವಳಿಯಲ್ಲಿ ಸಿಡಿಸುವ ಪಟಾಕಿ ಕೂಡ ಚೀನಾದಿಂದ ಬರುತ್ತಿದೆ. ಹಾಗದರೆ ಮೇಕ್ ಇನ್ ಇಂಡಿಯಾ ಏನಾಯಿತು’ ಎಂದು ಪ್ರಶ್ನಿಸಿದರು.</p>.<p>‘ಕುಂಭಮೇಳದಲ್ಲಿ ನೀರು ಕಲುಷಿತ ಕಲುಷಿತಗೊಂಡಿರುವುದನ್ನು ವರದಿಗಳು ಖಚಿತಪಡಿಸಿವೆ. ಭಕ್ತರಿಗೆ ಕಲ್ಪಿಸಿದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡಲಾಗಿದೆ. ಶ್ರೀಮಂತರಿಗೆ ಲಕ್ಷಾಂತರ ರೂಪಾಯಿ ಟೆಂಟ್ಗಳಿವೆ. ಬಡವರು ಪುಣ್ಯ ಸ್ನಾನಕ್ಕೆ ಹಲವು ದಿನ ಕಾಯಬೇಕಿದೆ. ಕಾಲ್ತುಳಿತದಲ್ಲಿ ಮೃತಪಟ್ವರ ಲೆಕ್ಕವನ್ನೂ ಸರ್ಕಾರ ಸರಿಯಾಗಿ ತಿಳಿಸಲಿಲ್ಲ. ದೆಹಲಿಯ ಸಂಸತ್ ಭವನದಿಂದ 3 ಕಿ.ಮೀ ದೂರದ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಪ್ರಾಣ ಕಳೆದುಕೊಂಡರು. ಸೌಜನ್ಯಕ್ಕೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಲಿಲ್ಲ’ ಎಂದು ಕಿಡಿಕಾರಿದರು.</p>.<p>‘ಮುಡಾ’ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ಸಿಕ್ಕಿದೆ. ಇದು ನ್ಯಾಯಕ್ಕೆ ಸಂದ ಜಯ. ದೇಶದ ಏಕೈಕ ಹಿಂದುಳಿದ ಸಮುದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡಬೇಕು ಎಂಬ ಬಿಜೆಪಿ ಹುನ್ನಾರ ಸಫಲವಾಗಿಲ್ಲ. ‘ಮುಡಾ’ ಪ್ರಕರಣದಲ್ಲಿ ಕೇವಲ 14 ನಿವೇಶನಗಳ ಬಗ್ಗೆ ಮಾತ್ರ ಚರ್ಚೆ ಆಯಿತು. ಇನ್ನೂ ಬಾಕಿ ಇರುವ 110 ನಿವೇಶನಗಳ ಬಗ್ಗೆಯೂ ಚರ್ಚೆ ಆಗುವ ಅಗತ್ಯ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.ಸಿದ್ದರಾಮಯ್ಯರನ್ನ ಬಿಡಿ, ಅಲ್ಲಿ ಮೋದಿಯನ್ನೇ ಬದಲಾಯಿಸ್ತಿದಾರೆ: ಸಂತೋಷ್ ಲಾಡ್ ಕುಹಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>