ಸುದ್ದಿಗಾರರೊಂದಿಗೆ ಮಾತನಾಡಿ, ‘ನನ್ನ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಲಿಲ್ಲ ಎಂದರೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಊಟ ಸೇರುವುದಿಲ್ಲ, ನಿದ್ದೆ ಬರುವುದಿಲ್ಲ. ರಾಜರಿಂದ ದಾನ ಬಂದಿದ್ದ ಜಮೀನನ್ನು ನಾನು ಖಾಸಗಿ ಮಾಲೀಕರಿಂದ ಖರೀದಿಸಿದ್ದೇನೆ. ಕೆರೆ ಜಾಗ ಒತ್ತುವರಿ ಮಾಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು’ ಎಂದರು.