ಟೀಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಓರ್ವ ಹೆಣ್ಣಾಗಿ ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಕಿತ್ತೂರು ರಾಣಿ ಚನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೇ ಸಾಧನೆಯ ಉತ್ತುಂಗಕ್ಕೇರಿದವರು’ ಎಂದು ಕಾಲೆಳೆದಿದ್ದಾರೆ.