ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಸ್ಥಾನ ಗೆದ್ದರೆ ಸಿದ್ದರಾಮಯ್ಯಗೆ ಬಂಗಾರದ ಉಂಗುರ ತೊಡಿಸಿ ಮೆರವಣಿಗೆ ಮಾಡ್ತೀನಿ!

Last Updated 26 ನವೆಂಬರ್ 2019, 11:15 IST
ಅಕ್ಷರ ಗಾತ್ರ

ಅಥಣಿ: 'ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರಿಗೆ ಒಂದು ತೊಲ ಬಂಗಾರದ ಉಂಗುರ ತೊಡಿಸಿ, ರೇಷ್ಮೆ ಪೇಟ ಹಾಕಿ ಅಥಣಿ ಬಜಾರ್ ರಸ್ತೆಯಲ್ಲಿ ಮೆರವಣಿಗೆ ಮಾಡಿಸುತ್ತೇನೆ' ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, 'ಸಿದ್ದರಾಮಯ್ಯ ಜನತಾ ಪರಿವಾರ ಹಾಗೂ ಜನತಾದಳದಲ್ಲಿದ್ದಾಗ ಸುಳ್ಳು ಹೇಳುತ್ತಿರಲಿಲ್ಲ. ಕಾಂಗ್ರೆಸ್ ಸೇರ್ಪಡೆ ಬಳಿಕ ಬಹಳ ಸುಳ್ಳು ಹೇಳುತ್ತಿದ್ದಾರೆ' ಎಂದು ಟೀಕಿಸಿದರು.

ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ ಬಂದಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT