<p><strong>ಬೆಂಗಳೂರು</strong>: ‘ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಆ ಬಗ್ಗೆ ದಾಖಲೆಗಳಿದ್ದರೆ ವಿಧಾನಮಂಡಲದ ಅಧಿವೇಶನದಲ್ಲಿ ಸಲ್ಲಿಸಿ, ಚರ್ಚೆಗೆ ಮುಂದಾಗಲಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ ನಾಯಕರು ಯಾವುದೇ ದಾಖಲೆಗಳನ್ನು ಕೊಟ್ಟಿಲ್ಲ. ವಿರೋಧ ಪಕ್ಷಗಳು ಕೇವಲ ಆರೋಪಗಳಿಂದ ರಾಜಕೀಯ ಮಾಡುತ್ತಿವೆಯೇ ಹೊರತು, ಸಾಕ್ಷ್ಯಗಳನ್ನು ಒದಗಿಸುವುದಿಲ್ಲ’ ಎಂದು ಟೀಕಿಸಿದರು.</p>.<p>‘ಸಾವಿರಾರು ಕೋಟಿ ರೂಪಾಯಿ ಮೊತ್ತದ ಹಗರಣ ಆಗಿದೆ ಎಂದು ಯಾವುದೇ ದಾಖಲೆಗಳಿಲ್ಲದೆ ಆರೋಪಿಸುತ್ತಿರುವ ಬಿಜೆಪಿಯವರಿಂದ, ಈ ಹಿಂದೆ ಮಾಡಿದ್ದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ’ ಎಂದು ಕಿಡಿಕಾರಿದರು.</p>.<p>ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸಿಬಿಐಗೆ ಕೊಡಿ ಎಂದು ಹೇಳುವ ಮೊದಲು ರಾಜ್ಯದಲ್ಲಿ ನಡೆದ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿದರೆ ಅಗತ್ಯವಿರುವ ಸಿಬ್ಬಂದಿ ಸೇರಿದಂತೆ ಸಂಪನ್ಮೂಲಗಳನ್ನೂ ಕೊಡಬೇಕೆಂದು ಮುಖ್ಯ ಕಾರ್ಯದರ್ಶಿಗೆ ಈ ಹಿಂದೆ ಸಿಬಿಐ ಬರೆದಿದ್ದ ಪತ್ರವನ್ನು ಬಿಜೆಪಿಯವರು ನೋಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಆ ಬಗ್ಗೆ ದಾಖಲೆಗಳಿದ್ದರೆ ವಿಧಾನಮಂಡಲದ ಅಧಿವೇಶನದಲ್ಲಿ ಸಲ್ಲಿಸಿ, ಚರ್ಚೆಗೆ ಮುಂದಾಗಲಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಬಿಜೆಪಿ ನಾಯಕರು ಯಾವುದೇ ದಾಖಲೆಗಳನ್ನು ಕೊಟ್ಟಿಲ್ಲ. ವಿರೋಧ ಪಕ್ಷಗಳು ಕೇವಲ ಆರೋಪಗಳಿಂದ ರಾಜಕೀಯ ಮಾಡುತ್ತಿವೆಯೇ ಹೊರತು, ಸಾಕ್ಷ್ಯಗಳನ್ನು ಒದಗಿಸುವುದಿಲ್ಲ’ ಎಂದು ಟೀಕಿಸಿದರು.</p>.<p>‘ಸಾವಿರಾರು ಕೋಟಿ ರೂಪಾಯಿ ಮೊತ್ತದ ಹಗರಣ ಆಗಿದೆ ಎಂದು ಯಾವುದೇ ದಾಖಲೆಗಳಿಲ್ಲದೆ ಆರೋಪಿಸುತ್ತಿರುವ ಬಿಜೆಪಿಯವರಿಂದ, ಈ ಹಿಂದೆ ಮಾಡಿದ್ದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ’ ಎಂದು ಕಿಡಿಕಾರಿದರು.</p>.<p>ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಸಿಬಿಐಗೆ ಕೊಡಿ ಎಂದು ಹೇಳುವ ಮೊದಲು ರಾಜ್ಯದಲ್ಲಿ ನಡೆದ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ನೀಡಿದರೆ ಅಗತ್ಯವಿರುವ ಸಿಬ್ಬಂದಿ ಸೇರಿದಂತೆ ಸಂಪನ್ಮೂಲಗಳನ್ನೂ ಕೊಡಬೇಕೆಂದು ಮುಖ್ಯ ಕಾರ್ಯದರ್ಶಿಗೆ ಈ ಹಿಂದೆ ಸಿಬಿಐ ಬರೆದಿದ್ದ ಪತ್ರವನ್ನು ಬಿಜೆಪಿಯವರು ನೋಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>