ಈ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಶಾಂತ್ ಪ್ರಕಾಶ್, ‘ವಯಸ್ಸಾಗುವಿಕೆ ಅನಿವಾರ್ಯ ವಿಧಿ ಲಿಖಿತ ಎಂಬ ಭಾವನೆ ದಟ್ಟವಾಗಿದೆ. ವೃದ್ಧಾಪ್ಯದ ಸಂಕೀರ್ಣಗಳನ್ನು ಅಧ್ಯಯನ ಮಾಡುತ್ತಾ ಹೋದಂತೆ, ವೈವಿಧ್ಯ ಅಂಶಗಳು ಅದನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ವಿಶೇಷವಾಗಿ ಜೀವನಶೈಲಿ, ಸಂಸ್ಕೃತಿ, ವಂಶವಾಹಿ ಮತ್ತು ಪರಿಸರಗಳು ಕಾರಣವಾಗುತ್ತವೆ. ಭಾರತ ಅದ್ವಿತೀಯ ಜನಸಂಖ್ಯಾ ವೈವಿಧ್ಯತೆಯನ್ನು ಹೊಂದಿರುವ ದೇಶ. ವಯಸ್ಸಾಗುವಿಕೆಗೆ ಸಂಬಂಧಿಸಿದಂತೆ ಈಗ ನಡೆಯುತ್ತಿರುವ ಸಂಶೋಧನೆಗಳು ಏನೇನೂ ಸಾಲದು. ವೈವಿಧ್ಯ ಕ್ಷೇತ್ರಗಳ ತಜ್ಞರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.