<p><strong>ಬಾಗಲಕೋಟೆ: </strong>ಕಳ್ಳತನ, ಬ್ಯಾಂಕಿನಿಂದ ಹಣ ಒಯ್ಯುವ ಗ್ರಾಹಕರ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ಲೂಟಿ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಕಳ್ಳರ ತಂಡವನ್ನು ಇಳಕಲ್ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ₹43.50 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಐದು ಮೋಟಾರು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯಲ್ಲಿ ಆರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 38 ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಬೇಕಾಗಿದ್ದಾರೆ. ವಶಪಡಿಸಿಕೊಂಡ ಸ್ವತ್ತಿನಲ್ಲಿ ₹37.55 ಲಕ್ಷ ನಗದು ದೊರೆತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾಹಿತಿ ನೀಡಿದರು.</p>.<p>ಆಂಧ್ರಪ್ರದೇಶದ ಕುಪ್ಪಂ ಹಾಗೂ ತಮಿಳುನಾಡಿನ ಎಂಟು ಮಂದಿಯ ಈ ತಂಡ ಇಳಕಲ್ ಬಸ್ ನಿಲ್ದಾಣದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ ಅನುಮಾನಾಸ್ಪದ ಅಡ್ಡಾಡುವಾಗ ಗಸ್ತು ತಿರುಗುತ್ತಿದ್ದ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಇಳಕಲ್ನ ಗೌಳೇದಗುಡಿ ಬಳಿಯ ನಿವಾಸಿ ಮುಕುಂದ ತಿರುಪಾಳಿ ಅವರು ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ಹೊರಟಾಗ ಅಲ್ಲಿನ ಗೋರಬಾಳ ನಾಕಾದ ಹತ್ತಿರ ಇರುವ ಗೊಂಗಡಶೆಟ್ಟಿ ಕಲ್ಯಾಣಮಂಟಪದ ಹತ್ತಿರ ಗಮನ ಬೇರೆಡೆಗೆ ಸೆಳೆದು ₹1 ಲಕ್ಷ ಲೂಟಿ ಮಾಡಿ ಪರಾರಿಯಾಗಿದ್ದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯಪುರ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂಕೃತ್ಯ ನಡೆಸಿರುವುದು ಬಯಲಾಗಿದೆ.</p>.<p><strong>ಕೃತ್ಯ ನಡೆಸುವುದು ಹೇಗೆ?:</strong> ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು, ಅವರ ಸಮೀಪ ₹20, 50ರ ನೋಟುಗಳನ್ನು ಎಸೆಯುತ್ತಿದ್ದರು. ಅಲ್ಲಿ ಹಣ ಬಿದ್ದಿದೆ ನಿಮ್ಮದೇ ಎಂದು ಪ್ರಶ್ನಿಸುತ್ತಿದ್ದರು. ಆ ವೇಳೆ ಅತ್ತ ಗಮನ ಹರಿಸುತ್ತಿದ್ದಂತೆಯೇ ಕೈಯಲ್ಲಿನ ಬ್ಯಾಗು, ಹಣದ ಕಟ್ಟು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಕಾರಿನ ಗಾಜು ಒಡೆದು, ಸ್ಕೂಟರ್ನ ಸೀಟ್ನ ಲಾಕ್ ಮುರಿದು ಹಣ ಕಳವು ಮಾಡುತ್ತಿದ್ದರು ಎಂದು ಎಸ್ಪಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ, ಹುನಗುಂದ ಸಿಪಿಐ ಹೊಸಕೇರಪ್ಪ, ಇಳಕಲ್ ಪಿಎಸ್ಐ ಎಸ್.ಬಿ.ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಕಳ್ಳತನ, ಬ್ಯಾಂಕಿನಿಂದ ಹಣ ಒಯ್ಯುವ ಗ್ರಾಹಕರ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ಲೂಟಿ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಕಳ್ಳರ ತಂಡವನ್ನು ಇಳಕಲ್ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ₹43.50 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಐದು ಮೋಟಾರು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಬಾಗಲಕೋಟೆ ಜಿಲ್ಲೆಯಲ್ಲಿ ಆರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 38 ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಬೇಕಾಗಿದ್ದಾರೆ. ವಶಪಡಿಸಿಕೊಂಡ ಸ್ವತ್ತಿನಲ್ಲಿ ₹37.55 ಲಕ್ಷ ನಗದು ದೊರೆತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಮಾಹಿತಿ ನೀಡಿದರು.</p>.<p>ಆಂಧ್ರಪ್ರದೇಶದ ಕುಪ್ಪಂ ಹಾಗೂ ತಮಿಳುನಾಡಿನ ಎಂಟು ಮಂದಿಯ ಈ ತಂಡ ಇಳಕಲ್ ಬಸ್ ನಿಲ್ದಾಣದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ ಅನುಮಾನಾಸ್ಪದ ಅಡ್ಡಾಡುವಾಗ ಗಸ್ತು ತಿರುಗುತ್ತಿದ್ದ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಇಳಕಲ್ನ ಗೌಳೇದಗುಡಿ ಬಳಿಯ ನಿವಾಸಿ ಮುಕುಂದ ತಿರುಪಾಳಿ ಅವರು ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆಗೆ ಹೊರಟಾಗ ಅಲ್ಲಿನ ಗೋರಬಾಳ ನಾಕಾದ ಹತ್ತಿರ ಇರುವ ಗೊಂಗಡಶೆಟ್ಟಿ ಕಲ್ಯಾಣಮಂಟಪದ ಹತ್ತಿರ ಗಮನ ಬೇರೆಡೆಗೆ ಸೆಳೆದು ₹1 ಲಕ್ಷ ಲೂಟಿ ಮಾಡಿ ಪರಾರಿಯಾಗಿದ್ದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯಪುರ, ಮಂಡ್ಯ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂಕೃತ್ಯ ನಡೆಸಿರುವುದು ಬಯಲಾಗಿದೆ.</p>.<p><strong>ಕೃತ್ಯ ನಡೆಸುವುದು ಹೇಗೆ?:</strong> ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು, ಅವರ ಸಮೀಪ ₹20, 50ರ ನೋಟುಗಳನ್ನು ಎಸೆಯುತ್ತಿದ್ದರು. ಅಲ್ಲಿ ಹಣ ಬಿದ್ದಿದೆ ನಿಮ್ಮದೇ ಎಂದು ಪ್ರಶ್ನಿಸುತ್ತಿದ್ದರು. ಆ ವೇಳೆ ಅತ್ತ ಗಮನ ಹರಿಸುತ್ತಿದ್ದಂತೆಯೇ ಕೈಯಲ್ಲಿನ ಬ್ಯಾಗು, ಹಣದ ಕಟ್ಟು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಕಾರಿನ ಗಾಜು ಒಡೆದು, ಸ್ಕೂಟರ್ನ ಸೀಟ್ನ ಲಾಕ್ ಮುರಿದು ಹಣ ಕಳವು ಮಾಡುತ್ತಿದ್ದರು ಎಂದು ಎಸ್ಪಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ, ಹುನಗುಂದ ಸಿಪಿಐ ಹೊಸಕೇರಪ್ಪ, ಇಳಕಲ್ ಪಿಎಸ್ಐ ಎಸ್.ಬಿ.ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>