ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಗಣಿ ಕಂಪನಿಗೆ ಅದಿರು ಸಾಗಣೆಯ ಅಕ್ರಮ ಪರವಾನಗಿ ನೀಡಿದ್ದ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಎಂ.ಇ. ಶಿವಲಿಂಗಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
‘ಆದೇಶ ನೀಡುವಲ್ಲಿ ಹೈಕೋರ್ಟ್ ಪ್ರಮಾದ ಎಸಗಿದೆ ಅನ್ನಿಸುತ್ತಿಲ್ಲ’ ಎಂದು ತಿಳಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠವು, ಐಎಎಸ್ ಅಧಿಕಾರಿಯಾಗಿದ್ದ ಶಿವಲಿಂಗಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು.