<p><strong>ಬೆಂಗಳೂರು:</strong> ₹1 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಗಣಿಗಾರಿಕೆ ಮಾಡಿ, ಸಾಗಿಸಿದ ರಾಜಕಾರಣಿಗಳು ಮತ್ತು ಕಂಪನಿಗಳ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ, ಬಿ.ಎಲ್.ಶಂಕರ್, ಎಚ್.ಎಂ.ರೇವಣ್ಣ, ರಾಣಿ ಸತೀಶ್, ಜಯಪ್ರಕಾಶ್ ಹೆಗ್ಡೆ, ವಿ.ಆರ್.ಸುದರ್ಶನ್, ಎಲ್.ಹನುಮಂತಯ್ಯ ಅವರಿದ್ದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದೆ.</p>.<p>‘ಬಳ್ಳಾರಿ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣದ ಅದಿರು ಇರುವುದನ್ನು ಕಂಡುಕೊಂಡಿದ್ದ ಕೆಲವರು 2000ನೇ ಇಸವಿಯಿಂದಲೂ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ನ್ಯಾಯಮೂರ್ತಿ ಯು.ಎಲ್.ಭಟ್ ನೇತೃತ್ವದ ಆಯೋಗವು, ವಿ.ಎಸ್.ಉಗ್ರಪ್ಪ ಅಧ್ಯಕ್ಷತೆಯ ಸತ್ಯಶೋಧನಾ ಸಮಿತಿಯು ಈ ಅಕ್ರಮದ ಬಗ್ಗೆ ಗಮನ ಸೆಳೆದಿದ್ದವು. ಆದರೆ ಅಂದಿನ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ’ ಎಂದು ಪತ್ರದಲ್ಲಿ ವಿವರಿಸಿದೆ.</p>.<p>‘ಹತ್ತಾರು ಸಾವಿರ ಕೋಟಿಯಷ್ಟು ಅದಿರನ್ನು ಕದ್ದು ಸಾಗಿಸಿರುವುದು ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ನೇತ್ರತ್ವದಲ್ಲಿ ನಡೆದ ತನಿಖೆಯಲ್ಲಿ ಪತ್ತೆಯಾಗಿತ್ತು. ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ರಚಿಸಲಾದ ಸಂಪುಟ ಉಪ ಸಮಿತಿಯು ಈಚೆಗೆ ವರದಿ ನೀಡಿದ್ದು, ₹1 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಅದಿರನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬುದನ್ನು ಪತ್ತೆ ಮಾಡಿದೆ’ ಎಂದಿದೆ.</p>.<p>‘ಇಷ್ಟು ದೊಡ್ಡ ಮಟ್ಟದಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದವರು ಆರಾಮವಾಗಿ ಇದ್ದಾರೆ. ಅವರ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಂಡು, ರಾಜ್ಯಕ್ಕಾಗಿರುವ ನಷ್ಟವನ್ನು ವಸೂಲಿ ಮಾಡಬೇಕು’ ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ₹1 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಗಣಿಗಾರಿಕೆ ಮಾಡಿ, ಸಾಗಿಸಿದ ರಾಜಕಾರಣಿಗಳು ಮತ್ತು ಕಂಪನಿಗಳ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ, ಬಿ.ಎಲ್.ಶಂಕರ್, ಎಚ್.ಎಂ.ರೇವಣ್ಣ, ರಾಣಿ ಸತೀಶ್, ಜಯಪ್ರಕಾಶ್ ಹೆಗ್ಡೆ, ವಿ.ಆರ್.ಸುದರ್ಶನ್, ಎಲ್.ಹನುಮಂತಯ್ಯ ಅವರಿದ್ದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದೆ.</p>.<p>‘ಬಳ್ಳಾರಿ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣದ ಅದಿರು ಇರುವುದನ್ನು ಕಂಡುಕೊಂಡಿದ್ದ ಕೆಲವರು 2000ನೇ ಇಸವಿಯಿಂದಲೂ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ನ್ಯಾಯಮೂರ್ತಿ ಯು.ಎಲ್.ಭಟ್ ನೇತೃತ್ವದ ಆಯೋಗವು, ವಿ.ಎಸ್.ಉಗ್ರಪ್ಪ ಅಧ್ಯಕ್ಷತೆಯ ಸತ್ಯಶೋಧನಾ ಸಮಿತಿಯು ಈ ಅಕ್ರಮದ ಬಗ್ಗೆ ಗಮನ ಸೆಳೆದಿದ್ದವು. ಆದರೆ ಅಂದಿನ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ’ ಎಂದು ಪತ್ರದಲ್ಲಿ ವಿವರಿಸಿದೆ.</p>.<p>‘ಹತ್ತಾರು ಸಾವಿರ ಕೋಟಿಯಷ್ಟು ಅದಿರನ್ನು ಕದ್ದು ಸಾಗಿಸಿರುವುದು ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ನೇತ್ರತ್ವದಲ್ಲಿ ನಡೆದ ತನಿಖೆಯಲ್ಲಿ ಪತ್ತೆಯಾಗಿತ್ತು. ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ರಚಿಸಲಾದ ಸಂಪುಟ ಉಪ ಸಮಿತಿಯು ಈಚೆಗೆ ವರದಿ ನೀಡಿದ್ದು, ₹1 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಅದಿರನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬುದನ್ನು ಪತ್ತೆ ಮಾಡಿದೆ’ ಎಂದಿದೆ.</p>.<p>‘ಇಷ್ಟು ದೊಡ್ಡ ಮಟ್ಟದಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದವರು ಆರಾಮವಾಗಿ ಇದ್ದಾರೆ. ಅವರ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಂಡು, ರಾಜ್ಯಕ್ಕಾಗಿರುವ ನಷ್ಟವನ್ನು ವಸೂಲಿ ಮಾಡಬೇಕು’ ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>