ಬೆಂಗಳೂರು: ‘ಬಿಜೆಪಿ ಅಧಿಕಾರದ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಹಣ ಅಕ್ರಮವಾಗಿ ಹಣ ವರ್ಗಾವಣೆಯ ಕೆಲವು ಪ್ರಕರಣಗಳ ಬಗ್ಗೆ ಗೌಪ್ಯವಾಗಿ ಲೋಕಾಯುಕ್ತ ಸೇರಿದಂತೆ ಇತರ ತನಿಖೆಗಳು ನಡೆದಿವೆ. ಕೆಲವು ಪ್ರಕರಣಗಳಲ್ಲಿ ಹಣ ಮರಳಿ ಬಂದಿದೆ’ ಎಂದರು.
‘ಗಮನಕ್ಕೆ ಬರುವ ಈ ರೀತಿಯ ಎಲ್ಲ ಪ್ರಕರಣಗಳನ್ನು ಪರಿಶೀಲಿಸಲಾಗುವುದು. ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ಮೇಲೆ ಮಾಡಿರುವ ಆರೋಪವನ್ನೂ ಪರಿಶೀಲಿಸುತ್ತೇವೆ’ ಎಂದರು.