‘ವಿಭಾಗದಲ್ಲಿರುವ ಎರಡು ಹುದ್ದೆಗಳಲ್ಲಿ ಒಂದು ಸಾಮಾನ್ಯ ವರ್ಗಕ್ಕೆ ಮತ್ತು ಇನ್ನೊಂದು ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಸಾಮಾನ್ಯ ವರ್ಗದಲ್ಲಿದ್ದ ನಾನು ಸಂದರ್ಶನ ಹೊರತುಪಡಿಸಿ ಮಿಕ್ಕೆಲ್ಲ ವಿಷಯಗಳಲ್ಲಿ ಅತ್ಯಧಿಕ ಅಂಕ ಪಡೆದಿದ್ದೆ. ಆದರೆ ನನಗಿಂತ ಕಡಿಮೆ ಅಂಕ ಪಡೆದಿದ್ದ ಪರಿಶಿಷ್ಟ ಜಾತಿಯ ಎಂ.ಸಿದ್ದೇಶ್ವರಿ ಅವರಿಗೆ ನೇಮಕ ಪತ್ರ ನೀಡಲಾಗಿದೆ. ಸಂದರ್ಶನದಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದ್ದು, ಆ ಪ್ರಕ್ರಿಯೆಯ ವಿಡಿಯೊ ದೃಶ್ಯಾವಳಿಗಳನ್ನು ಬಹಿರಂಗಪಡಿಸಬೇಕು’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.