<p><strong>ಬೆಂಗಳೂರು:</strong> ‘ತ್ಯಾಗರಾಜನಗರದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜಿಎಸ್ ಬ್ಲೂಮ್ಫೀಲ್ಡ್ ಶಾಲೆ ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಬೇಕು’ ಎಂದು ಕೋರಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ (ಪಿಐಎಲ್) ಪರಿವರ್ತಿಸಿದೆ.</p>.<p>‘ನಕ್ಷೆ ಮಂಜೂರಾತಿ ಇಲ್ಲದೆ ಹಾಗೂ ಪ್ರವಾಹದ ನೀರು ಹರಿಯುವ ಸ್ಥಳದಲ್ಲಿ ಶಾಲಾ ಕಟ್ಟಡ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಡವಲು ಬಿಬಿಎಂಪಿ ಆದೇಶಿಸಿದೆ. ಈ ಆದೇಶ ಯಾವಾಗ ಬೇಕಾದರೂ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಶಾಲೆಯನ್ನು ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ವಕೀಲೆ ಸುಧಾ ಕಾಟ್ವಾ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕದಸದಸ್ಯ ನ್ಯಾಯಪೀಠ, ‘ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿಯಾಗಿ ಪರಿವರ್ತಿಸುವುದು ಸೂಕ್ತ. ಅದರಂತೆ ಅರ್ಜಿಯನ್ನು ಸಂಬಂಧಪಟ್ಟ ವಿಭಾಗೀಯ ಪೀಠದ ಮುಂದೆ ಹೆಚ್ಚಿನ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ರಿಜಿಸ್ಟ್ರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ತ್ಯಾಗರಾಜನಗರದಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜಿಎಸ್ ಬ್ಲೂಮ್ಫೀಲ್ಡ್ ಶಾಲೆ ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಬೇಕು’ ಎಂದು ಕೋರಿರುವ ರಿಟ್ ಅರ್ಜಿಯನ್ನು ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ (ಪಿಐಎಲ್) ಪರಿವರ್ತಿಸಿದೆ.</p>.<p>‘ನಕ್ಷೆ ಮಂಜೂರಾತಿ ಇಲ್ಲದೆ ಹಾಗೂ ಪ್ರವಾಹದ ನೀರು ಹರಿಯುವ ಸ್ಥಳದಲ್ಲಿ ಶಾಲಾ ಕಟ್ಟಡ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಡವಲು ಬಿಬಿಎಂಪಿ ಆದೇಶಿಸಿದೆ. ಈ ಆದೇಶ ಯಾವಾಗ ಬೇಕಾದರೂ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಶಾಲೆಯನ್ನು ಮುಚ್ಚಲು ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ವಕೀಲೆ ಸುಧಾ ಕಾಟ್ವಾ ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕದಸದಸ್ಯ ನ್ಯಾಯಪೀಠ, ‘ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿಯಾಗಿ ಪರಿವರ್ತಿಸುವುದು ಸೂಕ್ತ. ಅದರಂತೆ ಅರ್ಜಿಯನ್ನು ಸಂಬಂಧಪಟ್ಟ ವಿಭಾಗೀಯ ಪೀಠದ ಮುಂದೆ ಹೆಚ್ಚಿನ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ರಿಜಿಸ್ಟ್ರಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>