<p><strong>ಬೆಂಗಳೂರು: </strong>‘ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆಯನ್ನು ವರ್ಷದ ಮುನ್ನವೇ ಲೆಕ್ಕ ಹಾಕಿ, ಹುದ್ದೆ ಖಾಲಿಯಾಗುತ್ತಿದ್ದಂತೆ ಬದಲಿ ನೇಮಕ ಮಾಡುವ ವ್ಯವಸ್ಥೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಶಿಕ್ಷಣ ಕ್ಷೇತ್ರಕ್ಕೆ ಈ ವರ್ಷದ ಬಜೆಟ್ನಲ್ಲಿ ₹25 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಸುಮಾರು ₹19 ಸಾವಿರ ಕೋಟಿ ಶಿಕ್ಷಕರು ಮತ್ತು ಸಿಬ್ಬಂದಿ ವೇತನಕ್ಕೆ ಖರ್ಚಾಗುತ್ತದೆ. ಉಳಿದ ಅನುದಾನದಲ್ಲಿ ₹5 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಈ ಮೊತ್ತ ದಲ್ಲಿ 23 ಸಾವಿರ ಶಾಲೆಗಳನ್ನು ಹೊಸದಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 8,101 ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ ಇಷ್ಟೊಂದು ಶಾಲೆಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ’ ಎಂದು ವಿವರಿಸಿದರು.</p>.<p>‘ಎಲ್ಲ ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಮತ್ತು ಗಂಡಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ವರ್ಷದ ಆಗಸ್ಟ್ 15ರ ಒಳಗೆ ಎಲ್ಲ ಸರ್ಕಾರಿ ಶಾಲೆಗಳಲ್ಲಿಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಯಾವುದೇ ಪರಿಶೀಲನೆ ಇಲ್ಲದೆ ಹೊಸ ಶಾಲೆಗಳ ಸ್ಥಾಪನೆಗೆ ನಿರಾಕ್ಷೇಪಣಾ ಪತ್ರ ನೀಡುತ್ತಿರುವ ಪ್ರಕರಣಗಳನ್ನು ಗಮನಿಸಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆಯನ್ನು ವರ್ಷದ ಮುನ್ನವೇ ಲೆಕ್ಕ ಹಾಕಿ, ಹುದ್ದೆ ಖಾಲಿಯಾಗುತ್ತಿದ್ದಂತೆ ಬದಲಿ ನೇಮಕ ಮಾಡುವ ವ್ಯವಸ್ಥೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಶಿಕ್ಷಣ ಕ್ಷೇತ್ರಕ್ಕೆ ಈ ವರ್ಷದ ಬಜೆಟ್ನಲ್ಲಿ ₹25 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಸುಮಾರು ₹19 ಸಾವಿರ ಕೋಟಿ ಶಿಕ್ಷಕರು ಮತ್ತು ಸಿಬ್ಬಂದಿ ವೇತನಕ್ಕೆ ಖರ್ಚಾಗುತ್ತದೆ. ಉಳಿದ ಅನುದಾನದಲ್ಲಿ ₹5 ಸಾವಿರ ಕೋಟಿ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿದೆ. ಈ ಮೊತ್ತ ದಲ್ಲಿ 23 ಸಾವಿರ ಶಾಲೆಗಳನ್ನು ಹೊಸದಾಗಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 8,101 ಶಾಲೆಗಳ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ ಇಷ್ಟೊಂದು ಶಾಲೆಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ’ ಎಂದು ವಿವರಿಸಿದರು.</p>.<p>‘ಎಲ್ಲ ಸರ್ಕಾರಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಮತ್ತು ಗಂಡಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ವರ್ಷದ ಆಗಸ್ಟ್ 15ರ ಒಳಗೆ ಎಲ್ಲ ಸರ್ಕಾರಿ ಶಾಲೆಗಳಲ್ಲಿಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>‘ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಯಾವುದೇ ಪರಿಶೀಲನೆ ಇಲ್ಲದೆ ಹೊಸ ಶಾಲೆಗಳ ಸ್ಥಾಪನೆಗೆ ನಿರಾಕ್ಷೇಪಣಾ ಪತ್ರ ನೀಡುತ್ತಿರುವ ಪ್ರಕರಣಗಳನ್ನು ಗಮನಿಸಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>