‘ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದ ನುಸುಳುಕೋರರು ಕೊಡಗಿನಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂಬ ಆರೋಪದ ಮೇರೆಗೆ ಜ. 23ರಂದು ಪರಿಶೀಲನಾ ಆಂದೋಲನ ನಡೆದಿತ್ತು. ಹೊರ ರಾಜ್ಯದ ಕಾರ್ಮಿಕರ ಆಧಾರ್ ಕಾರ್ಡ್, ಪಾನ್ ಕಾರ್ಡ್ಗಳ ಪರಿಶೀಲನೆ ನಡೆದಿತ್ತು. ಹೊರ ರಾಜ್ಯದ ಕಾರ್ಮಿಕರ ದಾಖಲೆ ಪರಿಶೀಲಿಸುವ ಮೂಲಕ ಅವರ ಹಕ್ಕು ಕಸಿದುಕೊಳ್ಳಲಾಗಿದೆ ಎಂದು ಹಲವು ಕಾರ್ಮಿಕ ಸಂಘಟನೆಗಳು ಆಕ್ಷೇಪಿಸಿದ್ದವು.