ದಕ್ಷಿಣ ಕನ್ನಡ ಜಿಲ್ಲೆ ಸಾರಿಗೆ ಇಲಾಖೆಯ ನೋಂದಣಿ ಸಂಖ್ಯೆ ಹೊಂದಿದ್ದ ಕಾರಿನಲ್ಲಿ ಬಂದಿದ್ದ ಭಕ್ತರು ಮತ್ತು ಪ್ರವಾಸಿಗರ ಮೇಲೆ ಏಕಾಏಕಿ ಎರಗಿದ ಅನೈತಿಕ ಪೊಲೀಸರ ಗುಂಪು ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿದೆ. ಕಾರಿನ ಕೀ ಕಿತ್ತುಕೊಂಡು ಯುವಕ–ಯುವತಿಯರ ಜತೆ ಅಸಭ್ಯವಾಗಿ ವರ್ತಿಸಿದೆ. ಇದರಿಂದ ಹೆದರಿದ ಪ್ರವಾಸಿಗರು ತಮ್ಮನ್ನು ಬಿಟ್ಟುಬಿಡುವಂತೆ ಗೋಗರೆದ ಮೇಲೆ ಗುಂಪು ವಾಪಸಾಯಿತು ಎನ್ನಲಾಗಿದೆ.