‘ಹಿಂದೆ ಬಿಜೆಪಿಯವರು ಕಪ್ಪುಹಣ ವಾಪಸ್ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕುತ್ತೇವೆ ಎಂದಿದ್ದರು. ಯಾರಿಗಾದರೂ ಹಾಕಿದ್ದಾರೆಯೇ. ಅವರು ಹೇಳಿಯೂ ಮಾಡಲಿಲ್ಲ. ಆದರೆ, ನಾವು ಹೇಳಿದಂತೆ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇವುಗಳ ಪ್ರಯೋಜನ ಪಡೆದಿರುವ ಜನ ಚುನಾವಣೆಯಲ್ಲಿ ಶಕ್ತಿ ತುಂಬಿದರೆ ನಮಗೆ ಸ್ಪೂರ್ತಿ ಬರುತ್ತದೆ. ಮತ್ತಷ್ಟು ಅಭಿವದ್ಧಿ ಕೆಲಸಗಳನ್ನು ಮಾಡುತ್ತೇವೆ’ ಎಂದು ತಿಳಿಸಿದರು.
‘ರಾಜ್ಯದ ಜನ ಮಂತ್ರಾಕ್ಷತೆಗೆ ಮತ ಹಾಕಿದ್ದಾರೊ ಅಥವಾ ಗ್ಯಾರಂಟಿಗೆ ಹಾಕಿದ್ದಾರೊ ಎಂಬುದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಾಗ ಗೊತ್ತಾಗಲಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಗುತ್ತಿದ್ದಂತೆ, ಭಯಗೊಂಡ ಬಿಜೆಪಿಯವರು ಅಪೂರ್ಣ ರಾಮಮಂದಿರವನ್ನು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.