ಸಿದ್ದರಾಮಯ್ಯ ತಾವು ಸತ್ಯ ಹರಿಶ್ಚಂದ್ರ ಆಗಬೇಕಿದ್ದರೆ ಗೌರವದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸಾರ್ವಜನಿಕರಿಗೆ ತಪ್ಪು ಮಾಹಿತಿ ಕೊಡುವ ಅಗತ್ಯವಿಲ್ಲ
ಡಿ.ವಿ.ಸದಾನಂದಗೌಡ ಮಾಜಿ ಮುಖ್ಯಮಂತ್ರಿ
ಹಗರಣ ಮಾಡಿ ದಾಖಲೆ ಸಮೇತ ಸಿಕ್ಕಿಬಿದ್ದಿದ್ದೀರಿ. ಅದಕ್ಕಾಗಿ ನಗರಾಭಿವೃದ್ಧಿ ಸಚಿವರು ಮೈಸೂರಿಗೆ ಹೋಗಿ ಕಡತಗಳನ್ನು ತಮ್ಮೊಂದಿಗೆ ಹೊತ್ತೊಯ್ದಿದ್ದಾರೆ. ದಾಖಲೆಗಳನ್ನು ನಾಶ ಮಾಡಿರುವ ಸಾಧ್ಯತೆ ಇದೆ.
- ಆರಗ ಜ್ಞಾನೇಂದ್ರ ಶಾಸಕ
ಮುಖ್ಯಮಂತ್ರಿಗಳೇ ಬ್ಲ್ಯಾಕ್ಮೇಲ್ ರಾಜಕಾರಣ ಬಿಡಿ. ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ ತಪ್ಪೇ ಮಾಡಿಲ್ಲ ಎಂಬುದು ಸಾಬೀತಾದರೆ ಮತ್ತೆ ಮುಖ್ಯಮಂತ್ರಿ ಆಗಬಹುದು
ಸಿ.ಟಿ.ರವಿ ವಿಧಾನಪರಿಷತ್ ಸದಸ್ಯ.
ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೆ ಎನ್ಡಿಎ ಅಂಗ ಪಕ್ಷಗಳಾದ ನಾವು ಹೋರಾಟ ಮಾಡಲಿದ್ದೇವೆ. ಅಹಿಂದದಲ್ಲಿ ‘ದ’ ಅಕ್ಷರವನ್ನು ನುಂಗಿ ಹಾಕಿದ್ದಾರೆ. ಇನ್ನೆರಡು ಅಕ್ಷರಗಳನ್ನು ಯಾವತ್ತು ನುಂಗುತ್ತಾರೋ ಗೊತ್ತಿಲ್ಲ
ಕೃಷ್ಣಾರೆಡ್ಡಿ ಜೆಡಿಎಸ್ ಮುಖಂಡ
ಜೆಡಿಎಸ್ ಪ್ರಾಡಕ್ಟ್ ಆಗಿದ್ದ ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿ ಇದ್ದಾಗ ಭ್ರಷ್ಟಾಚಾರ ಮಾಡಲು ಅವಕಾಶ ಕೊಟ್ಟಿರಲಿಲ್ಲ. ಅವರ ಸ್ಮರಣ ಶಕ್ತಿ ಕಡಿಮೆ ಆಗಿದೆ. ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು.