<p><strong>ಬೆಂಗಳೂರು</strong>: ‘ರಾಜ್ಯ ಸರ್ಕಾರ ನೀತಿಗಳನ್ನು ರೂಪಿಸುವಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ಐಸೆಕ್) ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬುಧವಾರ ನಡೆದ ಐಸೆಕ್ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಡತನವನ್ನು ಕಡಿಮೆ ಮಾಡಲು ಐಸೆಕ್ ನೀಡಿರುವ ಕೊಡುಗೆ ಅಪಾರ. ಕಳೆದ 50 ವರ್ಷಗಳಲ್ಲಿ ಸಂಸ್ಥೆಯು 934 ಪ್ರಾಜೆಕ್ಟ್ಗಳನ್ನು ಪೂರ್ಣಗೊಳಿಸಿರುವುದು ಶ್ಲಾಘನೀಯ’ ಎಂದರು.</p>.<p>ಸಂಸ್ಥೆ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಕೃಷಿ, ಶಿಕ್ಷಣ, ಆರ್ಥಿಕ ಬೆಳವಣಿಗೆ, ನಗರೀಕರಣ, ವಿಕೇಂದ್ರೀಕರಣ, ರಾಜ್ಯಶಾಸ್ತ್ರ ಮತ್ತು ಜನಸಂಖ್ಯೆ ವಿಷಯದ ಕುರಿತು ಮಹತ್ವದ ಸಂಶೋಧನಾ ಕಾರ್ಯಗಳನ್ನು ಸಂಸ್ಥೆ ಕೈಗೊಂಡಿದೆ. 237 ಪುಸ್ತಕಗಳು ಮತ್ತು ಸುಮಾರು ಎರಡು ಸಾವಿರ ಲೇಖನ<br />ಗಳನ್ನು ಸಂಸ್ಥೆಯ ಪ್ರಾಧ್ಯಾಪಕರು ಪ್ರಕಟಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಪ್ರೊ ಸುಖದೇವ್ ತೋರಾಟ್ ಮಾತನಾಡಿ, ‘ಪ್ರೊ. ವಿಕೆಆರ್ವಿ ರಾವ್ ಅವರು ಐಸೆಕ್ ಸ್ಥಾಪಿಸಲು ಮೂಲ ಕಾರಣರು. ತಮ್ಮ ಮನೆಯಲ್ಲಿನ ಮೂರು ಕೊಠಡಿಗಳಲ್ಲಿ ಈ ಸಂಸ್ಥೆಯನ್ನು ಆರಂಭಿಸಿದ್ದರು. ಬಾಡಿಗೆ ಕಟ್ಟಡದಲ್ಲಿಯೂ ಕೆಲ ದಿನಗಳ ಕಾಲ ಸಂಸ್ಥೆ ನಡೆಯಿತು. ಬಳಿಕ, ಸುಂದರವಾದ ಸ್ಥಳದಲ್ಲಿ ಸಂಸ್ಥೆ ಆರಂಭವಾಯಿತು’ ಎಂದು ವಿವರಿಸಿದರು.</p>.<p>‘ಈ ಸಂಸ್ಥೆಯನ್ನು ರಾಜ್ಯ ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯ ಅಥವಾ ಡೀಮ್ಡ್ ಸಾರ್ವಜನಿಕ ರಾಜ್ಯ ವಿಶ್ವವಿದ್ಯಾಲಯ ಅಥವಾ ಐಐಟಿ ಮಾದರಿಯಲ್ಲಿ ರಾಷ್ಟ್ರೀಯ ಮಹತ್ವದ ಸಂಸ್ಥೆಯನ್ನಾಗಿ ಘೋಷಿಸಬೇಕು’ ಎಂದು ಅವರು ಕೋರಿದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ‘ಐಸೆಕ್ ಸಂಸ್ಥೆಯ ಶೈಕ್ಷಣಿಕ ವಲಯದಲ್ಲಿ ಅತ್ಯು<br />ತ್ತಮ ಸಂಶೋಧನೆಗಳನ್ನು ಕೈಗೊಂಡಿದೆ’ ಎಂದು ಶ್ಲಾಘಿಸಿದರು. ಐಸೆಕ್ ನಿರ್ದೇಶಕ ಪ್ರೊ. ಡಿ. ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯ ಸರ್ಕಾರ ನೀತಿಗಳನ್ನು ರೂಪಿಸುವಲ್ಲಿ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ (ಐಸೆಕ್) ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಬುಧವಾರ ನಡೆದ ಐಸೆಕ್ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಡತನವನ್ನು ಕಡಿಮೆ ಮಾಡಲು ಐಸೆಕ್ ನೀಡಿರುವ ಕೊಡುಗೆ ಅಪಾರ. ಕಳೆದ 50 ವರ್ಷಗಳಲ್ಲಿ ಸಂಸ್ಥೆಯು 934 ಪ್ರಾಜೆಕ್ಟ್ಗಳನ್ನು ಪೂರ್ಣಗೊಳಿಸಿರುವುದು ಶ್ಲಾಘನೀಯ’ ಎಂದರು.</p>.<p>ಸಂಸ್ಥೆ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಕೃಷಿ, ಶಿಕ್ಷಣ, ಆರ್ಥಿಕ ಬೆಳವಣಿಗೆ, ನಗರೀಕರಣ, ವಿಕೇಂದ್ರೀಕರಣ, ರಾಜ್ಯಶಾಸ್ತ್ರ ಮತ್ತು ಜನಸಂಖ್ಯೆ ವಿಷಯದ ಕುರಿತು ಮಹತ್ವದ ಸಂಶೋಧನಾ ಕಾರ್ಯಗಳನ್ನು ಸಂಸ್ಥೆ ಕೈಗೊಂಡಿದೆ. 237 ಪುಸ್ತಕಗಳು ಮತ್ತು ಸುಮಾರು ಎರಡು ಸಾವಿರ ಲೇಖನ<br />ಗಳನ್ನು ಸಂಸ್ಥೆಯ ಪ್ರಾಧ್ಯಾಪಕರು ಪ್ರಕಟಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಂಸ್ಥೆಯ ಅಧ್ಯಕ್ಷ ಪ್ರೊ ಸುಖದೇವ್ ತೋರಾಟ್ ಮಾತನಾಡಿ, ‘ಪ್ರೊ. ವಿಕೆಆರ್ವಿ ರಾವ್ ಅವರು ಐಸೆಕ್ ಸ್ಥಾಪಿಸಲು ಮೂಲ ಕಾರಣರು. ತಮ್ಮ ಮನೆಯಲ್ಲಿನ ಮೂರು ಕೊಠಡಿಗಳಲ್ಲಿ ಈ ಸಂಸ್ಥೆಯನ್ನು ಆರಂಭಿಸಿದ್ದರು. ಬಾಡಿಗೆ ಕಟ್ಟಡದಲ್ಲಿಯೂ ಕೆಲ ದಿನಗಳ ಕಾಲ ಸಂಸ್ಥೆ ನಡೆಯಿತು. ಬಳಿಕ, ಸುಂದರವಾದ ಸ್ಥಳದಲ್ಲಿ ಸಂಸ್ಥೆ ಆರಂಭವಾಯಿತು’ ಎಂದು ವಿವರಿಸಿದರು.</p>.<p>‘ಈ ಸಂಸ್ಥೆಯನ್ನು ರಾಜ್ಯ ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯ ಅಥವಾ ಡೀಮ್ಡ್ ಸಾರ್ವಜನಿಕ ರಾಜ್ಯ ವಿಶ್ವವಿದ್ಯಾಲಯ ಅಥವಾ ಐಐಟಿ ಮಾದರಿಯಲ್ಲಿ ರಾಷ್ಟ್ರೀಯ ಮಹತ್ವದ ಸಂಸ್ಥೆಯನ್ನಾಗಿ ಘೋಷಿಸಬೇಕು’ ಎಂದು ಅವರು ಕೋರಿದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ‘ಐಸೆಕ್ ಸಂಸ್ಥೆಯ ಶೈಕ್ಷಣಿಕ ವಲಯದಲ್ಲಿ ಅತ್ಯು<br />ತ್ತಮ ಸಂಶೋಧನೆಗಳನ್ನು ಕೈಗೊಂಡಿದೆ’ ಎಂದು ಶ್ಲಾಘಿಸಿದರು. ಐಸೆಕ್ ನಿರ್ದೇಶಕ ಪ್ರೊ. ಡಿ. ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>