<p><strong>ಬೆಂಗಳೂರು</strong>: ದೆಹಲಿ ಕರ್ನಾಟಕದ ಭವನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್. ಆಂಜನೇಯ ಅವರು ದರ್ಪದಿಂದ ವರ್ತಿಸುತ್ತಿದ್ದು, ಸಿಬ್ಬಂದಿಯನ್ನು ಅಗೌರವದಿಂದ ಕಾಣುತ್ತಿದ್ದಾರೆ ಎಂದು ಆರೋಪಿ ಮಹಿಳಾ ಸಿಬ್ಬಂದಿಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.</p><p>ಕರ್ನಾಟಕ ಭವನದಲ್ಲಿ ಉಪ ಸಮನ್ವಯಾಧಿಕಾರಿ ಮತ್ತು ಲೆಕ್ಕಧಾಧಿಕರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೂರುದಾರೆ ಕುಸುಮಾ ಪಿ, ನಂದರಗಿ, ಮಹಿಳಾ ನೌಕರರು ಅಸುರಕ್ಷಿತ ವಾತಾವರಣದಲ್ಲಿ ಕೆಲಸ ನಿರ್ವಹಿಸುವ ಪ್ರಸಂಗ ಬಂದಿರುವುದು ವಿಷಾದನೀಯ ಎಂದು ಹೇಳಿದ್ದಾರೆ.</p><p><strong>ದೂರಿನಲ್ಲಿ ಏನಿದೆ?</strong></p><p>ಹೆಚ್. ಆಂಜನೇಯ ಅವರು ಪ್ರಸ್ತುತ ಕರ್ನಾಟಕ ಭವನದಲ್ಲಿ ಕಛೇರಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಚೇರಿಯ ವಿಚಾರದಲ್ಲಿ ಲೆಕ್ಕ ಶಾಖೆಯ ಸಿಬ್ಬಂದಿಯನ್ನು ಕರೆದು ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲದೇ ‘ಲೆಕ್ಕಾಧಿಕಾರಿ ಏನು ಕತ್ತೆ ಕಾಯುತ್ತಿದ್ದಾಳಾ’ ಎಂದು ಆಗೌರವದಿಂದ ಮಾತನಾಡಿದ್ದಾರೆ.</p>.ದೆಹಲಿ ಕರ್ನಾಟಕ ಭವನದಲ್ಲಿ ಸಿಎಂ–ಡಿಸಿಎಂ ಕರ್ತವ್ಯ ಅಧಿಕಾರಿಗಳ ‘ಬೂಟಿನ‘ ಜಟಾಪಟಿ.<p>ಉಪ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಎಂಬ ದರ್ಪದಿಂದ ಪ್ರತಿ ದಿನ ಕಚೇರಿಯ ಕರ್ತವ್ಯದ ಅವಧಿಯಲ್ಲಿ ನೌಕರರಿಗೆ ಪ್ರತಿ ಮಾತು ಮಾತಿಗೂ ಅವಹೇಳನ ಮಾಡುತ್ತಿದ್ದಾರೆ. ನೌಕರರನ್ನು ಅಗೌರವದಿಂದ ಕಾಣುವುದಲ್ಲದೇ ಅಸಭ್ಯವಾದ ಅಶ್ಲೀಲವಾದ ಕೆಟ್ಟ ಪದಗಳನ್ನು ಉಪಯೋಗಿಸುತ್ತಾರೆ. ಮಹಿಳಾ ನೌಕರರಿಗೂ ಅಸಭ್ಯ ಪದಗಳಿಂದ ಮಾತನಾಡುತ್ತಾರೆ.</p><p>ಅಲ್ಲದೇ, ನಿಮ್ಮ ಮೇಲೆ ಡಿಜಿ ಮಾಡುತ್ತೇನೆ, ಅಮಾನತು ಮಾಡುತ್ತೇನೆ, ವಜಾಗೊಳಿಸುತ್ತೇನೆ ಎಂದು ಹೇಳಿ ನೌಕರರಿಗೆ ಬೆದರಿಕೆ ಹಾಕುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೆಹಲಿ ಕರ್ನಾಟಕದ ಭವನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್. ಆಂಜನೇಯ ಅವರು ದರ್ಪದಿಂದ ವರ್ತಿಸುತ್ತಿದ್ದು, ಸಿಬ್ಬಂದಿಯನ್ನು ಅಗೌರವದಿಂದ ಕಾಣುತ್ತಿದ್ದಾರೆ ಎಂದು ಆರೋಪಿ ಮಹಿಳಾ ಸಿಬ್ಬಂದಿಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.</p><p>ಕರ್ನಾಟಕ ಭವನದಲ್ಲಿ ಉಪ ಸಮನ್ವಯಾಧಿಕಾರಿ ಮತ್ತು ಲೆಕ್ಕಧಾಧಿಕರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೂರುದಾರೆ ಕುಸುಮಾ ಪಿ, ನಂದರಗಿ, ಮಹಿಳಾ ನೌಕರರು ಅಸುರಕ್ಷಿತ ವಾತಾವರಣದಲ್ಲಿ ಕೆಲಸ ನಿರ್ವಹಿಸುವ ಪ್ರಸಂಗ ಬಂದಿರುವುದು ವಿಷಾದನೀಯ ಎಂದು ಹೇಳಿದ್ದಾರೆ.</p><p><strong>ದೂರಿನಲ್ಲಿ ಏನಿದೆ?</strong></p><p>ಹೆಚ್. ಆಂಜನೇಯ ಅವರು ಪ್ರಸ್ತುತ ಕರ್ನಾಟಕ ಭವನದಲ್ಲಿ ಕಛೇರಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಚೇರಿಯ ವಿಚಾರದಲ್ಲಿ ಲೆಕ್ಕ ಶಾಖೆಯ ಸಿಬ್ಬಂದಿಯನ್ನು ಕರೆದು ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲದೇ ‘ಲೆಕ್ಕಾಧಿಕಾರಿ ಏನು ಕತ್ತೆ ಕಾಯುತ್ತಿದ್ದಾಳಾ’ ಎಂದು ಆಗೌರವದಿಂದ ಮಾತನಾಡಿದ್ದಾರೆ.</p>.ದೆಹಲಿ ಕರ್ನಾಟಕ ಭವನದಲ್ಲಿ ಸಿಎಂ–ಡಿಸಿಎಂ ಕರ್ತವ್ಯ ಅಧಿಕಾರಿಗಳ ‘ಬೂಟಿನ‘ ಜಟಾಪಟಿ.<p>ಉಪ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಎಂಬ ದರ್ಪದಿಂದ ಪ್ರತಿ ದಿನ ಕಚೇರಿಯ ಕರ್ತವ್ಯದ ಅವಧಿಯಲ್ಲಿ ನೌಕರರಿಗೆ ಪ್ರತಿ ಮಾತು ಮಾತಿಗೂ ಅವಹೇಳನ ಮಾಡುತ್ತಿದ್ದಾರೆ. ನೌಕರರನ್ನು ಅಗೌರವದಿಂದ ಕಾಣುವುದಲ್ಲದೇ ಅಸಭ್ಯವಾದ ಅಶ್ಲೀಲವಾದ ಕೆಟ್ಟ ಪದಗಳನ್ನು ಉಪಯೋಗಿಸುತ್ತಾರೆ. ಮಹಿಳಾ ನೌಕರರಿಗೂ ಅಸಭ್ಯ ಪದಗಳಿಂದ ಮಾತನಾಡುತ್ತಾರೆ.</p><p>ಅಲ್ಲದೇ, ನಿಮ್ಮ ಮೇಲೆ ಡಿಜಿ ಮಾಡುತ್ತೇನೆ, ಅಮಾನತು ಮಾಡುತ್ತೇನೆ, ವಜಾಗೊಳಿಸುತ್ತೇನೆ ಎಂದು ಹೇಳಿ ನೌಕರರಿಗೆ ಬೆದರಿಕೆ ಹಾಕುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>