<p><strong>ಬೆಂಗಳೂರು: </strong>ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಬಿರುಸು ಮುಂದುವರಿದಿದ್ದು, ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚುತ್ತಿದೆ. ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದ್ದು, ವಿವಿಧ ಜಲಪಾತಗಳು ಮೈದುಂಬಿದ್ದು, ಜೀವಕಳೆ ಪಡೆದುಕೊಂಡಿವೆ.</p>.<p>ಮಂಡ್ಯ ವರದಿ: ಜಿಲ್ಲೆಯ ಕೆಆರ್ಎಸ್ ಜಲಾಶಯದಿಂದ ಭಾನುವಾರ ಸಂಜೆ 26,143 ಕ್ಯುಸೆಕ್ ನೀರು ಹೊರಬಿಡಲಾಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಲಾಗಿದೆ.</p>.<p>ಜಲಾಶಯದ ನೀರಿನ ಮಟ್ಟ ಸಂಜೆ ವೇಳೆಗೆ 123 ಅಡಿ ಗಡಿ ದಾಟಿದ್ದು, ಭರ್ತಿಗೆ ಒಂದು ಅಡಿಯಷ್ಟೇ ಬಾಕಿ ಇದೆ. 26 ಸಾವಿನ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಜಿಲ್ಲೆಯ ಗಗನಚುಕ್ಕಿ ಜಲಪಾತದಲ್ಲಿ ನೀರು ಭೋರ್ಗರೆಯುತ್ತಿದೆ.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಮುಂಜಾಗ್ರತೆಯಾಗಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಇಳಿಯುವವರೆಗೆ ದೋಣಿ ವಿಹಾರ ಇರುವುದಿಲ್ಲ. ಪಕ್ಷಿಗಳು ಸುರಕ್ಷಿತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೆಆರ್ಎಸ್ ಮತ್ತು ಕಬಿನಿ ಎರಡು ಜಲಾಶಯದಿಂದ ನೀರು ಹರಿಸಲಾಗಿದೆ. ಗಗನಚುಕ್ಕಿಯಲ್ಲಿ419 ಅಡಿ ಆಳದ ಪ್ರಪಾತಕ್ಕೆ ಧುಮ್ಮಿಕ್ಕುತ್ತಿದ್ದ ಜಲ ವೈಭವ ವೀಕ್ಷಣೆಗೆ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಕಡೆಯಿಂದ ಪ್ರವಾಸಿಗರ ಭೇಟಿ ಹೆಚ್ಚುತ್ತಿದೆ.</p>.<p>ಶಿವಮೊಗ್ಗ ವರದಿ: ಮಲೆನಾಡಿನಲ್ಲಿ ತುಂಗಾ, ಭದ್ರಾ, ಶರಾವತಿ, ಕುಮದ್ವತಿ ನದಿಗಳು ಭೋರ್ಗರೆಯುತ್ತಿವೆ. ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಭಾನುವಾರ ನೀರಿನ ಮಟ್ಟ 171.3 ಅಡಿಗೆ (ಗರಿಷ್ಠ ಮಟ್ಟ 186 ಅಡಿ) ಏರಿದೆ.</p>.<p>ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದ್ದು, ಜಲಾಶಯ ಭರ್ತಿಗೆ ಇನ್ನೂ 43.65 ಅಡಿ ನೀರು ಬರಬೇಕಿದೆ.</p>.<p>ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದೆ. 51,386 ಕ್ಯುಸೆಕ್ ನೀರು ನದಿಗೆ ಹರಿಸಲಾಗಿದೆ. ಮಾಣಿ ಜಲಾಶಯಕ್ಕೆ 7,366 ಕ್ಯುಸೆಕ್ ನೀರು ಹರಿದುಬರುತ್ತಿದೆ. ಭರ್ತಿಗೆ 17.30 ಅಡಿ ನೀರು ಅಗತ್ಯವಿದೆ.</p>.<p><strong>ಹೇಮಾವತಿ ಜಲಾಶಯ ಭರ್ತಿ</strong><br />ಹಾಸನ ವರದಿ: ತಾಲ್ಲೂಕಿನ ಗೊರೂರು ಬಳಿಯ ಹೇಮಾವತಿ ಜಲಾಶಯದಿಂದ 29ಸಾವಿರ ಕ್ಯುಸೆಕ್ ಹಾಗೂ ಆಲೂರು ತಾಲ್ಲೂಕಿನ ವಾಟೆಹೊಳೆ ಜಲಾಶಯದಿಂದ 360 ಕ್ಯುಸೆಕ್ ನೀರನ್ನು ಹೊರಗೆ ಬಿಡಲಾಗಿದೆ.</p>.<p>ಸಕಲೇಶಪುರ ತಾಲ್ಲೂಕಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಅರಕಲಗೂಡು ತಾಲ್ಲೂಕಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಲಾರಿ ಮೇಲೆ ಮರ ಬಿದಿದೆ. ಕೊಣನೂರು ಸಮೀಪದ ಹಿರೇಹಳ್ಳಿಯಲ್ಲಿ 3 ಮನೆಗಳ ಗೋಡೆ ಕುಸಿದು ಬಿದ್ದಿದ್ದು, ಗೋಡೆಗಳ ಅಡಿಯಲ್ಲಿ ಸಿಲುಕಿ ಹಸುವೊಂದು ಮೃತಪಟ್ಟಿದೆ. ಅರಕಲಗೂಡಿನಲ್ಲಿ 2 ಮನೆಗಳು ಕುಸಿದಿವೆ.</p>.<p>ಅಪಾಯದ ಮಟ್ಟ ತಲುಪಿದ ನೇತ್ರಾವತಿ: ಮಂಗಳೂರು ವರದಿ: ಬಂಟ್ವಾಳದ ಸಮೀಪ ನೇತ್ರಾನತಿ ನದಿ ಈ ಮುಂಗಾರಿನಲ್ಲಿ ಮೊದಲ ಬಾರಿಗೆ ಭಾನುವಾರ ಅಪಾಯದ ಮಟ್ಟ (8.6 ಮೀ.) ತಲುಪಿದೆ. ನೇತ್ರಾವತಿಯಲ್ಲಿ ನೀರು ಹರಿವಿನ ಮಟ್ಟ 9 ಮೀ. ಮೀರಿದೆ. ಅಜಿಲಮೊಗರು ಜುಮ್ಮಾ ಮಸೀದಿ ಬಳಿ ನದಿ ನೀರು ಉಕ್ಕಿ ಹರಿದಿದ್ದು, ರಸ್ತೆ ಜಲಾವೃತಗೊಂಡಿತ್ತು. ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯ ಹಾಗೂಕುಮಾರ ಪರ್ವತದ ಸುತ್ತ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ<br />ನದಿ ತುಂಬಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಬಿರುಸು ಮುಂದುವರಿದಿದ್ದು, ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚುತ್ತಿದೆ. ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದ್ದು, ವಿವಿಧ ಜಲಪಾತಗಳು ಮೈದುಂಬಿದ್ದು, ಜೀವಕಳೆ ಪಡೆದುಕೊಂಡಿವೆ.</p>.<p>ಮಂಡ್ಯ ವರದಿ: ಜಿಲ್ಲೆಯ ಕೆಆರ್ಎಸ್ ಜಲಾಶಯದಿಂದ ಭಾನುವಾರ ಸಂಜೆ 26,143 ಕ್ಯುಸೆಕ್ ನೀರು ಹೊರಬಿಡಲಾಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚಿಸಲಾಗಿದೆ.</p>.<p>ಜಲಾಶಯದ ನೀರಿನ ಮಟ್ಟ ಸಂಜೆ ವೇಳೆಗೆ 123 ಅಡಿ ಗಡಿ ದಾಟಿದ್ದು, ಭರ್ತಿಗೆ ಒಂದು ಅಡಿಯಷ್ಟೇ ಬಾಕಿ ಇದೆ. 26 ಸಾವಿನ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಜಿಲ್ಲೆಯ ಗಗನಚುಕ್ಕಿ ಜಲಪಾತದಲ್ಲಿ ನೀರು ಭೋರ್ಗರೆಯುತ್ತಿದೆ.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಮುಂಜಾಗ್ರತೆಯಾಗಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಇಳಿಯುವವರೆಗೆ ದೋಣಿ ವಿಹಾರ ಇರುವುದಿಲ್ಲ. ಪಕ್ಷಿಗಳು ಸುರಕ್ಷಿತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕೆಆರ್ಎಸ್ ಮತ್ತು ಕಬಿನಿ ಎರಡು ಜಲಾಶಯದಿಂದ ನೀರು ಹರಿಸಲಾಗಿದೆ. ಗಗನಚುಕ್ಕಿಯಲ್ಲಿ419 ಅಡಿ ಆಳದ ಪ್ರಪಾತಕ್ಕೆ ಧುಮ್ಮಿಕ್ಕುತ್ತಿದ್ದ ಜಲ ವೈಭವ ವೀಕ್ಷಣೆಗೆ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಕಡೆಯಿಂದ ಪ್ರವಾಸಿಗರ ಭೇಟಿ ಹೆಚ್ಚುತ್ತಿದೆ.</p>.<p>ಶಿವಮೊಗ್ಗ ವರದಿ: ಮಲೆನಾಡಿನಲ್ಲಿ ತುಂಗಾ, ಭದ್ರಾ, ಶರಾವತಿ, ಕುಮದ್ವತಿ ನದಿಗಳು ಭೋರ್ಗರೆಯುತ್ತಿವೆ. ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಭಾನುವಾರ ನೀರಿನ ಮಟ್ಟ 171.3 ಅಡಿಗೆ (ಗರಿಷ್ಠ ಮಟ್ಟ 186 ಅಡಿ) ಏರಿದೆ.</p>.<p>ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದ್ದು, ಜಲಾಶಯ ಭರ್ತಿಗೆ ಇನ್ನೂ 43.65 ಅಡಿ ನೀರು ಬರಬೇಕಿದೆ.</p>.<p>ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದೆ. 51,386 ಕ್ಯುಸೆಕ್ ನೀರು ನದಿಗೆ ಹರಿಸಲಾಗಿದೆ. ಮಾಣಿ ಜಲಾಶಯಕ್ಕೆ 7,366 ಕ್ಯುಸೆಕ್ ನೀರು ಹರಿದುಬರುತ್ತಿದೆ. ಭರ್ತಿಗೆ 17.30 ಅಡಿ ನೀರು ಅಗತ್ಯವಿದೆ.</p>.<p><strong>ಹೇಮಾವತಿ ಜಲಾಶಯ ಭರ್ತಿ</strong><br />ಹಾಸನ ವರದಿ: ತಾಲ್ಲೂಕಿನ ಗೊರೂರು ಬಳಿಯ ಹೇಮಾವತಿ ಜಲಾಶಯದಿಂದ 29ಸಾವಿರ ಕ್ಯುಸೆಕ್ ಹಾಗೂ ಆಲೂರು ತಾಲ್ಲೂಕಿನ ವಾಟೆಹೊಳೆ ಜಲಾಶಯದಿಂದ 360 ಕ್ಯುಸೆಕ್ ನೀರನ್ನು ಹೊರಗೆ ಬಿಡಲಾಗಿದೆ.</p>.<p>ಸಕಲೇಶಪುರ ತಾಲ್ಲೂಕಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಅರಕಲಗೂಡು ತಾಲ್ಲೂಕಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಲಾರಿ ಮೇಲೆ ಮರ ಬಿದಿದೆ. ಕೊಣನೂರು ಸಮೀಪದ ಹಿರೇಹಳ್ಳಿಯಲ್ಲಿ 3 ಮನೆಗಳ ಗೋಡೆ ಕುಸಿದು ಬಿದ್ದಿದ್ದು, ಗೋಡೆಗಳ ಅಡಿಯಲ್ಲಿ ಸಿಲುಕಿ ಹಸುವೊಂದು ಮೃತಪಟ್ಟಿದೆ. ಅರಕಲಗೂಡಿನಲ್ಲಿ 2 ಮನೆಗಳು ಕುಸಿದಿವೆ.</p>.<p>ಅಪಾಯದ ಮಟ್ಟ ತಲುಪಿದ ನೇತ್ರಾವತಿ: ಮಂಗಳೂರು ವರದಿ: ಬಂಟ್ವಾಳದ ಸಮೀಪ ನೇತ್ರಾನತಿ ನದಿ ಈ ಮುಂಗಾರಿನಲ್ಲಿ ಮೊದಲ ಬಾರಿಗೆ ಭಾನುವಾರ ಅಪಾಯದ ಮಟ್ಟ (8.6 ಮೀ.) ತಲುಪಿದೆ. ನೇತ್ರಾವತಿಯಲ್ಲಿ ನೀರು ಹರಿವಿನ ಮಟ್ಟ 9 ಮೀ. ಮೀರಿದೆ. ಅಜಿಲಮೊಗರು ಜುಮ್ಮಾ ಮಸೀದಿ ಬಳಿ ನದಿ ನೀರು ಉಕ್ಕಿ ಹರಿದಿದ್ದು, ರಸ್ತೆ ಜಲಾವೃತಗೊಂಡಿತ್ತು. ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯ ಹಾಗೂಕುಮಾರ ಪರ್ವತದ ಸುತ್ತ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ<br />ನದಿ ತುಂಬಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>