ಉಳ್ಳಾಲ: ಕೇರಳದಲ್ಲಿ ಕೋರೊನಾ ರೂಪಾಂತರಿ ಜೆಎನ್ 1 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕರ್ನಾಟಕ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಆರೋಗ್ಯ ಇಲಾಖೆ ಮತ್ತು ತಲಪಾಡಿ ಗ್ರಾಮ ಪಂಚಾಯಿತಿ ವತಿಯಿಂದ ಜನ ಜಾಗೃತಿ ಕಾರ್ಯಕ್ರಮವನ್ನು ಗುರುವಾರದಿಂದ ಆರಂಭಿಸಿದೆ.
ಕೋಟೆಕಾರು ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ, ಸಮುದಾಯ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಡಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಮಾಹಿತಿ ಇರುವ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡುತ್ತಿದ್ದಾರೆ.