<p><strong>ಬೆಂಗಳೂರು</strong>: ನಾವೀನ್ಯತೆ ಮತ್ತು ತಂತ್ರಜ್ಞಾನ ಸಹಕಾರ ಉತ್ತೇಜನ ಸಂಬಂಧ ಕರ್ನಾಟಕ ಸರ್ಕಾರ ಮತ್ತು ಚಿಲಿ ಸರ್ಕಾರವು ಉದ್ದೇಶ ಪತ್ರಕ್ಕೆ ಸಹಿ ಹಾಕಿವೆ.</p>.<p>ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ನಾವೀನ್ಯತಾ ಶೃಂಗ’ದಲ್ಲಿ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನೇತೃತ್ವದ ನಿಯೋಗವು ಭಾಗಿಯಾಗಿತ್ತು. ಈ ವೇಳೆ, ಸಹಕಾರ ಒಪ್ಪಂದ ಪತ್ರಕ್ಕೆ ಚಿಲಿ ಮತ್ತು ಕರ್ನಾಟಕ ಸರ್ಕಾರದ ಪ್ರತಿನಿಧಿಗಳು ಸಹಿ ಮಾಡಿದರು.</p>.<p>ರಾಜ್ಯ ಸರ್ಕಾರದ ‘ಜಾಗತಿಕ ನಾವೀನ್ಯತಾ ಮೈತ್ರಿ–ಜಿಐಐ’ಯ ಭಾಗವಾಗಿ ಈ ಪತ್ರಕ್ಕೆ ಸಹಿ ಮಾಡಲಾಗಿದೆ. ಚಿಲಿ ಮತ್ತು ಕರ್ನಾಟಕವು ನಾವೀನ್ಯತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಹಾಗೂ ನವೋದ್ಯಮ ಸ್ಥಾಪನೆಗೆ ಪರಸ್ಪರರ ನೆಲದಲ್ಲಿ ಅವಕಾಶ, ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ, ಪಾಲುದಾರಿಕೆ ಉತ್ತೇಜನದ ಅಂಶಗಳನ್ನು ಉದ್ದೇಶ ಪತ್ರ ಹೊಂದಿದೆ.</p>.<p>ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ‘ಜಿಐಐ ಭಾಗವಾಗಿ ಕರ್ನಾಟಕವು ಲ್ಯಾಟಿನ್ ಅಮೆರಿಕದ ದೇಶವೊಂದರ ಜತೆಗೆ ಸಹಕಾರಕ್ಕೆ ಸಹಿ ಹಾಕಿದ್ದು ಇದೇ ಮೊದಲು. ಎರಡೂ ಕಡೆ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಸಹಕಾರಕ್ಕೆ ವಿಪುಲ ಅವಕಾಶಗಳಿವೆ. ಅವನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಬೋರಿಕ್ ಫಾಂಟ್, ‘ಚಿಲಿಯಲ್ಲಿ ಹೂಡಿಕೆಗೆ ಪೂರಕವಾದ ವಾತಾವರಣ ಮತ್ತು ಅವಕಾಶಗಳು ಇವೆ. ಅಲ್ಲಿ ಹೂಡಿಕೆ ಮಾಡಿದರೆ ಅಗತ್ಯ ಸಹಕಾರ ನೀಡುತ್ತೇವೆ’ ಎಂದರು. </p>.<p><strong>ರಾಜ್ಯಪಾಲರ ಭೇಟಿ</strong>: ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಶನಿವಾರ ಭೇಟಿ ಮಾಡಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ರಾಜ್ಯದ ಅಧಿಕಾರಿಗಳ ಜತೆಗೆ ಚಿಲಿ ನಿಯೋಗವು ಮಾತುಕತೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾವೀನ್ಯತೆ ಮತ್ತು ತಂತ್ರಜ್ಞಾನ ಸಹಕಾರ ಉತ್ತೇಜನ ಸಂಬಂಧ ಕರ್ನಾಟಕ ಸರ್ಕಾರ ಮತ್ತು ಚಿಲಿ ಸರ್ಕಾರವು ಉದ್ದೇಶ ಪತ್ರಕ್ಕೆ ಸಹಿ ಹಾಕಿವೆ.</p>.<p>ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ನಾವೀನ್ಯತಾ ಶೃಂಗ’ದಲ್ಲಿ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನೇತೃತ್ವದ ನಿಯೋಗವು ಭಾಗಿಯಾಗಿತ್ತು. ಈ ವೇಳೆ, ಸಹಕಾರ ಒಪ್ಪಂದ ಪತ್ರಕ್ಕೆ ಚಿಲಿ ಮತ್ತು ಕರ್ನಾಟಕ ಸರ್ಕಾರದ ಪ್ರತಿನಿಧಿಗಳು ಸಹಿ ಮಾಡಿದರು.</p>.<p>ರಾಜ್ಯ ಸರ್ಕಾರದ ‘ಜಾಗತಿಕ ನಾವೀನ್ಯತಾ ಮೈತ್ರಿ–ಜಿಐಐ’ಯ ಭಾಗವಾಗಿ ಈ ಪತ್ರಕ್ಕೆ ಸಹಿ ಮಾಡಲಾಗಿದೆ. ಚಿಲಿ ಮತ್ತು ಕರ್ನಾಟಕವು ನಾವೀನ್ಯತೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಹಾಗೂ ನವೋದ್ಯಮ ಸ್ಥಾಪನೆಗೆ ಪರಸ್ಪರರ ನೆಲದಲ್ಲಿ ಅವಕಾಶ, ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ, ಪಾಲುದಾರಿಕೆ ಉತ್ತೇಜನದ ಅಂಶಗಳನ್ನು ಉದ್ದೇಶ ಪತ್ರ ಹೊಂದಿದೆ.</p>.<p>ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ‘ಜಿಐಐ ಭಾಗವಾಗಿ ಕರ್ನಾಟಕವು ಲ್ಯಾಟಿನ್ ಅಮೆರಿಕದ ದೇಶವೊಂದರ ಜತೆಗೆ ಸಹಕಾರಕ್ಕೆ ಸಹಿ ಹಾಕಿದ್ದು ಇದೇ ಮೊದಲು. ಎರಡೂ ಕಡೆ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಸಹಕಾರಕ್ಕೆ ವಿಪುಲ ಅವಕಾಶಗಳಿವೆ. ಅವನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಬೋರಿಕ್ ಫಾಂಟ್, ‘ಚಿಲಿಯಲ್ಲಿ ಹೂಡಿಕೆಗೆ ಪೂರಕವಾದ ವಾತಾವರಣ ಮತ್ತು ಅವಕಾಶಗಳು ಇವೆ. ಅಲ್ಲಿ ಹೂಡಿಕೆ ಮಾಡಿದರೆ ಅಗತ್ಯ ಸಹಕಾರ ನೀಡುತ್ತೇವೆ’ ಎಂದರು. </p>.<p><strong>ರಾಜ್ಯಪಾಲರ ಭೇಟಿ</strong>: ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಶನಿವಾರ ಭೇಟಿ ಮಾಡಿದರು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ರಾಜ್ಯದ ಅಧಿಕಾರಿಗಳ ಜತೆಗೆ ಚಿಲಿ ನಿಯೋಗವು ಮಾತುಕತೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>