<p><strong>ಬೆಂಗಳೂರು: </strong>ಜನರಿಗೆ ನ್ಯಾಯ ದೊರಕಿಸುತ್ತಿರುವ ರಾಜ್ಯಗಳ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 14 ಸ್ಥಾನದಲ್ಲಿದ್ದು, ನೆರೆಯ ಮಹಾರಾಷ್ಟ್ರ ಈ ವರ್ಷವೂ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.</p>.<p>2020ನೇ ಸಾಲಿನ ಭಾರತದ ನ್ಯಾಯ ವರದಿಯನ್ನು ಟಾಟಾ ಟ್ರಸ್ಟ್ ಬಿಡುಗಡೆ ಮಾಡಿದ್ದು, ಪೊಲೀಸ್, ಕಾರಾಗೃಹ, ನ್ಯಾಯಾಂಗ ಮತ್ತು ಕಾನೂನು ಸಹಾಯದ ಸಂಯೋಜಿತ ಶ್ರೇಯಾಂಕ ಇದಾಗಿದೆ ಎಂದು ವರದಿ ತಿಳಿಸಿದೆ.</p>.<p>ಭಾರತದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳಲ್ಲಿ (1 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ) ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ನಂತರ ತಮಿಳುನಾಡು, ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳಿವೆ. 2019ರ ವರದಿಯಲ್ಲಿ 6ನೇ ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ ಬಿಹಾರಕ್ಕಿಂತ ಕೆಳಕ್ಕೆ ಕುಸಿದಿದೆ.</p>.<p>ಏಳು ಸಣ್ಣ ರಾಜ್ಯಗಳ ಪಟ್ಟಿಯಲ್ಲಿ (ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆ) ತ್ರಿಪುರ, ಸಿಕ್ಕಿಮ್ ಮತ್ತು ಗೋವಾ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.</p>.<p>ಭಾರತ ನ್ಯಾಯ ವರದಿಯ ಎರಡನೇ ಆವೃತ್ತಿ ಇದಾಗಿದೆ. ಜನರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತಿರುವ ನಾಲ್ಕು ಸ್ತಂಭಗಳಾದ ಪೊಲೀಸ್, ನ್ಯಾಯಾಂಗ, ಕಾರಾಗೃಹ ಮತ್ತು ಕಾನೂನು ನೆರವಿನ ಕುರಿತು ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶ ಆಧರಿಸಿ ಈ ಶ್ರೇಯಾಂಕ ಸಿದ್ಧಪಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಭಾರತದಲ್ಲಿನ ನ್ಯಾಯಾಧೀಶರಲ್ಲಿ ಮಹಿಳೆಯರಿಗೆ ಶೇ 29ರಷ್ಟು ಸ್ಥಾನ ದೊರೆತಿದೆ. ಹೈಕೋರ್ಟ್ಗಳಲ್ಲಿ ಮಹಿಳಾ ನ್ಯಾಯಾಧೀಶರ ಸಂಖ್ಯೆ ಶೇ 11ರಿಂದ 13ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.</p>.<p>ಸಾಂಕ್ರಾಮಿಕ ರೋಗದಿಂದಾಗಿ ಕಡಿಮೆ ಪ್ರಕರಣಗಳು ದಾಖಲಾಗಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಕಡಿಮೆ ಇಲ್ಲ ಎಂದು ವರದಿಯ ಮುನ್ನುಡಿ ಬರೆದಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಲೋಕೂರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಇಡೀ ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 35.34 ದಶಲಕ್ಷಕ್ಕೂ ಹೆಚ್ಚಿನ ಪ್ರಕರಣಗಳು, ಹೈಕೋರ್ಟ್ಗಳಲ್ಲಿ 2.72 ದಶಲಕ್ಷ ಪ್ರಕರಣಗಳು ಸೇರಿ 40 ದಶ ಲಕ್ಷ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ವಿಲೇವಾರಿಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>ಕಾರಾಗೃಹಗಳಲ್ಲಿ ಕೈದಿಗಳಿಗೆ ಮಾಡುತ್ತಿರುವ ಸರಾಸರಿ ಖರ್ಚು ಶೇ 45ರಷ್ಟು ಹೆಚ್ಚಾಗಿದೆ. ಆಂಧ್ರ ಪ್ರದೇಶ ಅತೀ ಹೆಚ್ಚು ಮತ್ತು ಮೇಘಾಲಯ ಅತೀ ಕಡಿಮೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿದೆ.</p>.<p class="Briefhead">25 ವರ್ಷದಲ್ಲಿ 1.5 ಕೋಟಿ ಜನರಿಗೆ ಕಾನೂನಿನ ನೆರವು</p>.<p>ಕಳೆದ 25 ವರ್ಷಗಳಲ್ಲಿ ಕೇವಲ 1.5 ಕೋಟಿ ಜನರು ಮಾತ್ರ ಕಾನೂನು ನೆರವು ಪಡೆದಿದ್ದಾರೆ. ಈ ಉದ್ದೇಶಕ್ಕೆ 2019–20ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ತಲಾ ₹1.05 ಖರ್ಚು ಮಾಡಿದೆ ಎಂದು ವರದಿ ಹೇಳಿದೆ.</p>.<p>2019ರಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಕಾನೂನು ನೆರವು ಮತ್ತು ಸಲಹೆ ಪಡೆದಿದ್ದು, ಈ ಸಂಖ್ಯೆ ಗಮನಾರ್ಹ ಏರಿಕೆ ಎಂದೂ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜನರಿಗೆ ನ್ಯಾಯ ದೊರಕಿಸುತ್ತಿರುವ ರಾಜ್ಯಗಳ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 14 ಸ್ಥಾನದಲ್ಲಿದ್ದು, ನೆರೆಯ ಮಹಾರಾಷ್ಟ್ರ ಈ ವರ್ಷವೂ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.</p>.<p>2020ನೇ ಸಾಲಿನ ಭಾರತದ ನ್ಯಾಯ ವರದಿಯನ್ನು ಟಾಟಾ ಟ್ರಸ್ಟ್ ಬಿಡುಗಡೆ ಮಾಡಿದ್ದು, ಪೊಲೀಸ್, ಕಾರಾಗೃಹ, ನ್ಯಾಯಾಂಗ ಮತ್ತು ಕಾನೂನು ಸಹಾಯದ ಸಂಯೋಜಿತ ಶ್ರೇಯಾಂಕ ಇದಾಗಿದೆ ಎಂದು ವರದಿ ತಿಳಿಸಿದೆ.</p>.<p>ಭಾರತದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳಲ್ಲಿ (1 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ) ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ನಂತರ ತಮಿಳುನಾಡು, ತೆಲಂಗಾಣ, ಪಂಜಾಬ್ ಮತ್ತು ಕೇರಳ ರಾಜ್ಯಗಳಿವೆ. 2019ರ ವರದಿಯಲ್ಲಿ 6ನೇ ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ ಬಿಹಾರಕ್ಕಿಂತ ಕೆಳಕ್ಕೆ ಕುಸಿದಿದೆ.</p>.<p>ಏಳು ಸಣ್ಣ ರಾಜ್ಯಗಳ ಪಟ್ಟಿಯಲ್ಲಿ (ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆ) ತ್ರಿಪುರ, ಸಿಕ್ಕಿಮ್ ಮತ್ತು ಗೋವಾ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.</p>.<p>ಭಾರತ ನ್ಯಾಯ ವರದಿಯ ಎರಡನೇ ಆವೃತ್ತಿ ಇದಾಗಿದೆ. ಜನರಿಗೆ ನ್ಯಾಯ ಒದಗಿಸಲು ಶ್ರಮಿಸುತ್ತಿರುವ ನಾಲ್ಕು ಸ್ತಂಭಗಳಾದ ಪೊಲೀಸ್, ನ್ಯಾಯಾಂಗ, ಕಾರಾಗೃಹ ಮತ್ತು ಕಾನೂನು ನೆರವಿನ ಕುರಿತು ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶ ಆಧರಿಸಿ ಈ ಶ್ರೇಯಾಂಕ ಸಿದ್ಧಪಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಭಾರತದಲ್ಲಿನ ನ್ಯಾಯಾಧೀಶರಲ್ಲಿ ಮಹಿಳೆಯರಿಗೆ ಶೇ 29ರಷ್ಟು ಸ್ಥಾನ ದೊರೆತಿದೆ. ಹೈಕೋರ್ಟ್ಗಳಲ್ಲಿ ಮಹಿಳಾ ನ್ಯಾಯಾಧೀಶರ ಸಂಖ್ಯೆ ಶೇ 11ರಿಂದ 13ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.</p>.<p>ಸಾಂಕ್ರಾಮಿಕ ರೋಗದಿಂದಾಗಿ ಕಡಿಮೆ ಪ್ರಕರಣಗಳು ದಾಖಲಾಗಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಕಡಿಮೆ ಇಲ್ಲ ಎಂದು ವರದಿಯ ಮುನ್ನುಡಿ ಬರೆದಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಲೋಕೂರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಇಡೀ ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿ 35.34 ದಶಲಕ್ಷಕ್ಕೂ ಹೆಚ್ಚಿನ ಪ್ರಕರಣಗಳು, ಹೈಕೋರ್ಟ್ಗಳಲ್ಲಿ 2.72 ದಶಲಕ್ಷ ಪ್ರಕರಣಗಳು ಸೇರಿ 40 ದಶ ಲಕ್ಷ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ವಿಲೇವಾರಿಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>ಕಾರಾಗೃಹಗಳಲ್ಲಿ ಕೈದಿಗಳಿಗೆ ಮಾಡುತ್ತಿರುವ ಸರಾಸರಿ ಖರ್ಚು ಶೇ 45ರಷ್ಟು ಹೆಚ್ಚಾಗಿದೆ. ಆಂಧ್ರ ಪ್ರದೇಶ ಅತೀ ಹೆಚ್ಚು ಮತ್ತು ಮೇಘಾಲಯ ಅತೀ ಕಡಿಮೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿದೆ.</p>.<p class="Briefhead">25 ವರ್ಷದಲ್ಲಿ 1.5 ಕೋಟಿ ಜನರಿಗೆ ಕಾನೂನಿನ ನೆರವು</p>.<p>ಕಳೆದ 25 ವರ್ಷಗಳಲ್ಲಿ ಕೇವಲ 1.5 ಕೋಟಿ ಜನರು ಮಾತ್ರ ಕಾನೂನು ನೆರವು ಪಡೆದಿದ್ದಾರೆ. ಈ ಉದ್ದೇಶಕ್ಕೆ 2019–20ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ತಲಾ ₹1.05 ಖರ್ಚು ಮಾಡಿದೆ ಎಂದು ವರದಿ ಹೇಳಿದೆ.</p>.<p>2019ರಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಕಾನೂನು ನೆರವು ಮತ್ತು ಸಲಹೆ ಪಡೆದಿದ್ದು, ಈ ಸಂಖ್ಯೆ ಗಮನಾರ್ಹ ಏರಿಕೆ ಎಂದೂ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>