<p><strong>ಬೆಂಗಳೂರು</strong>: ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಬೆಂಗಳೂರಿನ ಐವರು ಪ್ರತಿಭಾವಂತ ವಿದ್ಯಾರ್ಥಿಗಳು ಪನಾಮಾದಲ್ಲಿ ನಡೆಯಲಿರುವ ರೋಬೋಟಿಕ್ಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.</p>.<p>ನಿಂಗರಾಜ್, ಎಂ.ಪರಶುರಾಮ್, ಅರ್ಜುನ ಕೆ. ರಾಜ್, ಕೆ. ಗೌರೇಶ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು. ಜಿ.ಎನ್. ಚಂದನ್ರಾಜ್ ಎವಿಡಿ ಪ್ರೌಢಶಾಲೆ ವಿದ್ಯಾರ್ಥಿ.</p>.<p>ಇದು ಒಲಿಂಪಿಕ್ಸ್ ಶೈಲಿಯ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಾಗಿದ್ದು, ಒಂದು ನಿರ್ದಿಷ್ಟ ವಿಷಯಾಧಾರಿತ ಆಟದಲ್ಲಿ ಭಾಗವಹಿಸಲು ರೋಬೋಟ್ ನಿರ್ಮಿಸಿ, ಪ್ರೋಗ್ರಾಮಿಂಗ್ ಮಾಡಲು ಆಹ್ವಾನಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ಭೂಮಿಯ ಮುಂದೆ ನಿಂತಿರುವ ಪ್ರಮುಖ ಸವಾಲುಗಳಲ್ಲಿ ಒಂದನ್ನು ಪರಿಹರಿಸುವ ವಿಷಯದ ಸುತ್ತ ಕೆಲಸ ಮಾಡುತ್ತವೆ.</p>.<p>180ಕ್ಕೂ ಹೆಚ್ಚು ರಾಷ್ಟ್ರಗಳು ಭಾಗವಹಿಸುವ ವೇದಿಕೆಯಲ್ಲಿ ಭಾರತವನ್ನು ಬೆಂಗಳೂರಿನ ವಿದ್ಯಾರ್ಥಿಗಳು ಪ್ರತಿನಿಧಿಸುತ್ತಿದ್ದು, ಇವೆರೆಲ್ಲರೂ ಮಲ್ಲೇಶ್ವರಂನ ಅಟಲ್ ಟಿಂಕರಿಂಗ್ ಲ್ಯಾಬ್ನಿಂದ ಆಯ್ಕೆಯಾಗಿ, ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ಸ್ಪೇಸ್ನಲ್ಲಿ ತರಬೇತಿ ಪಡೆದಿದ್ದಾರೆ.</p>.<p>ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಮೂಲಕ ತಂಡದ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಬೆಂಗಳೂರಿನ ಐವರು ಪ್ರತಿಭಾವಂತ ವಿದ್ಯಾರ್ಥಿಗಳು ಪನಾಮಾದಲ್ಲಿ ನಡೆಯಲಿರುವ ರೋಬೋಟಿಕ್ಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.</p>.<p>ನಿಂಗರಾಜ್, ಎಂ.ಪರಶುರಾಮ್, ಅರ್ಜುನ ಕೆ. ರಾಜ್, ಕೆ. ಗೌರೇಶ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು. ಜಿ.ಎನ್. ಚಂದನ್ರಾಜ್ ಎವಿಡಿ ಪ್ರೌಢಶಾಲೆ ವಿದ್ಯಾರ್ಥಿ.</p>.<p>ಇದು ಒಲಿಂಪಿಕ್ಸ್ ಶೈಲಿಯ ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಾಗಿದ್ದು, ಒಂದು ನಿರ್ದಿಷ್ಟ ವಿಷಯಾಧಾರಿತ ಆಟದಲ್ಲಿ ಭಾಗವಹಿಸಲು ರೋಬೋಟ್ ನಿರ್ಮಿಸಿ, ಪ್ರೋಗ್ರಾಮಿಂಗ್ ಮಾಡಲು ಆಹ್ವಾನಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ಭೂಮಿಯ ಮುಂದೆ ನಿಂತಿರುವ ಪ್ರಮುಖ ಸವಾಲುಗಳಲ್ಲಿ ಒಂದನ್ನು ಪರಿಹರಿಸುವ ವಿಷಯದ ಸುತ್ತ ಕೆಲಸ ಮಾಡುತ್ತವೆ.</p>.<p>180ಕ್ಕೂ ಹೆಚ್ಚು ರಾಷ್ಟ್ರಗಳು ಭಾಗವಹಿಸುವ ವೇದಿಕೆಯಲ್ಲಿ ಭಾರತವನ್ನು ಬೆಂಗಳೂರಿನ ವಿದ್ಯಾರ್ಥಿಗಳು ಪ್ರತಿನಿಧಿಸುತ್ತಿದ್ದು, ಇವೆರೆಲ್ಲರೂ ಮಲ್ಲೇಶ್ವರಂನ ಅಟಲ್ ಟಿಂಕರಿಂಗ್ ಲ್ಯಾಬ್ನಿಂದ ಆಯ್ಕೆಯಾಗಿ, ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ಸ್ಪೇಸ್ನಲ್ಲಿ ತರಬೇತಿ ಪಡೆದಿದ್ದಾರೆ.</p>.<p>ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಮೂಲಕ ತಂಡದ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>