<p><strong>ಬೆಂಗಳೂರು:</strong> ದೇಶದಲ್ಲಿ ಶೇ 70ರಷ್ಟು ನಕ್ಸಲಿಸಂ ಕಡಿಮೆಯಾಗಿದೆ. 2026ರ ಮಾರ್ಚ್ ವೇಳೆಗೆ ಸಂಪೂರ್ಣವಾಗಿ ನಕ್ಸಲ್ ಮುಕ್ತ ದೇಶವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಕ್ಸಲ್ ಮುಕ್ತ ದೇಶದ ಜತೆಗೆ ಭಯೋತ್ಪಾದನಾ ಕೃತ್ಯಗಳ ವಿರುದ್ಧವೂ ಕಠಿಣ ಸಮರ ಸಾರಲಾಗಿದೆ. ಕಾಶ್ಮೀರ ಹೊರತುಪಡಿಸಿದರೆ ದೇಶದ ಉಳಿದೆಡೆ ಭಯೋತ್ಪಾದನೆ ನಿಯಂತ್ರಿಸಲಾಗಿದೆ. ನೇಪಾಳದ ಪಶುಪತಿಯಿಂದ ಭಾರತದ ತಿರುಪತಿವರೆಗೆ ಉಗ್ರ ಚಟುವಟಿಕೆ ನಡೆಸುವ ಹುನ್ನಾರವನ್ನು ಹತ್ತಿಕ್ಕಲಾಗಿದೆ’ ಎಂದರು.</p>.<p>ಭಾರತವು ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಸ್ಥಿರತೆಯ ಪರಿಣಾಮವಾಗಿ 2 ಟ್ರಿಲಿಯನ್ನಿಂದ 4 ಟ್ರಿಲಿಯನ್ಗೂ ಹೆಚ್ಚು ಸಾಧನೆ ಮಾಡಿದ್ದೇವೆ. ಸ್ಥಿರ ಸರ್ಕಾರದ ಪರಿಣಾಮ ಸಮರ್ಥ ಆಡಳಿತ ನೀಡಲು ಸಾಧ್ಯವಾಗಿದೆ. ರಕ್ಷಣಾ ವ್ಯವಸ್ಥೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿಯಾಗಿದೆ. ಐದು ಸಾವಿರ ಉತ್ಪನ್ನಗಳನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದ್ದು, ₹25 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಹಾಗೂ ಇತರೆ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ’ ಎಂದು ವಿವರ ನೀಡಿದರು.</p>.<p>2024ರಲ್ಲಿ ಡಿಜಿಟಲ್ ವ್ಯವಹಾರವು ₹24 ಲಕ್ಷ ಕೋಟಿಗೆ ಏರಿಕೆ ಕಂಡಿದೆ. ಯುಪಿಐ ಖಾತೆಗಳ ಪಾಲು ಶೇ 83 ಇದೆ ಎಂದರು.</p>.<p>ಜನ್ಧನ್, ಆಧಾರ್ ಮತ್ತು ಮೊಬೈಲ್ ಲಿಂಕ್ ಮೂಲಕ ಇದು ಸಾಧ್ಯವಾಗಿದೆ. ₹44 ಲಕ್ಷ ಕೋಟಿ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಲ್ಲಿ ಶೇ 70ರಷ್ಟು ನಕ್ಸಲಿಸಂ ಕಡಿಮೆಯಾಗಿದೆ. 2026ರ ಮಾರ್ಚ್ ವೇಳೆಗೆ ಸಂಪೂರ್ಣವಾಗಿ ನಕ್ಸಲ್ ಮುಕ್ತ ದೇಶವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಕ್ಸಲ್ ಮುಕ್ತ ದೇಶದ ಜತೆಗೆ ಭಯೋತ್ಪಾದನಾ ಕೃತ್ಯಗಳ ವಿರುದ್ಧವೂ ಕಠಿಣ ಸಮರ ಸಾರಲಾಗಿದೆ. ಕಾಶ್ಮೀರ ಹೊರತುಪಡಿಸಿದರೆ ದೇಶದ ಉಳಿದೆಡೆ ಭಯೋತ್ಪಾದನೆ ನಿಯಂತ್ರಿಸಲಾಗಿದೆ. ನೇಪಾಳದ ಪಶುಪತಿಯಿಂದ ಭಾರತದ ತಿರುಪತಿವರೆಗೆ ಉಗ್ರ ಚಟುವಟಿಕೆ ನಡೆಸುವ ಹುನ್ನಾರವನ್ನು ಹತ್ತಿಕ್ಕಲಾಗಿದೆ’ ಎಂದರು.</p>.<p>ಭಾರತವು ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಸ್ಥಿರತೆಯ ಪರಿಣಾಮವಾಗಿ 2 ಟ್ರಿಲಿಯನ್ನಿಂದ 4 ಟ್ರಿಲಿಯನ್ಗೂ ಹೆಚ್ಚು ಸಾಧನೆ ಮಾಡಿದ್ದೇವೆ. ಸ್ಥಿರ ಸರ್ಕಾರದ ಪರಿಣಾಮ ಸಮರ್ಥ ಆಡಳಿತ ನೀಡಲು ಸಾಧ್ಯವಾಗಿದೆ. ರಕ್ಷಣಾ ವ್ಯವಸ್ಥೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿಯಾಗಿದೆ. ಐದು ಸಾವಿರ ಉತ್ಪನ್ನಗಳನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದ್ದು, ₹25 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಹಾಗೂ ಇತರೆ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ’ ಎಂದು ವಿವರ ನೀಡಿದರು.</p>.<p>2024ರಲ್ಲಿ ಡಿಜಿಟಲ್ ವ್ಯವಹಾರವು ₹24 ಲಕ್ಷ ಕೋಟಿಗೆ ಏರಿಕೆ ಕಂಡಿದೆ. ಯುಪಿಐ ಖಾತೆಗಳ ಪಾಲು ಶೇ 83 ಇದೆ ಎಂದರು.</p>.<p>ಜನ್ಧನ್, ಆಧಾರ್ ಮತ್ತು ಮೊಬೈಲ್ ಲಿಂಕ್ ಮೂಲಕ ಇದು ಸಾಧ್ಯವಾಗಿದೆ. ₹44 ಲಕ್ಷ ಕೋಟಿ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>