<p><strong>ಮೈಸೂರು:</strong> ‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿದ್ದರೇ ಎಂದು ಬಿಜೆಪಿಯವರು ಕೇಳುತ್ತಾರೆ. ಅಂಬೇಡ್ಕರ್ ಸಂವಿಧಾನ ಬರೆಯದೇ ನಿಮ್ಮ ತಾತ ಆರ್ಎಸ್ಎಸ್ ನವರು ಬರೆದರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. </p><p>‘ಸಂವಿಧಾನ ರೂಪಿಸಿದ್ದೇ ಅಂಬೇಡ್ಕರ್. ಆ ಸಂವಿಧಾನದಿಂದಲೇ ಮೋದಿ ಪ್ರಧಾನಿ ಆಗಿದ್ದು. ಈಗ ಅದೇ ಸಂವಿಧಾನವನ್ನು ಕೊಲೆ ಮಾಡಲು ಹೊರಟಿದ್ದಾರೆ’ ಎಂದು ಅವರು ಟೀಕಿಸಿದರು. ‘ಬಿಜೆಪಿ ಹಾಗೂ ಆರ್ಎಸ್ಎಸ್ ಸಂವಿಧಾನ ಬದಲಾವಣೆಯ ಪ್ರಯತ್ನ ಮುಂದುವರಿಸಿದ್ದು ನೀವೆಷ್ಟೇ ತಿಪ್ಪರಲಾಗ ಹಾಕಿದರೂ ಈ ದೇಶದ ಜನ ಅದಕ್ಕೆ ಅವಕಾಶ ನೀಡುವುದಿಲ್ಲ’ ಎಂದರು. </p><p>‘42 ದೇಶ ಸುತ್ತಿರುವ ಮೋದಿಗೆ ಗಲಭೆಪೀಡಿತ ಮಣಿಪುರದ ಜನರ ಸಮಸ್ಯೆ ಕೇಳಲು ಸಮಯವಿಲ್ಲ. ದೂರದರ್ಶನದಲ್ಲಿ ಹಿಂದಿನ ಯಾವ ಪ್ರಧಾನಿಯೂ ಈಗಿನವರಂತೆ ನಿತ್ಯ ಬೊಗಳುತ್ತಿರಲಿಲ್ಲ. ಅವರೊಬ್ಬ ನಂ. 1 ಸುಳ್ಳುಗಾರ’ ಎಂದು ಟೀಕಿಸಿದರು.</p><p>‘ದೇಶದ ವಿವಿಧೆಡೆ ಕಾಂಗ್ರೆಸ್ ಸೋತಿರಬಹುದು. ಆದರೆ ಬಿದ್ದವರು ಮೇಲೇಳಲೇ ಬೇಕು. ಇಂದಿಗೂ ಲಕ್ಷಾಂತರ ಜನ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಆಶಿಸುತ್ತಾರೆ. ಕಾಂಗ್ರೆಸ್ ದೇಶಕ್ಕೆ ಕೊಟ್ಟ ಕೊಡುಗೆ ಜನರ ಮುಂದೆ ಇದೆ. ಆದರೆ ಮೋದಿ ಸಾರ್ವಜನಿಕ ಉದ್ಯಮಗಳನ್ನು ಮುಚ್ಚಿ ಅದಾನಿ- ಅಂಬಾನಿಗೆ ದೇಶದ ಆಸ್ತಿಯನ್ನು ಮಾರುತ್ತಿದ್ದಾರೆ’ ಎಂದು ಟೀಕಿಸಿದರು. </p><p>‘ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಸಿದ್ದರಾಮಯ್ಯ ಹಣಕಾಸು ಸಚಿವರಾದಾಗಲೆಲ್ಲ ಲಕ್ಷ್ಮಿ ಕುಂಟಾಗಿ ಖಜಾನೆಯಲ್ಲಿಯೇ ಕುಳಿತಿರುತ್ತಾಳೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿದ್ದರೇ ಎಂದು ಬಿಜೆಪಿಯವರು ಕೇಳುತ್ತಾರೆ. ಅಂಬೇಡ್ಕರ್ ಸಂವಿಧಾನ ಬರೆಯದೇ ನಿಮ್ಮ ತಾತ ಆರ್ಎಸ್ಎಸ್ ನವರು ಬರೆದರೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು. </p><p>‘ಸಂವಿಧಾನ ರೂಪಿಸಿದ್ದೇ ಅಂಬೇಡ್ಕರ್. ಆ ಸಂವಿಧಾನದಿಂದಲೇ ಮೋದಿ ಪ್ರಧಾನಿ ಆಗಿದ್ದು. ಈಗ ಅದೇ ಸಂವಿಧಾನವನ್ನು ಕೊಲೆ ಮಾಡಲು ಹೊರಟಿದ್ದಾರೆ’ ಎಂದು ಅವರು ಟೀಕಿಸಿದರು. ‘ಬಿಜೆಪಿ ಹಾಗೂ ಆರ್ಎಸ್ಎಸ್ ಸಂವಿಧಾನ ಬದಲಾವಣೆಯ ಪ್ರಯತ್ನ ಮುಂದುವರಿಸಿದ್ದು ನೀವೆಷ್ಟೇ ತಿಪ್ಪರಲಾಗ ಹಾಕಿದರೂ ಈ ದೇಶದ ಜನ ಅದಕ್ಕೆ ಅವಕಾಶ ನೀಡುವುದಿಲ್ಲ’ ಎಂದರು. </p><p>‘42 ದೇಶ ಸುತ್ತಿರುವ ಮೋದಿಗೆ ಗಲಭೆಪೀಡಿತ ಮಣಿಪುರದ ಜನರ ಸಮಸ್ಯೆ ಕೇಳಲು ಸಮಯವಿಲ್ಲ. ದೂರದರ್ಶನದಲ್ಲಿ ಹಿಂದಿನ ಯಾವ ಪ್ರಧಾನಿಯೂ ಈಗಿನವರಂತೆ ನಿತ್ಯ ಬೊಗಳುತ್ತಿರಲಿಲ್ಲ. ಅವರೊಬ್ಬ ನಂ. 1 ಸುಳ್ಳುಗಾರ’ ಎಂದು ಟೀಕಿಸಿದರು.</p><p>‘ದೇಶದ ವಿವಿಧೆಡೆ ಕಾಂಗ್ರೆಸ್ ಸೋತಿರಬಹುದು. ಆದರೆ ಬಿದ್ದವರು ಮೇಲೇಳಲೇ ಬೇಕು. ಇಂದಿಗೂ ಲಕ್ಷಾಂತರ ಜನ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಆಶಿಸುತ್ತಾರೆ. ಕಾಂಗ್ರೆಸ್ ದೇಶಕ್ಕೆ ಕೊಟ್ಟ ಕೊಡುಗೆ ಜನರ ಮುಂದೆ ಇದೆ. ಆದರೆ ಮೋದಿ ಸಾರ್ವಜನಿಕ ಉದ್ಯಮಗಳನ್ನು ಮುಚ್ಚಿ ಅದಾನಿ- ಅಂಬಾನಿಗೆ ದೇಶದ ಆಸ್ತಿಯನ್ನು ಮಾರುತ್ತಿದ್ದಾರೆ’ ಎಂದು ಟೀಕಿಸಿದರು. </p><p>‘ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಸಿದ್ದರಾಮಯ್ಯ ಹಣಕಾಸು ಸಚಿವರಾದಾಗಲೆಲ್ಲ ಲಕ್ಷ್ಮಿ ಕುಂಟಾಗಿ ಖಜಾನೆಯಲ್ಲಿಯೇ ಕುಳಿತಿರುತ್ತಾಳೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>