<p><strong>ಉಡುಪಿ:</strong> ಕಾರ್ಕಳ ತಾಲ್ಲೂಕಿನಲ್ಲಿ ವರ್ಷದ ಹಿಂದೆ ಸಾವನ್ನಪ್ಪಿದ್ದ ಎರಡು ಚಿರತೆಗಳು, ಹಸಿವಿನಿಂದ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ದಿನೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2017ರ ಡಿಸೆಂಬರ್ನಲ್ಲಿ ಬೈಲೂರು ಸಮೀಪದ ಯರ್ಲಪಾಡಿ ಹಾಗೂ ಎಳ್ಳಾರೆ ಎಂಬಲ್ಲಿ 2 ಚಿರತೆಗಳು ಮೃತಪಟ್ಟಿದ್ದವು. ಕೇವಲ 2 ಕಿ.ಮೀ ಅಂತದಲ್ಲಿ ಎರಡು ಚಿರತೆಗಳು ಸತ್ತಿದ್ದರಿಂದ ಸಾವಿನ ಬಗ್ಗೆ ಸಂಶಯ ಮೂಡಿತ್ತು. ಯಾರಾದರೂ ವಿಷ ಹಾಕಿ ಚಿರತೆಗಳನ್ನು ಕೊಂದಿರಬಹುದು, ಇಲ್ಲವೇ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು.</p>.<p>ಹಾಗಾಗಿ, ಕಳೇಬರವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಪರೀಕ್ಷೆ ನಡೆಸಿದಾಗ ಚಿರತೆಗಳ ಹೊಟ್ಟೆ ಖಾಲಿಯಾಗಿರುವುದು ಕಂಡು ಬಂದಿತ್ತು. ಇದರ ಆಧಾರದ ಮೇಲೆ ಹಸಿವಿನಿಂದ ಮೃತಪಟ್ಟಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಆರ್ಎಫ್ಒ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕಾರ್ಕಳ ತಾಲ್ಲೂಕಿನಲ್ಲಿ ವರ್ಷದ ಹಿಂದೆ ಸಾವನ್ನಪ್ಪಿದ್ದ ಎರಡು ಚಿರತೆಗಳು, ಹಸಿವಿನಿಂದ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ದಿನೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2017ರ ಡಿಸೆಂಬರ್ನಲ್ಲಿ ಬೈಲೂರು ಸಮೀಪದ ಯರ್ಲಪಾಡಿ ಹಾಗೂ ಎಳ್ಳಾರೆ ಎಂಬಲ್ಲಿ 2 ಚಿರತೆಗಳು ಮೃತಪಟ್ಟಿದ್ದವು. ಕೇವಲ 2 ಕಿ.ಮೀ ಅಂತದಲ್ಲಿ ಎರಡು ಚಿರತೆಗಳು ಸತ್ತಿದ್ದರಿಂದ ಸಾವಿನ ಬಗ್ಗೆ ಸಂಶಯ ಮೂಡಿತ್ತು. ಯಾರಾದರೂ ವಿಷ ಹಾಕಿ ಚಿರತೆಗಳನ್ನು ಕೊಂದಿರಬಹುದು, ಇಲ್ಲವೇ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು.</p>.<p>ಹಾಗಾಗಿ, ಕಳೇಬರವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಪರೀಕ್ಷೆ ನಡೆಸಿದಾಗ ಚಿರತೆಗಳ ಹೊಟ್ಟೆ ಖಾಲಿಯಾಗಿರುವುದು ಕಂಡು ಬಂದಿತ್ತು. ಇದರ ಆಧಾರದ ಮೇಲೆ ಹಸಿವಿನಿಂದ ಮೃತಪಟ್ಟಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಆರ್ಎಫ್ಒ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>