ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ‘ನಮ್ಮನ್ನು ಬ್ರಿಟಿಷರೇ ಬೆದರಿಸಲಾಗಿಲ್ಲ, ಬಿಜೆಪಿಯಿಂದ ಸಾಧ್ಯವೇ?’ ಎಂದು ಕೇಳಿದೆ.
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಮಾಡಿದ ಭಾಷಣ ಸಂಬಂಧ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ‘ಮೋದಿ ಸರ್ಕಾರವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಹೆದರುತ್ತಿದೆ. ಪ್ರಜಾಪ್ರಭುತ್ವವನ್ನು ವಿನಾಶಗೊಳಿಸುವುದಕ್ಕಾಗಿ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಿದೆ. ಅವರು ಸತ್ಯವನ್ನು ಮಾತನಾಡುವವರ ಬಾಯಿ ಮುಚ್ಚಿಸಲು ಬಯಸುತ್ತಾರೆ. ಈ ಸರ್ವಾಧಿಕಾರವನ್ನು ದೇಶವಾಸಿಗಳು ಸಹಿಸುವುದಿಲ್ಲ. ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಜೈಲಿಗೂ ಹೋಗುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
मोदी सरकार को सबसे ज़्यादा डर श्री @RahulGandhi व कांग्रेस पार्टी से लगता है।
— Mallikarjun Kharge (@kharge) March 24, 2023
लोकतंत्र की हत्या करने लिए उन्होंने श्री गाँधी की संसद सदस्यता रद्द की है।वो सच बोलने वालों का मुँह बंद करना चाहते हैं।
देशवासी ये तानाशाही नहीं सहेंगे।
लोकतंत्र की हिफ़ाज़त के लिए हम जेल तक जाएँगे। pic.twitter.com/bxvwwJik5U
‘ಹೆದರಿರುವ ಅಧಿಕಾರ ವ್ಯವಸ್ಥೆಯೂ ದಂಡ, ಶಿಕ್ಷೆ ಮತ್ತು ತಾರತಮ್ಯದ ಮೂಲಕ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ನನ್ನ ಸಹೋದರರ ಎಂದಿಗೂ ಭಯಪಡುವುದಿಲ್ಲ. ಸತ್ಯವನ್ನೇ ಹೇಳುತ್ತಾ ಬದುಕಿದ್ದೀವಿ, ಸತ್ಯವನ್ನು ಹೇಳುತ್ತಲೇ ಇರುತ್ತೇವೆ. ದೇಶದ ಜನರ ಪರವಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ. ಕೋಟ್ಯಂತರ ದೇಶವಾಸಿಗಳ ಪ್ರೀತಿ ಮತ್ತು ಸತ್ಯದ ಶಕ್ತಿ ಅವರ ಬಳಿ ಇದೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
डरी हुई सत्ता की पूरी मशीनरी साम, दाम, दंड, भेद लगाकर @RahulGandhi जी की आवाज को दबाने की कोशिश कर रही है।
— Priyanka Gandhi Vadra (@priyankagandhi) March 23, 2023
मेरे भाई न कभी डरे हैं, न कभी डरेंगे। सच बोलते हुए जिये हैं, सच बोलते रहेंगे। देश के लोगों की आवाज उठाते रहेंगे।
सच्चाई की ताकत व करोड़ों देशवासियों का प्यार उनके साथ है।
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ‘ನೀವು ರಾಹುಲ್ ಗಾಂಧಿ ಅವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ’ ಎಂದು ವಾಗ್ದಾಳಿ ಮಾಡಿದ್ದಾರೆ.
ನೀವು ಶ್ರೀ @RahulGandhi ಅವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ.
— DK Shivakumar (@DKShivakumar) March 24, 2023
ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ.
’ರಾಹುಲ್ ಗಾಂಧಿ ಅವರನ್ನು ಕಂಡರೆ ಸರ್ವಾಧಿಕಾರಿ ಸೋಕಾಲ್ಡ್ ಪ್ರಧಾನ ಸೇವಕನಿಗೆ ಮೈತುಂಬಾ ಬೆವರು ಒಸರುತ್ತದೆ. ವಿರೋಧ ಪಕ್ಷದ ಜನಪರವಾದ ಧ್ವನಿಗಳನ್ನು ಹತ್ತಿಕ್ಕುವ ಎಲ್ಲಾ ದುರ್ಮಾರ್ಗಗಳನ್ನೂ ಬಳಸುವ ಬಿಜೆಪಿ ಸರ್ಕಾರದ ನೀತಿಗಳು ಹಿಟ್ಲರ್ನನ್ನೂ ನಾಚಿಸುವಂತಿವೆ. ಕಾಂಗ್ರೆಸ್ ಅನ್ನು ಬ್ರಿಟಿಷರೇ ಬೆದರಿಸಲಾಗಿಲ್ಲ, ಬಿಜೆಪಿಯಿಂದ ಸಾಧ್ಯವೇ?’ ಎಂದು ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.
'@RahulGandhi ಅವರನ್ನು ಕಂಡರೆ ಸರ್ವಾಧಿಕಾರಿ ಸೋಕಾಲ್ಡ್ ಪ್ರಧಾನ ಸೇವಕನಿಗೆ ಮೈತುಂಬಾ ಬೆವರು ಒಸರುತ್ತದೆ.
— Karnataka Congress (@INCKarnataka) March 24, 2023
ವಿರೋಧ ಪಕ್ಷದ ಜನ ಪರವಾದ ಧ್ವನಿಗಳನ್ನು ಹತ್ತಿಕ್ಕುವ ಎಲ್ಲಾ ದುರ್ಮಾರ್ಗಗಳನ್ನೂ ಬಳಸುವ @BJP4India ಸರ್ಕಾರ ನೀತಿಗಳು ಹಿಟ್ಲರ್ನನ್ನೂ ನಾಚಿಸುವಂತಿವೆ.
ಕಾಂಗ್ರೆಸ್ನ್ನು ಬ್ರಿಟಿಷರೇ ಬೆದರಿಸಲಾಗಿಲ್ಲ, ಬಿಜೆಪಿಯಿಂದ ಸಾಧ್ಯವೇ? pic.twitter.com/ptFkIfLM1z
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.