<p><strong>ಬೆಂಗಳೂರು:</strong> ಇಂದಿರಾನಗರ ಮೊದಲನೇ ಹಂತದ ಆಟದ ಮೈದಾನದ ಅಭಿವೃದ್ಧಿ ಮತ್ತು ಉದ್ದೇಶಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p> <p>ಈ ಸಂಬಂಧ ಇಂದಿರಾನಗರ ಮೊದಲ ಹಂತದ ನಿವಾಸಿಗಳ ಸಂಘದ ಕಾರ್ಯದರ್ಶಿ ಸ್ವರ್ಣ ವೆಂಕಟರಾಮನ್ ಮತ್ತು ಜಂಟಿ ಕಾರ್ಯದರ್ಶಿ ಶಾನಿ ಸುನ್ನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮದ್ ನವಾಜ್ ನೇತೃತ್ವದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. </p> <p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಹಾಗೂ ಸಂಬಂಧಿಸಿದ ಎಂಜಿನಿಯರ್ ಸೇರಿದಂತೆ ಎಲ್ಲ ಪ್ರತಿ ವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.</p> <p>‘ಆಟದ ಮೈದಾನವನ್ನು ಒತ್ತುವರಿ ಮಾಡುವಂತಹ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಆಕ್ಷೇಪಿಸಿರುವ ಅರ್ಜಿದಾರರು ಪ್ರಸ್ತಾವನೆಯ ಮರುಪರಿಶೀಲನೆಗೆ ಕೋರಿರುವ ಕಾರಣ, ಈ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಬೇಕು’ ಎಂದು ನ್ಯಾಯಪೀಠ ಮಧ್ಯಂತರ ಆದೇಶದಲ್ಲಿ ವಿವರಿಸಿದೆ. </p> <p>‘2024ರ ಆಗಸ್ಟ್ 14ರ ಟೆಂಡರ್ ಅಧಿಸೂಚನೆ ಅನುಸಾರ ಕಾಮಗಾರಿ ಕೈಗೊಂಡಿರುವ ಪ್ರತಿವಾದಿಗಳ ನಡೆಯನ್ನು ನಿರ್ಬಂಧಿಸಬೇಕು’ ಎಂದು ಕೋರಿ ಅರ್ಜಿದಾರರು ಈ ರಿಟ್ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಂದಿರಾನಗರ ಮೊದಲನೇ ಹಂತದ ಆಟದ ಮೈದಾನದ ಅಭಿವೃದ್ಧಿ ಮತ್ತು ಉದ್ದೇಶಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p> <p>ಈ ಸಂಬಂಧ ಇಂದಿರಾನಗರ ಮೊದಲ ಹಂತದ ನಿವಾಸಿಗಳ ಸಂಘದ ಕಾರ್ಯದರ್ಶಿ ಸ್ವರ್ಣ ವೆಂಕಟರಾಮನ್ ಮತ್ತು ಜಂಟಿ ಕಾರ್ಯದರ್ಶಿ ಶಾನಿ ಸುನ್ನಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮದ್ ನವಾಜ್ ನೇತೃತ್ವದ ರಜಾಕಾಲದ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. </p> <p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಹಾಗೂ ಸಂಬಂಧಿಸಿದ ಎಂಜಿನಿಯರ್ ಸೇರಿದಂತೆ ಎಲ್ಲ ಪ್ರತಿ ವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿದೆ.</p> <p>‘ಆಟದ ಮೈದಾನವನ್ನು ಒತ್ತುವರಿ ಮಾಡುವಂತಹ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಆಕ್ಷೇಪಿಸಿರುವ ಅರ್ಜಿದಾರರು ಪ್ರಸ್ತಾವನೆಯ ಮರುಪರಿಶೀಲನೆಗೆ ಕೋರಿರುವ ಕಾರಣ, ಈ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಬೇಕು’ ಎಂದು ನ್ಯಾಯಪೀಠ ಮಧ್ಯಂತರ ಆದೇಶದಲ್ಲಿ ವಿವರಿಸಿದೆ. </p> <p>‘2024ರ ಆಗಸ್ಟ್ 14ರ ಟೆಂಡರ್ ಅಧಿಸೂಚನೆ ಅನುಸಾರ ಕಾಮಗಾರಿ ಕೈಗೊಂಡಿರುವ ಪ್ರತಿವಾದಿಗಳ ನಡೆಯನ್ನು ನಿರ್ಬಂಧಿಸಬೇಕು’ ಎಂದು ಕೋರಿ ಅರ್ಜಿದಾರರು ಈ ರಿಟ್ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>