ಮಂಗಳವಾರ, 26 ಆಗಸ್ಟ್ 2025
×
ADVERTISEMENT
ADVERTISEMENT

ಸರ್ಕಾರಿ ನೌಕರರ ಬಳಿ BPL ಪಡಿತರ ಚೀಟಿ: ಅನರ್ಹ ಕಾರ್ಡ್‌ಗಳನ್ನು ತಡೆ ಹಿಡಿಯಿರಿ: CM

Published : 31 ಮೇ 2025, 23:30 IST
Last Updated : 31 ಮೇ 2025, 23:30 IST
ಫಾಲೋ ಮಾಡಿ
Comments
ಡಿಸಿ, ಸಿಇಒ, ಎಸ್‌ಪಿ ಪ್ರತಿಷ್ಠೆ ಬಿಟ್ಟು ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡಬೇಕು. ಸಮನ್ವಯ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ
ಸಿದ್ದರಾಮಯ್ಯ, ಮುಖ್ಯಮಂತ್ರಿ 
‘ಆನೆ– ಮಾನವ ಸಂಘರ್ಷಕ್ಕೆ ಜೇನು ನೊಣ ಯೋಜನೆ’
ಹಲವು ಕಡೆ ಮಾನವ ಪ್ರಾಣಿ ಸಂಘರ್ಷದ ವೇಳೆ ಪ್ರಾಣಹಾನಿ ಆಗಿರುವ ಬಗ್ಗೆ ಮತ್ತು ಇದಕ್ಕೆ ವೈಜ್ಞಾನಿಕ ಪರಿಹಾರ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಸಚಿವ ಸಂತೋಷ್ ಲಾಡ್, ಜೇನು ನೊಣ ಬೇಲಿ– ಜೇನು ಕೃಷಿ ಬಗ್ಗೆ ವಿವರಿಸಿದರು. ‘ಜೇನು ನೊಣ ಇರುವ ಪ್ರದೇಶಕ್ಕೆ ಆನೆಗಳು ಬರುವುದಿಲ್ಲ. ಹೀಗಾಗಿ, ಆನೆ ಬ್ಯಾರಿಕೇಡ್ ಹಾಕಿರುವ ಮಾರ್ಗದುದ್ದಕ್ಕೂ ಜೇನು ಕೃಷಿ ಮಾಡಿದರೆ ರೈತರಿಗೂ ಅನುಕೂಲ, ಆನೆಗಳ ಕಾಟವೂ ತಪ್ಪುತ್ತದೆ’ ಎಂದು ಸಲಹೆ ನೀಡಿದರು.
‘ದ್ವೇಷ ಭಾಷಣ: ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?’
‘ದ್ವೇಷ ಭಾಷಣದ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ ದ್ವೇಷ ಭಾಷಣದ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದರು. ‘ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT