<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಪತ್ರಕರ್ತರಾದ ಬಿ.ವೆಂಕಟ್ ಸಿಂಗ್ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಳೆದ ವಾರ ನಡೆದ ಸಭೆಯಲ್ಲಿ ಈ ಮೂವರ ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಹೆಸರುಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.</p>.<p>ವಿನ್ಸೆಂಟ್ ಡಿಸೋಜ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ಬೆಂಗಳೂರು ವಿಭಾಗಕ್ಕೂ, ವೆಂಕಟ್ ಸಿಂಗ್ ಅವರನ್ನು ಕಲಬುರಗಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ.</p>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಪತ್ರಕರ್ತರಾದ ಬಿ.ವೆಂಕಟ್ ಸಿಂಗ್ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಳೆದ ವಾರ ನಡೆದ ಸಭೆಯಲ್ಲಿ ಈ ಮೂವರ ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಹೆಸರುಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.</p>.<p>ವಿನ್ಸೆಂಟ್ ಡಿಸೋಜ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ಬೆಂಗಳೂರು ವಿಭಾಗಕ್ಕೂ, ವೆಂಕಟ್ ಸಿಂಗ್ ಅವರನ್ನು ಕಲಬುರಗಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ.</p>