ಅರ್ಜಿಯಲ್ಲಿ ಏನಿದೆ?: ‘ರಾಜ್ಯ ಸರ್ಕಾರ 2019ರಲ್ಲಿ ಬೆಳಗಾವಿ ಮತ್ತು ಕಲಬುರಗಿಯಲ್ಲಿ ಮಾಹಿತಿ ಆಯೋಗದ ಪೀಠಗಳನ್ನು ರಚನೆ ಮಾಡಿದೆ. ಆದರೆ, ಕಲಬುರಗಿ ಪೀಠ ಇನ್ನೂ ಕಾರ್ಯಾರಂಭ ಮಾಡಿಲ್ಲ. ಈ ಪೀಠಕ್ಕೆ 2022ರ ಏಪ್ರಿಲ್ನಲ್ಲಿ ರವೀಂದ್ರ ಢಾಕಪ್ಪ ಅವರನ್ನು ಆಯುಕ್ತರನ್ನಾಗಿ ನೇಮಕ ಮಾಡಲಾಯಿತು. ಆದರೆ, ಅವರು ಕಲಬುರಗಿ ಬದಲಿಗೆ ಬೆಂಗಳೂರಿನಲ್ಲೇ ಕಲಾಪ ನಡೆಸುತ್ತಿದ್ದಾರೆ‘ ಎಂದು ಅರ್ಜಿಯಲ್ಲಿ ದೂರಲಾಗಿದೆ.