<p><strong>ಬೆಂಗಳೂರು</strong>: ‘ಕೋವಿಡ್ ಸಾಂಕ್ರಾಮಿಕ ಕಾಯಿಲೆ ಈಗ ಬಹುತೇಕ ಕಡಿಮೆಯಾಗಿದೆ. ಹೀಗಾಗಿ, ಮನೆಯಿಂದ ಕೆಲಸ ಮಾಡುವ ಅವಕಾಶವನ್ನು ಕಂಪನಿಗಳು ಇನ್ನು ಮುಂದೆ ಸ್ಥಗಿತಗೊಳಿಸಬೇಕು’ ಎಂದು ಇನ್ಫೊಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಪ್ರತಿಪಾದಿಸಿದರು.</p>.<p>ಡೆಕ್ಕನ್ ಹೆರಾಲ್ಡ್ ಶುಕ್ರವಾರ ಆಯೋಜಿಸಿದ್ದ ‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಮಾತನಾಡಿದ ಅವರು, ಮನೆಯಿಂದ ಕೆಲಸ ಮಾಡುವ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಬೇಕು ಎಂದು ಪ್ರತಿಪಾದಿಸಿದರು.</p>.<p>‘ಮನೆಯಿಂದ ಕೆಲಸ ಮಾಡುವುದು ನನಗಂತೂ ಇಷ್ಟ ಇಲ್ಲ. ಮನೆಯಿಂದ ಉದ್ಯೋಗಿಗಳು ಕೆಲಸ ಮಾಡಿದರೆ ಕೆಲಸದಲ್ಲಿ ಉತ್ಕೃಷ್ಟತೆ, ಸೃಜನಶೀಲತೆಯೂ ಸಾಧ್ಯವಾಗುವುದಿಲ್ಲ. ಕೆಲಸದ ಗುಣಮಟ್ಟದ ಮೇಲೆಯೂ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p><strong>ಸೈಬರ್ ಅಪರಾಧಗಳು ಹೆಚ್ಚಳ: ಡಿಜಿಪಿ</strong></p>.<p>ಬೆಂಗಳೂರು: ‘ತಂತ್ರಜ್ಞಾನ ಅಭಿವೃದ್ಧಿಯಾದಂತೆ ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂದಿನ 10 ವರ್ಷಗಳಲ್ಲಿ 100 ಪಟ್ಟು ಹೆಚ್ಚಾಗಬಹುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಎಚ್ಚರಿಕೆ ನೀಡಿದರು.</p>.<p>‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಮಾತನಾಡಿದ ಅವರು, ‘ವರ್ಚುವಲ್ ಸ್ವರೂಪದ ಅಪರಾಧಗಳು ಹೆಚ್ಚುತ್ತಿವೆ. ಮುಖ ಮತ್ತು ಹೆಸರು ಇಲ್ಲದೆಯೇ ಜಗತ್ತಿನ ಯಾವುದೋ ಸ್ಥಳದಲ್ಲಿ ಕುಳಿತು ಅಪರಾಧ ಮಾಡುವವರನ್ನು ಪತ್ತೆ ಮಾಡುವುದು ಸಹ ಕಷ್ಟಸಾಧ್ಯವಾಗಿದೆ’ ಎಂದರು.</p>.<p>‘ಬೀದಿ ವ್ಯಾಪಾರಿಗಳ ಮೇಲೇಕೆ ಕಣ್ಣು?’: ‘ಸಂಚಾರಕ್ಕೆ ತೊಡಕಾಗಿದ್ದಾರೆ ಎಂದು ಬೀದಿ ವ್ಯಾಪಾರಿಗಳ ಮೇಲೆ ದೂರುವುದು ಸಹಜವಾಗಿದೆ. ಆದರೆ, ಬೆಂಗಳೂರು ನಗರದಲ್ಲಿ ರಸ್ತೆಯಲ್ಲೇ ಸಾವಿರಾರು ವಾಹನಗಳನ್ನು ಪಾರ್ಕಿಂಗ್ ಮಾಡಲಾಗಿದೆ. ಇವುಗಳ ಬಗ್ಗೆ ಯಾರು ದೂರುವುದಿಲ್ಲ. ಬೀದಿ ವ್ಯಾಪಾರಿಗಳನ್ನು ಮಾತ್ರ ಸುಲಭವಾಗಿ ಗುರಿ ಮಾಡುತ್ತಾರೆ’ ಎಂದು ಅವರುಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋವಿಡ್ ಸಾಂಕ್ರಾಮಿಕ ಕಾಯಿಲೆ ಈಗ ಬಹುತೇಕ ಕಡಿಮೆಯಾಗಿದೆ. ಹೀಗಾಗಿ, ಮನೆಯಿಂದ ಕೆಲಸ ಮಾಡುವ ಅವಕಾಶವನ್ನು ಕಂಪನಿಗಳು ಇನ್ನು ಮುಂದೆ ಸ್ಥಗಿತಗೊಳಿಸಬೇಕು’ ಎಂದು ಇನ್ಫೊಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಪ್ರತಿಪಾದಿಸಿದರು.</p>.<p>ಡೆಕ್ಕನ್ ಹೆರಾಲ್ಡ್ ಶುಕ್ರವಾರ ಆಯೋಜಿಸಿದ್ದ ‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಮಾತನಾಡಿದ ಅವರು, ಮನೆಯಿಂದ ಕೆಲಸ ಮಾಡುವ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಬೇಕು ಎಂದು ಪ್ರತಿಪಾದಿಸಿದರು.</p>.<p>‘ಮನೆಯಿಂದ ಕೆಲಸ ಮಾಡುವುದು ನನಗಂತೂ ಇಷ್ಟ ಇಲ್ಲ. ಮನೆಯಿಂದ ಉದ್ಯೋಗಿಗಳು ಕೆಲಸ ಮಾಡಿದರೆ ಕೆಲಸದಲ್ಲಿ ಉತ್ಕೃಷ್ಟತೆ, ಸೃಜನಶೀಲತೆಯೂ ಸಾಧ್ಯವಾಗುವುದಿಲ್ಲ. ಕೆಲಸದ ಗುಣಮಟ್ಟದ ಮೇಲೆಯೂ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p><strong>ಸೈಬರ್ ಅಪರಾಧಗಳು ಹೆಚ್ಚಳ: ಡಿಜಿಪಿ</strong></p>.<p>ಬೆಂಗಳೂರು: ‘ತಂತ್ರಜ್ಞಾನ ಅಭಿವೃದ್ಧಿಯಾದಂತೆ ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂದಿನ 10 ವರ್ಷಗಳಲ್ಲಿ 100 ಪಟ್ಟು ಹೆಚ್ಚಾಗಬಹುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಎಚ್ಚರಿಕೆ ನೀಡಿದರು.</p>.<p>‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಮಾತನಾಡಿದ ಅವರು, ‘ವರ್ಚುವಲ್ ಸ್ವರೂಪದ ಅಪರಾಧಗಳು ಹೆಚ್ಚುತ್ತಿವೆ. ಮುಖ ಮತ್ತು ಹೆಸರು ಇಲ್ಲದೆಯೇ ಜಗತ್ತಿನ ಯಾವುದೋ ಸ್ಥಳದಲ್ಲಿ ಕುಳಿತು ಅಪರಾಧ ಮಾಡುವವರನ್ನು ಪತ್ತೆ ಮಾಡುವುದು ಸಹ ಕಷ್ಟಸಾಧ್ಯವಾಗಿದೆ’ ಎಂದರು.</p>.<p>‘ಬೀದಿ ವ್ಯಾಪಾರಿಗಳ ಮೇಲೇಕೆ ಕಣ್ಣು?’: ‘ಸಂಚಾರಕ್ಕೆ ತೊಡಕಾಗಿದ್ದಾರೆ ಎಂದು ಬೀದಿ ವ್ಯಾಪಾರಿಗಳ ಮೇಲೆ ದೂರುವುದು ಸಹಜವಾಗಿದೆ. ಆದರೆ, ಬೆಂಗಳೂರು ನಗರದಲ್ಲಿ ರಸ್ತೆಯಲ್ಲೇ ಸಾವಿರಾರು ವಾಹನಗಳನ್ನು ಪಾರ್ಕಿಂಗ್ ಮಾಡಲಾಗಿದೆ. ಇವುಗಳ ಬಗ್ಗೆ ಯಾರು ದೂರುವುದಿಲ್ಲ. ಬೀದಿ ವ್ಯಾಪಾರಿಗಳನ್ನು ಮಾತ್ರ ಸುಲಭವಾಗಿ ಗುರಿ ಮಾಡುತ್ತಾರೆ’ ಎಂದು ಅವರುಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>