<p>ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್ವೇರ್ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುತ್ತಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕೊರೊನಾ ವೈರಾಣು ಜನರಲ್ಲಿ ಭೀತಿಯನ್ನುಂಟು ಮಾಡಿದ್ದು, ಇದರ ತಡೆಗೆ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಆರೋಪಿ ಜನರನ್ನು ಪ್ರಚೋದಿಸುವ ಪೋಸ್ಟ್ ಅನ್ನು ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ’ ಎಂದರು.</p>.<p>‘Spread the word to end the word’ ಎಂದು ತನ್ನ ಫೋಟೊ ಸಮೇತವೇ ಆರೋಪಿ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಕೆಲ ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಆರೋಪಿ ಕೃತ್ಯದ ಬಗ್ಗೆ ಕಂಪನಿ ಆಡಳಿತ ಮಂಡಳಿಗೂ ಮಾಹಿತಿ ನೀಡಲಾಗಿದೆ. ಲಾಕ್ಡೌನ್ನಿಂದಾಗಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಮುಜೀಬ್ ಸಹ ಅದೇ ರೀತಿಯಲ್ಲೇ ಮನೆಯಿಂದ ಕೆಲಸ ಮಾಡುತ್ತಿದ್ದ. ಇದೇ ಸಂದರ್ಭದಲ್ಲೇ ಪೋಸ್ಟ್ ಅಪ್ಲೋಡ್ ಮಾಡಿದ್ದ’ ಎಂದರು.</p>.<p class="Subhead"><strong>ತಮಾಷೆಗೆ ಬರೆದುಕೊಂಡೆ:</strong> ‘ಎಲ್ಲೆಡೆ ಕೊರೊನಾ ವೈರಾಣು ಹರಡುವಿಕೆ ಭಯವಿದೆ. ಹೀಗಾಗಿ, ತಮಾಷೆಗಾಗಿ ಪೋಸ್ಟ್ ಪ್ರಕಟಿಸಿದ್ದೆ’ ಎಂಬುದಾಗಿ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>‘ನಗರದಲ್ಲೇ ಹುಟ್ಟಿರುವ ಆರೋಪಿ, ಇಲ್ಲಿಯೇ ಶಿಕ್ಷಣ ಮುಗಿಸಿ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾನೆ. ಈತ ಈ ರೀತಿ ಪೋಸ್ಟ್ ಪ್ರಕಟಿಸಿದ್ದರ ಹಿಂದೆ ಏನಾದರೂ ಸಂಚು ಇರಬಹುದೆಂಬ ಅನುಮಾನವಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್ವೇರ್ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುತ್ತಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕೊರೊನಾ ವೈರಾಣು ಜನರಲ್ಲಿ ಭೀತಿಯನ್ನುಂಟು ಮಾಡಿದ್ದು, ಇದರ ತಡೆಗೆ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಆರೋಪಿ ಜನರನ್ನು ಪ್ರಚೋದಿಸುವ ಪೋಸ್ಟ್ ಅನ್ನು ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ’ ಎಂದರು.</p>.<p>‘Spread the word to end the word’ ಎಂದು ತನ್ನ ಫೋಟೊ ಸಮೇತವೇ ಆರೋಪಿ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಕೆಲ ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಆರೋಪಿ ಕೃತ್ಯದ ಬಗ್ಗೆ ಕಂಪನಿ ಆಡಳಿತ ಮಂಡಳಿಗೂ ಮಾಹಿತಿ ನೀಡಲಾಗಿದೆ. ಲಾಕ್ಡೌನ್ನಿಂದಾಗಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಮುಜೀಬ್ ಸಹ ಅದೇ ರೀತಿಯಲ್ಲೇ ಮನೆಯಿಂದ ಕೆಲಸ ಮಾಡುತ್ತಿದ್ದ. ಇದೇ ಸಂದರ್ಭದಲ್ಲೇ ಪೋಸ್ಟ್ ಅಪ್ಲೋಡ್ ಮಾಡಿದ್ದ’ ಎಂದರು.</p>.<p class="Subhead"><strong>ತಮಾಷೆಗೆ ಬರೆದುಕೊಂಡೆ:</strong> ‘ಎಲ್ಲೆಡೆ ಕೊರೊನಾ ವೈರಾಣು ಹರಡುವಿಕೆ ಭಯವಿದೆ. ಹೀಗಾಗಿ, ತಮಾಷೆಗಾಗಿ ಪೋಸ್ಟ್ ಪ್ರಕಟಿಸಿದ್ದೆ’ ಎಂಬುದಾಗಿ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>‘ನಗರದಲ್ಲೇ ಹುಟ್ಟಿರುವ ಆರೋಪಿ, ಇಲ್ಲಿಯೇ ಶಿಕ್ಷಣ ಮುಗಿಸಿ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾನೆ. ಈತ ಈ ರೀತಿ ಪೋಸ್ಟ್ ಪ್ರಕಟಿಸಿದ್ದರ ಹಿಂದೆ ಏನಾದರೂ ಸಂಚು ಇರಬಹುದೆಂಬ ಅನುಮಾನವಿದ್ದು, ಆ ನಿಟ್ಟಿನಲ್ಲಿ ತನಿಖೆ ಮುಂದುವರಿಸಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>