ದಾವಣಗೆರೆ: ಪ್ರತಿ ಮನೆಯಲ್ಲಿ ನಾಯಕ ಹುಟ್ಟಬೇಕು. ಶಿಕ್ಷಣ, ಸ್ವಾಭಿಮಾನ ಮತ್ತು ಪರಿಶ್ರಮದಿಂದ ನಾಯಕನಾಗಬೇಕು. ಅದಕ್ಕಾಗಿ ಪ್ರತಿ ಮನೆಯಲ್ಲಿ ಗ್ರಂಥಾಲಯಗಳಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದರು. ರಾಜನಹಳ್ಳಿಯಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.