<p><strong>ಬೆಂಗಳೂರು</strong>: ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್ಟಿ ವಂಚಿಸುತ್ತಿದ್ದ ಬೃಹತ್ ಅಂತರರಾಜ್ಯ ಜಾಲವೊಂದನ್ನು ಪತ್ತೆ ಮಾಡಿರುವ ರಾಜ್ಯ ವಾಣಿಜ್ಯ ಇಲಾಖೆ ಅಧಿಕಾರಿಗಳು, ₹39 ಕೋಟಿ ವಸೂಲಿಗೆ ಕ್ರಮ ತೆಗೆದುಕೊಂಡಿದ್ದಾರೆ.</p>.<p>ಜನ ಸಾಮಾನ್ಯರ ಆಧಾರ್ ಮತ್ತು ಪ್ಯಾನ್ ವಿವರ ಬಳಸಿಕೊಂಡು ಜಿಎಸ್ಟಿ ನೋಂದಣಿ ಮಾಡಿ, ತೆರಿಗೆ ವಂಚಿಸುತ್ತಿದ್ದ ಜಾಲ ರಾಜ್ಯದಲ್ಲಿ ಸಕ್ರಿಯವಾಗಿರುವ ಬಗ್ಗೆ 2023ರಲ್ಲಿ ದೂರು ಬಂದಿತ್ತು. ಅದರಂತೆ ತನಿಖೆ ಆರಂಭಿಸಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಈ ಜಾಲದ ಕಿಂಗ್ಪಿನ್ ಕೈಲಾಶ್ ಬೀಷ್ಣೋಯಿ ಎಂಬುವರನ್ನು ಬಂಧಿಸಿದ್ದಾರೆ.</p>.<p>ನಗರದ ಮುರುಗೇಶಪಾಳ್ಯದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲ ವ್ಯಕ್ತಿಗಳು ಇತರರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಬಳಸಿಕೊಂಡು ಒಂದೇ ದಿನ ಹತ್ತು ಬ್ಯಾಂಕ್ ಖಾತೆ ತೆರೆಯಲು ಯತ್ನಿಸಿದ್ದರು. ಈ ಸಂಬಂಧ ಜೀವನ ಬಿಮಾ ನಗರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದರು.</p>.<p>‘ಈ ಜಾಲವು ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿರುವುದು ಪತ್ತೆಯಾಗಿತ್ತು. ಕರ್ನಾಟಕವನ್ನೇ ಕೇಂದ್ರವಾಗಿರಿಸಿಕೊಂಡು ಕೈಲಾಶ್ ಕಾರ್ಯನಿರ್ವಹಿಸುತ್ತಿದ್ದ. ಕರ್ನಾಟಕದಲ್ಲೇ 17 ಕಂಪನಿಗಳನ್ನು ನೋಂದಣಿ ಮಾಡಿಸಿದ್ದ. ಆ ಕಂಪನಿಗಳ ಹೆಸರಿನಲ್ಲಿ, ಕಬ್ಬಿಣದ ಗುಜರಿ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳಿಗೆ ನಕಲಿ ಇನ್ವಾಯ್ಸ್ಗಳನ್ನು ಸೃಷ್ಟಿಸಿಕೊಟ್ಟಿದ್ದ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>‘2024ರ ಡಿಸೆಂಬರ್ ವೇಳೆಗೆ ಕೈಲಾಶ್ನ ಸಹಚರ, ರೋಹಿತ್ ಎಂಬಾತನನ್ನು ಬಂಧಿಸಲಾಗಿತ್ತು. ಕೈಲಾಶ್ನ ಕರ್ನಾಟಕದಲ್ಲಿನ ವ್ಯವಹಾರಗಳನ್ನು ರೋಹಿತ್ ನೋಡಿಕೊಳ್ಳುತ್ತಿದ್ದ. ಆತ ನೀಡಿದ ಮಾಹಿತಿಯ ಮೇರೆಗೆ ಕೈಲಾಶ್ನ ಬಂಧನಕ್ಕೆ ಕಾರ್ಯಾಚರಣೆ ರೂಪಿಸಲಾಗಿತ್ತು’ ಎಂದು ಮಾಹಿತಿ ನೀಡಿದೆ.</p>.<p>‘ರೋಹಿತ್ ಬಂಧನದ ಬೆನ್ನಲ್ಲೇ ಕೈಲಾಶ್ ತಲೆಮರೆಸಿಕೊಂಡಿದ್ದ. ಆನಂತರ ಆತ ತೆಲಂಗಾಣ, ಛತ್ತೀಸಗಡ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಯಾಣ ಮಾಡಿದ್ದ. ಈ ಅವಧಿಯಲ್ಲಿ ಆತ ತನ್ನ ಲೊಕೇಷನ್ ಮಾಹಿತಿ ಸಿಗಬಾರದು ಎಂದು 14 ಮೊಬೈಲ್ಗಳನ್ನು ಬದಲಿಸಿದ್ದ’ ಎಂದು ವಿವರಿಸಿವೆ.</p>.<p>‘ಆತ ರಾಜಸ್ಥಾನದ ಜಾಲೋರ್ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆಯಿತು. ಅಲ್ಲಿನ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡಸಿ ಆತನನ್ನು ಬಂಧಿಸಲಾಯಿತು. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, ಕಸ್ಟಡಿಗೆ ಪಡೆಯಲಾಗಿದೆ’ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಕಲಿ ಇನ್ವಾಯ್ಸ್ ಸೃಷ್ಟಿಸಿ ಜಿಎಸ್ಟಿ ವಂಚಿಸುತ್ತಿದ್ದ ಬೃಹತ್ ಅಂತರರಾಜ್ಯ ಜಾಲವೊಂದನ್ನು ಪತ್ತೆ ಮಾಡಿರುವ ರಾಜ್ಯ ವಾಣಿಜ್ಯ ಇಲಾಖೆ ಅಧಿಕಾರಿಗಳು, ₹39 ಕೋಟಿ ವಸೂಲಿಗೆ ಕ್ರಮ ತೆಗೆದುಕೊಂಡಿದ್ದಾರೆ.</p>.<p>ಜನ ಸಾಮಾನ್ಯರ ಆಧಾರ್ ಮತ್ತು ಪ್ಯಾನ್ ವಿವರ ಬಳಸಿಕೊಂಡು ಜಿಎಸ್ಟಿ ನೋಂದಣಿ ಮಾಡಿ, ತೆರಿಗೆ ವಂಚಿಸುತ್ತಿದ್ದ ಜಾಲ ರಾಜ್ಯದಲ್ಲಿ ಸಕ್ರಿಯವಾಗಿರುವ ಬಗ್ಗೆ 2023ರಲ್ಲಿ ದೂರು ಬಂದಿತ್ತು. ಅದರಂತೆ ತನಿಖೆ ಆರಂಭಿಸಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಈ ಜಾಲದ ಕಿಂಗ್ಪಿನ್ ಕೈಲಾಶ್ ಬೀಷ್ಣೋಯಿ ಎಂಬುವರನ್ನು ಬಂಧಿಸಿದ್ದಾರೆ.</p>.<p>ನಗರದ ಮುರುಗೇಶಪಾಳ್ಯದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲ ವ್ಯಕ್ತಿಗಳು ಇತರರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಬಳಸಿಕೊಂಡು ಒಂದೇ ದಿನ ಹತ್ತು ಬ್ಯಾಂಕ್ ಖಾತೆ ತೆರೆಯಲು ಯತ್ನಿಸಿದ್ದರು. ಈ ಸಂಬಂಧ ಜೀವನ ಬಿಮಾ ನಗರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ನ ಶಾಖಾ ವ್ಯವಸ್ಥಾಪಕ ದೂರು ನೀಡಿದ್ದರು. ಆ ದೂರಿನ ಆಧಾರದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದರು.</p>.<p>‘ಈ ಜಾಲವು ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿರುವುದು ಪತ್ತೆಯಾಗಿತ್ತು. ಕರ್ನಾಟಕವನ್ನೇ ಕೇಂದ್ರವಾಗಿರಿಸಿಕೊಂಡು ಕೈಲಾಶ್ ಕಾರ್ಯನಿರ್ವಹಿಸುತ್ತಿದ್ದ. ಕರ್ನಾಟಕದಲ್ಲೇ 17 ಕಂಪನಿಗಳನ್ನು ನೋಂದಣಿ ಮಾಡಿಸಿದ್ದ. ಆ ಕಂಪನಿಗಳ ಹೆಸರಿನಲ್ಲಿ, ಕಬ್ಬಿಣದ ಗುಜರಿ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳಿಗೆ ನಕಲಿ ಇನ್ವಾಯ್ಸ್ಗಳನ್ನು ಸೃಷ್ಟಿಸಿಕೊಟ್ಟಿದ್ದ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.</p>.<p>‘2024ರ ಡಿಸೆಂಬರ್ ವೇಳೆಗೆ ಕೈಲಾಶ್ನ ಸಹಚರ, ರೋಹಿತ್ ಎಂಬಾತನನ್ನು ಬಂಧಿಸಲಾಗಿತ್ತು. ಕೈಲಾಶ್ನ ಕರ್ನಾಟಕದಲ್ಲಿನ ವ್ಯವಹಾರಗಳನ್ನು ರೋಹಿತ್ ನೋಡಿಕೊಳ್ಳುತ್ತಿದ್ದ. ಆತ ನೀಡಿದ ಮಾಹಿತಿಯ ಮೇರೆಗೆ ಕೈಲಾಶ್ನ ಬಂಧನಕ್ಕೆ ಕಾರ್ಯಾಚರಣೆ ರೂಪಿಸಲಾಗಿತ್ತು’ ಎಂದು ಮಾಹಿತಿ ನೀಡಿದೆ.</p>.<p>‘ರೋಹಿತ್ ಬಂಧನದ ಬೆನ್ನಲ್ಲೇ ಕೈಲಾಶ್ ತಲೆಮರೆಸಿಕೊಂಡಿದ್ದ. ಆನಂತರ ಆತ ತೆಲಂಗಾಣ, ಛತ್ತೀಸಗಡ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಯಾಣ ಮಾಡಿದ್ದ. ಈ ಅವಧಿಯಲ್ಲಿ ಆತ ತನ್ನ ಲೊಕೇಷನ್ ಮಾಹಿತಿ ಸಿಗಬಾರದು ಎಂದು 14 ಮೊಬೈಲ್ಗಳನ್ನು ಬದಲಿಸಿದ್ದ’ ಎಂದು ವಿವರಿಸಿವೆ.</p>.<p>‘ಆತ ರಾಜಸ್ಥಾನದ ಜಾಲೋರ್ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆಯಿತು. ಅಲ್ಲಿನ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡಸಿ ಆತನನ್ನು ಬಂಧಿಸಲಾಯಿತು. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, ಕಸ್ಟಡಿಗೆ ಪಡೆಯಲಾಗಿದೆ’ ಎಂದು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>