<p><strong>ಬೆಂಗಳೂರು</strong>: ವಿವಿಧ ಇಲಾಖೆಗಳಲ್ಲಿನ 56,432 ಹುದ್ದೆಗಳ ನೇಮಕಾತಿಗೆ ಮುನ್ನ ಒಳ ಮೀಸಲಾತಿಯನ್ನು ಅನ್ವಯಿಸಬೇಕು ಎಂಬ ವಿಷಯದಲ್ಲಿ ಬಲಗೈ–ಎಡಗೈ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರ ಮಧ್ಯೆ ಒಮ್ಮತ ಮೂಡದೇ ಇದ್ದುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಯಾವುದೇ ನಿರ್ಣಯಕ್ಕೆ ಬಾರದೇ ಕೊನೆಗೊಂಡಿದೆ.</p>.<p>ಪರಿಶಿಷ್ಟ ಜಾತಿಗೆ ನಿಗದಿಯಾಗಿರುವ ಶೇ 15 ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಕಲ್ಪಿಸುವಂತೆ ಎಡಗೈ ಸಮುದಾಯದವರು ಪಟ್ಟು ಹಿಡಿದಿದ್ದಾರೆ. ರೋಸ್ಟರ್ ಗೊಂದಲ, ನ್ಯಾಯಾಲಯದ ಅಡೆತಡೆ ನಿವಾರಣೆ ಆಗುವರೆಗೆ ಒಳ ಮೀಸಲಾತಿ ರಹಿತವಾಗಿ ಶೇ 15 ಮೀಸಲಾತಿ ಅನ್ವಯವೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು ಎಂದು ಬಲಗೈ ಸಮುದಾಯ ಒತ್ತಡ ಹೇರಿದೆ. ಇದೇ ವಿಷಯ ಸಚಿವ ಸಂಪುಟ ಸಭೆಯಲ್ಲೂ ಪ್ರತಿಧ್ವನಿಸಿದೆ.</p>.<p>ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಬಲಗೈ–ಎಡಗೈ ಪ್ರತಿನಿಧಿಸುವ ಸಚಿವರ ಮಧ್ಯೆ ಕಾವೇರಿದ ಚರ್ಚೆ ನಡೆಯಿತು. ಒಳಮೀಸಲಾತಿ ಅನ್ವಯಿಸದೇ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಸುದೀರ್ಘ ಅವಧಿಯಿಂದ ಮೀಸಲಾತಿ ಸಿಗದೇ ಅನ್ಯಾಯಕ್ಕೆ ಒಳಗಾಗಿರುವ ಮಾದಿಗರೂ ಸೇರಿದಂತೆ ಎಡಗೈ ಗುಂಪಿನ ಜಾತಿಯವರಿಗೆ ವಂಚಿಸಿದಂತಾಗುತ್ತದೆ ಎಂದು ಈ ಸಮುದಾಯವನ್ನು ಪ್ರತಿನಿಧಿಸುವ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪುರ ಏರಿದ ಧ್ವನಿಯಲ್ಲಿಯೇ ತಮ್ಮ ವಾದ ಮಂಡಿಸಿದರು ಎಂದು ಗೊತ್ತಾಗಿದೆ.</p>.<p>ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಹೆಚ್ಚಿಸಿರುವುದಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯಿಂದಾಗಿ ಎಲ್ಲ ನೇಮಕಾತಿ ಪ್ರಕ್ರಿಯೆಗಳು ನಿಂತು ಹೋಗಿವೆ. ಶೇ 15ರಿಂದ ಶೇ 17ಕ್ಕೆ ಹೆಚ್ಚಿಸಿರುವ ಪರಿಶಿಷ್ಟ ಜಾತಿಯವರ ಮೀಸಲಾತಿ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿರುವ ಪರಿಶಿಷ್ಟ ಪಂಗಡದ ಮೀಸಲಾತಿಯಡಿ ನೇಮಕಾತಿ ಮಾಡಲು ಈಗ ಸಾಧ್ಯವಾಗದು. ಪರಿಶಿಷ್ಟ ಜಾತಿಗೆ ಶೇ 2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 4ರಷ್ಟು ಹೆಚ್ಚಿಸಿರುವ ಮೀಸಲು ಪ್ರಮಾಣದ ಹುದ್ದೆಗಳನ್ನು ಕಾಯ್ದಿರಿಸಿಯೇ ನೇಮಕಾತಿ ಮಾಡಲಾಗುತ್ತದೆ. ಈಗಲೂ ನೇಮಕ ಮಾಡದೇ ಇದ್ದರೆ ನಿರುದ್ಯೋಗಿಗಳ ಪ್ರತಿರೋಧ ಎದುರಿಸುವುದು ಕಷ್ಟ ಎಂದು ಬಲಗೈ ಸಮುದಾಯ ಪ್ರತಿನಿಧಿಸುವ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ ಮೊದಲಾದವರು ತಮ್ಮ ವಾದ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.</p>.<p>ಎರಡೂ ಸಮುದಾಯದವರೂ ತಮ್ಮ ಪಟ್ಟು ಬಿಡದೇ ಇದ್ದುದರಿಂದ, ಮತ್ತೊಮ್ಮೆ ಸಭೆ ಸೇರಿ ಈ ವಿಷಯವನ್ನು ಚರ್ಚಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.</p>.<p><strong>ಮುಂದಿನ ಸಭೆ ಅಧಿಕಾರ ಸಿ.ಎಂ.ಗೆ</strong></p><p>‘ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಇವತ್ತಿನ ಸಂಪುಟ ಸಭೆಯಲ್ಲಿ ಈ ವಿಷಯವಾಗಿ ವಿಸ್ತೃತ ಚರ್ಚೆ ನಡೆಯಿತು. ಆದರೆ, ಚರ್ಚೆ ಅಪೂರ್ಣವಾಗಿದೆ. ಚರ್ಚೆಯನ್ನು ಮುಂದುವರೆಸಲು ಮುಖ್ಯಮಂತ್ರಿ<br>ಯವರಿಗೆ ಅಧಿಕಾರ ನೀಡಲಾಗಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವಿಷಯವಾಗಿ ಮುಂದಿನ ಸಂಪುಟ ಸಭೆ ಯಾವಾಗ ಸೇರಬೇಕು ಎಂಬ ಬಗ್ಗೆ ಮುಖ್ಯಮಂತ್ರಿಯವರೇ ತೀರ್ಮಾನಿಸುತ್ತಾರೆ. ಆದಷ್ಟು ಬೇಗ ಸಭೆ ಕರೆಯಲಾಗುತ್ತದೆ’ ಎಂದು ಅವರು ವಿವರಿಸಿದರು.</p><p>‘ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನ ಅಂತಿಮ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಒಳ ಮೀಸಲಾತಿಗೆ ಬದ್ಧವಾಗಿದೆ’ ಎಂದು ಪಾಟೀಲ ಸ್ಪಷ್ಟಪಡಿಸಿದರು.</p><p>ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರಿಗೂ ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಖ್ಯಮಂತ್ರಿ ಅವಕಾಶ ನೀಡಿದ್ದರು. ದಲಿತ ಸಮುದಾಯದ ಸಚಿವರು ಅಲ್ಲದೇ, ಇತರ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿವಿಧ ಇಲಾಖೆಗಳಲ್ಲಿನ 56,432 ಹುದ್ದೆಗಳ ನೇಮಕಾತಿಗೆ ಮುನ್ನ ಒಳ ಮೀಸಲಾತಿಯನ್ನು ಅನ್ವಯಿಸಬೇಕು ಎಂಬ ವಿಷಯದಲ್ಲಿ ಬಲಗೈ–ಎಡಗೈ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರ ಮಧ್ಯೆ ಒಮ್ಮತ ಮೂಡದೇ ಇದ್ದುದರಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಯಾವುದೇ ನಿರ್ಣಯಕ್ಕೆ ಬಾರದೇ ಕೊನೆಗೊಂಡಿದೆ.</p>.<p>ಪರಿಶಿಷ್ಟ ಜಾತಿಗೆ ನಿಗದಿಯಾಗಿರುವ ಶೇ 15 ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಕಲ್ಪಿಸುವಂತೆ ಎಡಗೈ ಸಮುದಾಯದವರು ಪಟ್ಟು ಹಿಡಿದಿದ್ದಾರೆ. ರೋಸ್ಟರ್ ಗೊಂದಲ, ನ್ಯಾಯಾಲಯದ ಅಡೆತಡೆ ನಿವಾರಣೆ ಆಗುವರೆಗೆ ಒಳ ಮೀಸಲಾತಿ ರಹಿತವಾಗಿ ಶೇ 15 ಮೀಸಲಾತಿ ಅನ್ವಯವೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು ಎಂದು ಬಲಗೈ ಸಮುದಾಯ ಒತ್ತಡ ಹೇರಿದೆ. ಇದೇ ವಿಷಯ ಸಚಿವ ಸಂಪುಟ ಸಭೆಯಲ್ಲೂ ಪ್ರತಿಧ್ವನಿಸಿದೆ.</p>.<p>ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಬಲಗೈ–ಎಡಗೈ ಪ್ರತಿನಿಧಿಸುವ ಸಚಿವರ ಮಧ್ಯೆ ಕಾವೇರಿದ ಚರ್ಚೆ ನಡೆಯಿತು. ಒಳಮೀಸಲಾತಿ ಅನ್ವಯಿಸದೇ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಸುದೀರ್ಘ ಅವಧಿಯಿಂದ ಮೀಸಲಾತಿ ಸಿಗದೇ ಅನ್ಯಾಯಕ್ಕೆ ಒಳಗಾಗಿರುವ ಮಾದಿಗರೂ ಸೇರಿದಂತೆ ಎಡಗೈ ಗುಂಪಿನ ಜಾತಿಯವರಿಗೆ ವಂಚಿಸಿದಂತಾಗುತ್ತದೆ ಎಂದು ಈ ಸಮುದಾಯವನ್ನು ಪ್ರತಿನಿಧಿಸುವ ಕೆ.ಎಚ್. ಮುನಿಯಪ್ಪ ಹಾಗೂ ಆರ್.ಬಿ. ತಿಮ್ಮಾಪುರ ಏರಿದ ಧ್ವನಿಯಲ್ಲಿಯೇ ತಮ್ಮ ವಾದ ಮಂಡಿಸಿದರು ಎಂದು ಗೊತ್ತಾಗಿದೆ.</p>.<p>ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಹೆಚ್ಚಿಸಿರುವುದಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯಿಂದಾಗಿ ಎಲ್ಲ ನೇಮಕಾತಿ ಪ್ರಕ್ರಿಯೆಗಳು ನಿಂತು ಹೋಗಿವೆ. ಶೇ 15ರಿಂದ ಶೇ 17ಕ್ಕೆ ಹೆಚ್ಚಿಸಿರುವ ಪರಿಶಿಷ್ಟ ಜಾತಿಯವರ ಮೀಸಲಾತಿ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿರುವ ಪರಿಶಿಷ್ಟ ಪಂಗಡದ ಮೀಸಲಾತಿಯಡಿ ನೇಮಕಾತಿ ಮಾಡಲು ಈಗ ಸಾಧ್ಯವಾಗದು. ಪರಿಶಿಷ್ಟ ಜಾತಿಗೆ ಶೇ 2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 4ರಷ್ಟು ಹೆಚ್ಚಿಸಿರುವ ಮೀಸಲು ಪ್ರಮಾಣದ ಹುದ್ದೆಗಳನ್ನು ಕಾಯ್ದಿರಿಸಿಯೇ ನೇಮಕಾತಿ ಮಾಡಲಾಗುತ್ತದೆ. ಈಗಲೂ ನೇಮಕ ಮಾಡದೇ ಇದ್ದರೆ ನಿರುದ್ಯೋಗಿಗಳ ಪ್ರತಿರೋಧ ಎದುರಿಸುವುದು ಕಷ್ಟ ಎಂದು ಬಲಗೈ ಸಮುದಾಯ ಪ್ರತಿನಿಧಿಸುವ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ ಮೊದಲಾದವರು ತಮ್ಮ ವಾದ ಮುಂದಿಟ್ಟರು ಎಂದು ಮೂಲಗಳು ಹೇಳಿವೆ.</p>.<p>ಎರಡೂ ಸಮುದಾಯದವರೂ ತಮ್ಮ ಪಟ್ಟು ಬಿಡದೇ ಇದ್ದುದರಿಂದ, ಮತ್ತೊಮ್ಮೆ ಸಭೆ ಸೇರಿ ಈ ವಿಷಯವನ್ನು ಚರ್ಚಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.</p>.<p><strong>ಮುಂದಿನ ಸಭೆ ಅಧಿಕಾರ ಸಿ.ಎಂ.ಗೆ</strong></p><p>‘ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಇವತ್ತಿನ ಸಂಪುಟ ಸಭೆಯಲ್ಲಿ ಈ ವಿಷಯವಾಗಿ ವಿಸ್ತೃತ ಚರ್ಚೆ ನಡೆಯಿತು. ಆದರೆ, ಚರ್ಚೆ ಅಪೂರ್ಣವಾಗಿದೆ. ಚರ್ಚೆಯನ್ನು ಮುಂದುವರೆಸಲು ಮುಖ್ಯಮಂತ್ರಿ<br>ಯವರಿಗೆ ಅಧಿಕಾರ ನೀಡಲಾಗಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವಿಷಯವಾಗಿ ಮುಂದಿನ ಸಂಪುಟ ಸಭೆ ಯಾವಾಗ ಸೇರಬೇಕು ಎಂಬ ಬಗ್ಗೆ ಮುಖ್ಯಮಂತ್ರಿಯವರೇ ತೀರ್ಮಾನಿಸುತ್ತಾರೆ. ಆದಷ್ಟು ಬೇಗ ಸಭೆ ಕರೆಯಲಾಗುತ್ತದೆ’ ಎಂದು ಅವರು ವಿವರಿಸಿದರು.</p><p>‘ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನ ಅಂತಿಮ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಒಳ ಮೀಸಲಾತಿಗೆ ಬದ್ಧವಾಗಿದೆ’ ಎಂದು ಪಾಟೀಲ ಸ್ಪಷ್ಟಪಡಿಸಿದರು.</p><p>ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರಿಗೂ ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಖ್ಯಮಂತ್ರಿ ಅವಕಾಶ ನೀಡಿದ್ದರು. ದಲಿತ ಸಮುದಾಯದ ಸಚಿವರು ಅಲ್ಲದೇ, ಇತರ ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>