<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ಕಾಲಹರಣ ಮಾಡುತ್ತಿದೆ. ಒಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ನಿಮಗಿರುವ ಅಡ್ಡಿಯಾದರೂ ಏನು’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p>.<p>ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ದಾವಣಗೆರೆಯ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ತಾವು ನೀಡಿದ ಭಾಷಣ ಕೇವಲ ರಾಜಕೀಯ ಪ್ರೇರಿತವಾಗಿದೆ. ಅದರಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿ ಎಳ್ಳಷ್ಟೂ ಕಾಣುತ್ತಿಲ್ಲ. ಜನರ ಕಣ್ಣಿಗೆ ಮಣ್ಣೆರಚುವ ಭಾಷಣಗಳಿಂದ ಸಮುದಾಯದ ಏಳಿಗೆ ಅಸಾಧ್ಯ’ ಎಂದು ಅವರು ಟೀಕಿಸಿದ್ದಾರೆ.</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 15ರಿಂದ ಶೇ 17ಕ್ಕೆ ಅಂದರೆ ಎಸ್ಸಿಗೆ ಶೇ 3 ಮತ್ತು ಎಸ್ಟಿಗೆ ಶೇ 7ಕ್ಕೆ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ. ಅಂದು ಆ ನಿರ್ಧಾರವನ್ನು ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಈಗ ಅದೇ ಅಂಕಿ–ಅಂಶಗಳನ್ನು ಬಳಸಿಕೊಂಡು ವೇದಿಕೆಗಳ ಮೇಲೆ ಹಕ್ಕು ಸಾಧಿಸುತ್ತಿರುವುದು ನಿಮ್ಮ ನೈತಿಕ ಅಧಃಪತನಕ್ಕೆ ಸಾಕ್ಷಿ’ ಎಂದು ಹೇಳಿದ್ದಾರೆ.</p>.<p>‘ನೇಮಕಾತಿಯಲ್ಲಿ ಶೆಡ್ಯೂಲ್ 9ರ ಬದಲಾವಣೆಗಳನ್ನು ನಂತರದ ಹಂತದಲ್ಲಿ ಅಳವಡಿಸಿಕೊಳ್ಳಲು ಅವಕಾಶವಿದೆ. ತಡ ಮಾಡದೇ 2.84 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರದಲ್ಲಿ ಕಾಲಹರಣ ಮಾಡುತ್ತಿದೆ. ಒಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ನಿಮಗಿರುವ ಅಡ್ಡಿಯಾದರೂ ಏನು’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.</p>.<p>ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ದಾವಣಗೆರೆಯ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ತಾವು ನೀಡಿದ ಭಾಷಣ ಕೇವಲ ರಾಜಕೀಯ ಪ್ರೇರಿತವಾಗಿದೆ. ಅದರಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿ ಎಳ್ಳಷ್ಟೂ ಕಾಣುತ್ತಿಲ್ಲ. ಜನರ ಕಣ್ಣಿಗೆ ಮಣ್ಣೆರಚುವ ಭಾಷಣಗಳಿಂದ ಸಮುದಾಯದ ಏಳಿಗೆ ಅಸಾಧ್ಯ’ ಎಂದು ಅವರು ಟೀಕಿಸಿದ್ದಾರೆ.</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 15ರಿಂದ ಶೇ 17ಕ್ಕೆ ಅಂದರೆ ಎಸ್ಸಿಗೆ ಶೇ 3 ಮತ್ತು ಎಸ್ಟಿಗೆ ಶೇ 7ಕ್ಕೆ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ. ಅಂದು ಆ ನಿರ್ಧಾರವನ್ನು ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಈಗ ಅದೇ ಅಂಕಿ–ಅಂಶಗಳನ್ನು ಬಳಸಿಕೊಂಡು ವೇದಿಕೆಗಳ ಮೇಲೆ ಹಕ್ಕು ಸಾಧಿಸುತ್ತಿರುವುದು ನಿಮ್ಮ ನೈತಿಕ ಅಧಃಪತನಕ್ಕೆ ಸಾಕ್ಷಿ’ ಎಂದು ಹೇಳಿದ್ದಾರೆ.</p>.<p>‘ನೇಮಕಾತಿಯಲ್ಲಿ ಶೆಡ್ಯೂಲ್ 9ರ ಬದಲಾವಣೆಗಳನ್ನು ನಂತರದ ಹಂತದಲ್ಲಿ ಅಳವಡಿಸಿಕೊಳ್ಳಲು ಅವಕಾಶವಿದೆ. ತಡ ಮಾಡದೇ 2.84 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>