<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಐತಿಹಾಸಿಕ ತೀರ್ಮಾನವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ’ ರಚಿಸಲಾಗುವುದು ಎಂದೂ ಪ್ರಕಟಿಸಿದರು.</p>.<p>ಮಂಗಳವಾರ ರಾತ್ರಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಸದನದಲ್ಲಿ ಮುಖ್ಯಮಂತ್ರಿ ಹೇಳಿಕೆ ನೀಡಿದರು.</p>.<p>‘101 ಪರಿಶಿಷ್ಟ ಜಾತಿಗಳನ್ನು ‘ಎ’, ‘ಬಿ’, ‘ಸಿ’ ಎಂದು ಮೂರು ಪ್ರವರ್ಗಗಳಾಗಿ ವಿಂಗಡಿಸಲು ತೀರ್ಮಾನಿಸಿದ್ದೇವೆ. ಎಡಗೈ ಸಂಬಂಧಿತ ಜಾತಿಗಳಿರುವ ‘ಎ’ ಪ್ರವರ್ಗಕ್ಕೆ ಶೇ 6, ಬಲಗೈ ಸಂಬಂಧಿತ ಜಾತಿಗಳಿರುವ ‘ಬಿ’ ಪ್ರವರ್ಗಕ್ಕೆ ಶೇ 6 ಹಾಗೂ ‘ಸಿ’ ಪ್ರವರ್ಗಕ್ಕೆ ಶೇ 5ರಷ್ಟು ಒಳ ಮೀಸಲಾತಿ ನೀಡಲು ನಿರ್ಣಯಿಸಿದ್ದೇವೆ’ ಎಂದರು.</p>.<p>‘ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆ ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿ, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚಿಸಲಾಗುವುದು. ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಅಲ್ಲದೆ, ಒಂದು ಬಾರಿಗೆ ವಯೋಮಿತಿ ಸಡಿಲಿಸಲಾಗುವುದು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲಾಗುವುದು’ ಎಂದೂ ತಿಳಿಸಿದರು.</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಆಯೋಗವು, ಪರಿಶಿಷ್ಟ ಜಾತಿಗಳನ್ನು ‘ಎ’, ‘ಬಿ’, ‘ಸಿ’, ‘ಡಿ’, ‘ಇ’ ಎಂದು ಐದು ಪ್ರವರ್ಗಗಳಾಗಿ ವಿಂಗಡಿಸಿ ಶಿಫಾರಸು ಮಾಡಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿದ್ದ ತತ್ವಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವು ಮಾರ್ಪಾಡುಗಳೊಂದಿಗೆ ಈ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ’ ಎಂದರು.</p>.<p>‘ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲ ಜಾತಿಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಇತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಾಗ ಸಮಾನತೆ ಮತ್ತು ನ್ಯಾಯ ಸಮ್ಮತಿಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಮರ್ಥನೆ ನೀಡಿದರು. </p>.<p>‘ಸದ್ಯ ತೆಗೆದುಕೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಬದಲಾವಣೆಯ ಅಗತ್ಯ ಕಂಡುಬಂದರೆ ಮುಂದೆ ನಡೆಯಲಿರುವ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಸರ್ಕಾರ ಬದ್ಧವಾಗಿದೆ’ ಎಂದೂ ಹೇಳಿದರು.</p>.<p><strong>ಐದರ ಬದಲು ಮೂರು ಪ್ರವರ್ಗ</strong></p><p>*ಆಯೋಗವು ಎಡಗೈ ಸಂಬಂಧಿತ ಜಾತಿಗಳೆಂದು ಗುರುತಿಸಿದ ಸಮುದಾಯಗಳಿಗೆ ಶೇ 6</p><p>*ಪರಾಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಆಯೋಗವು ಸೇರಿಸಿದೆ. ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಆ ಸಮೂಹಕ್ಕೆ ಶೇ 6</p><p>*ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪು ಗಳಲ್ಲಿರುವ ಒಟ್ಟು 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ</p><p>*ಆಯೋಗವು ಸ್ಪೃಶ್ಯ ಜಾತಿಗಳ (ಕೊರಮ, ಕೊರಚ, ಭೋವಿ, ಲಂಬಾಣಿ) ಗುಂಪಿಗೆ ಶೇ 4 ಮತ್ತು 59 ಜಾತಿಗಳಿರುವ ಒಟ್ಟು 5,22,099 ಜನಸಂಖ್ಯೆಯನ್ನು ಪ್ರವರ್ಗ ‘ಎ’ ಎಂದು ತೀರ್ಮಾನಿಸಿ<br>ಶೇ 1ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಿತ್ತು. ಕೆಲವು ತಾಂತ್ರಿಕ ಕಾರಣಗಳಿಗೆ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ 5 ಮೀಸಲಾತಿ ನಿಗದಿ</p>.<p><strong>ಅವಕಾಶ ನೀಡದ ಸಭಾಧ್ಯಕ್ಷ: ವಿಪಕ್ಷ ಸಭಾತ್ಯಾಗ</strong></p><p>ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಾತು ಮುಗಿಸುತ್ತಿದ್ದಂತೆಯೇ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು. ಹೇಳಿಕೆಗೆ ಪ್ರತಿಕ್ರಿಯಿಸಲು ಅವಕಾಶ ನೀಡಲಿಲ್ಲವೆಂದು ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.</p><p>ಬಿಜೆಪಿ ಸದಸ್ಯರು ಹೇಳಿಕೆ ನೀಡಲು ಮುಂದಾಗುತ್ತಿದ್ದಂತೆಯೇ ಮುಖ್ಯಮಂತ್ರಿ, ‘ನಿಮ್ಮ ಕೈಯಲ್ಲಿ (ಒಳ ಮೀಸಲು) ಮಾಡಲು ಆಗಿಲ್ಲ ಎಂದೇ ನಾವು ಮಾಡಿದ್ದೇವೆ’ ಎಂದು ಹೇಳಿ ಸದನದಿಂದ ಹೊರಡಲು ಮುಂದಾದರು. ಆಗ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಪಲಾಯನ ಮಾಡಿ ಹೋಗುತ್ತಿದ್ದಾರೆ’ ಎಂದರು. ಅದಕ್ಕೆ ಮುಖ್ಯಮಂತ್ರಿ, ‘ನನ್ನ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಪಲಾಯನ ಮಾಡಿಲ್ಲ. ನಿಮಗೆ ಹಿಂದೆ ಅಲ್ಲ, ಈಗಲೂ ಹೆದರುವುದಿಲ್ಲ’ ಎಂದು ತಿರುಗೇಟು ನೀಡಿ ತೆರಳಿದರು.</p><p>ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ‘ನಮಗೂ ಮಾತನಾಡಲು ಅವಕಾಶ ಕೊಡಿ’ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ಆಗ ಸಭಾಧ್ಯಕ್ಷ ಯು.ಟಿ. ಖಾದರ್, ‘ಚರ್ಚೆ ಮಾಡಲು ಅವಕಾಶ ಕೊಡಬೇಕೆಂದು ನಿಯಮದಲ್ಲಿಲ್ಲ’ ಎಂದರು.</p><p>ಮಧ್ಯಪ್ರವೇಶಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ‘ಪ್ರಶ್ನೆ ಕೇಳಲು ಅವಕಾಶ ಇದೆ. ನೀವು ಅವಕಾಶ ಕೊಡುತ್ತಿಲ್ಲ’ ಎಂದು ನಿಯಮ ಓದಿದರು. ‘ನಾನು ವಿರೋಧ ಪಕ್ಷದ ನಾಯಕ, ನನಗೇ ಪ್ರಶ್ನೆ ಕೇಳಲು ಅವಕಾಶ ನೀಡುವುದಿಲ್ಲವೆಂದರೆ ಏನರ್ಥ’ ಎಂದು ಆರ್. ಅಶೋಕ ಪ್ರಶ್ನಿಸಿದರು. ಆಗ ಸಭಾಧ್ಯಕ್ಷರು, ‘ಮುಖ್ಯಮಂತ್ರಿ ಪರಿಷತ್ಗೆ ಹೋಗಿದ್ದಾರೆ’ ಎಂದರು. </p><p>‘ಮುಖ್ಯಮಂತ್ರಿ ಹೋಗಲಿ. ನಮಗೆ ಡಿ.ಕೆ. ಶಿವಕುಮಾರ್ ಇದ್ದರೆ ಸಾಕು. ಅವರೇ ಮುಖ್ಯಮಂತ್ರಿ ಅಂದುಕೊಳ್ಳುತ್ತೇವೆ’ ಎಂದ ಆರ್. ಅಶೋಕ, ‘ಮಾತನಾಡಲು ಅವಕಾಶ ನೀಡಲೇಬೇಕು’ ಎಂದು ಪಟ್ಟುಹಿಡಿದರು. ಆದರೆ, ಸಭಾಧ್ಯಕ್ಷರು ಅವಕಾಶ ನೀಡಲಿಲ್ಲ. ಹೀಗಾಗಿ, ಬಿಜೆಪಿ, ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.</p><p>ಆಗ ಕಾನೂನು ಸಚಿವ ಎಚ್.ಕೆ. ಪಾಟೀಲ, ‘ಒಳ ಮೀಸಲಾತಿ ಹಂಚಿಕೆ ಐತಿಹಾಸಿಕ ನಿರ್ಣಯ. ಹೇಗಾದರೂ ಮಾಡಿ ಗೊಂದಲ ಸೃಷ್ಟಿಸಿ, ರಾಜಕೀಯ ಮಾಡಬೇಕೆಂಬುದು ಬಿಜೆಪಿಯವರ ಉದ್ದೇಶ. ನಮ್ಮ ಸೂತ್ರ ಎಲ್ಲರಿಗೂ ಒಪ್ಪಿಗೆ ಆಗಿದೆ. ವಿಪಕ್ಷಗಳ ಸಭಾತ್ಯಾಗ ರಾಜಕೀಯ ನಾಟಕವೇ ಹೊರತು ವಿವೇಕದ ನಡೆ ಅಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಐತಿಹಾಸಿಕ ತೀರ್ಮಾನವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ’ ರಚಿಸಲಾಗುವುದು ಎಂದೂ ಪ್ರಕಟಿಸಿದರು.</p>.<p>ಮಂಗಳವಾರ ರಾತ್ರಿ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಸದನದಲ್ಲಿ ಮುಖ್ಯಮಂತ್ರಿ ಹೇಳಿಕೆ ನೀಡಿದರು.</p>.<p>‘101 ಪರಿಶಿಷ್ಟ ಜಾತಿಗಳನ್ನು ‘ಎ’, ‘ಬಿ’, ‘ಸಿ’ ಎಂದು ಮೂರು ಪ್ರವರ್ಗಗಳಾಗಿ ವಿಂಗಡಿಸಲು ತೀರ್ಮಾನಿಸಿದ್ದೇವೆ. ಎಡಗೈ ಸಂಬಂಧಿತ ಜಾತಿಗಳಿರುವ ‘ಎ’ ಪ್ರವರ್ಗಕ್ಕೆ ಶೇ 6, ಬಲಗೈ ಸಂಬಂಧಿತ ಜಾತಿಗಳಿರುವ ‘ಬಿ’ ಪ್ರವರ್ಗಕ್ಕೆ ಶೇ 6 ಹಾಗೂ ‘ಸಿ’ ಪ್ರವರ್ಗಕ್ಕೆ ಶೇ 5ರಷ್ಟು ಒಳ ಮೀಸಲಾತಿ ನೀಡಲು ನಿರ್ಣಯಿಸಿದ್ದೇವೆ’ ಎಂದರು.</p>.<p>‘ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆ ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿ, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಪರಿಶಿಷ್ಟ ಜಾತಿಗಳ ಶಾಶ್ವತ ಆಯೋಗ ರಚಿಸಲಾಗುವುದು. ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಅಲ್ಲದೆ, ಒಂದು ಬಾರಿಗೆ ವಯೋಮಿತಿ ಸಡಿಲಿಸಲಾಗುವುದು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲಾಗುವುದು’ ಎಂದೂ ತಿಳಿಸಿದರು.</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಆಯೋಗವು, ಪರಿಶಿಷ್ಟ ಜಾತಿಗಳನ್ನು ‘ಎ’, ‘ಬಿ’, ‘ಸಿ’, ‘ಡಿ’, ‘ಇ’ ಎಂದು ಐದು ಪ್ರವರ್ಗಗಳಾಗಿ ವಿಂಗಡಿಸಿ ಶಿಫಾರಸು ಮಾಡಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿದ್ದ ತತ್ವಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವು ಮಾರ್ಪಾಡುಗಳೊಂದಿಗೆ ಈ ಶಿಫಾರಸುಗಳನ್ನು ಅಂಗೀಕರಿಸಲಾಗಿದೆ’ ಎಂದರು.</p>.<p>‘ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲ ಜಾತಿಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಇತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಾಗ ಸಮಾನತೆ ಮತ್ತು ನ್ಯಾಯ ಸಮ್ಮತಿಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಮರ್ಥನೆ ನೀಡಿದರು. </p>.<p>‘ಸದ್ಯ ತೆಗೆದುಕೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಬದಲಾವಣೆಯ ಅಗತ್ಯ ಕಂಡುಬಂದರೆ ಮುಂದೆ ನಡೆಯಲಿರುವ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಸರ್ಕಾರ ಬದ್ಧವಾಗಿದೆ’ ಎಂದೂ ಹೇಳಿದರು.</p>.<p><strong>ಐದರ ಬದಲು ಮೂರು ಪ್ರವರ್ಗ</strong></p><p>*ಆಯೋಗವು ಎಡಗೈ ಸಂಬಂಧಿತ ಜಾತಿಗಳೆಂದು ಗುರುತಿಸಿದ ಸಮುದಾಯಗಳಿಗೆ ಶೇ 6</p><p>*ಪರಾಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಆಯೋಗವು ಸೇರಿಸಿದೆ. ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಆ ಸಮೂಹಕ್ಕೆ ಶೇ 6</p><p>*ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪು ಗಳಲ್ಲಿರುವ ಒಟ್ಟು 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ</p><p>*ಆಯೋಗವು ಸ್ಪೃಶ್ಯ ಜಾತಿಗಳ (ಕೊರಮ, ಕೊರಚ, ಭೋವಿ, ಲಂಬಾಣಿ) ಗುಂಪಿಗೆ ಶೇ 4 ಮತ್ತು 59 ಜಾತಿಗಳಿರುವ ಒಟ್ಟು 5,22,099 ಜನಸಂಖ್ಯೆಯನ್ನು ಪ್ರವರ್ಗ ‘ಎ’ ಎಂದು ತೀರ್ಮಾನಿಸಿ<br>ಶೇ 1ರಷ್ಟು ಮೀಸಲಾತಿ ನೀಡುವಂತೆ ಶಿಫಾರಸು ಮಾಡಿತ್ತು. ಕೆಲವು ತಾಂತ್ರಿಕ ಕಾರಣಗಳಿಗೆ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ 5 ಮೀಸಲಾತಿ ನಿಗದಿ</p>.<p><strong>ಅವಕಾಶ ನೀಡದ ಸಭಾಧ್ಯಕ್ಷ: ವಿಪಕ್ಷ ಸಭಾತ್ಯಾಗ</strong></p><p>ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಾತು ಮುಗಿಸುತ್ತಿದ್ದಂತೆಯೇ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು. ಹೇಳಿಕೆಗೆ ಪ್ರತಿಕ್ರಿಯಿಸಲು ಅವಕಾಶ ನೀಡಲಿಲ್ಲವೆಂದು ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.</p><p>ಬಿಜೆಪಿ ಸದಸ್ಯರು ಹೇಳಿಕೆ ನೀಡಲು ಮುಂದಾಗುತ್ತಿದ್ದಂತೆಯೇ ಮುಖ್ಯಮಂತ್ರಿ, ‘ನಿಮ್ಮ ಕೈಯಲ್ಲಿ (ಒಳ ಮೀಸಲು) ಮಾಡಲು ಆಗಿಲ್ಲ ಎಂದೇ ನಾವು ಮಾಡಿದ್ದೇವೆ’ ಎಂದು ಹೇಳಿ ಸದನದಿಂದ ಹೊರಡಲು ಮುಂದಾದರು. ಆಗ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಪಲಾಯನ ಮಾಡಿ ಹೋಗುತ್ತಿದ್ದಾರೆ’ ಎಂದರು. ಅದಕ್ಕೆ ಮುಖ್ಯಮಂತ್ರಿ, ‘ನನ್ನ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಪಲಾಯನ ಮಾಡಿಲ್ಲ. ನಿಮಗೆ ಹಿಂದೆ ಅಲ್ಲ, ಈಗಲೂ ಹೆದರುವುದಿಲ್ಲ’ ಎಂದು ತಿರುಗೇಟು ನೀಡಿ ತೆರಳಿದರು.</p><p>ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ‘ನಮಗೂ ಮಾತನಾಡಲು ಅವಕಾಶ ಕೊಡಿ’ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ಆಗ ಸಭಾಧ್ಯಕ್ಷ ಯು.ಟಿ. ಖಾದರ್, ‘ಚರ್ಚೆ ಮಾಡಲು ಅವಕಾಶ ಕೊಡಬೇಕೆಂದು ನಿಯಮದಲ್ಲಿಲ್ಲ’ ಎಂದರು.</p><p>ಮಧ್ಯಪ್ರವೇಶಿಸಿದ ಬಿಜೆಪಿಯ ಎಸ್. ಸುರೇಶ್ ಕುಮಾರ್, ‘ಪ್ರಶ್ನೆ ಕೇಳಲು ಅವಕಾಶ ಇದೆ. ನೀವು ಅವಕಾಶ ಕೊಡುತ್ತಿಲ್ಲ’ ಎಂದು ನಿಯಮ ಓದಿದರು. ‘ನಾನು ವಿರೋಧ ಪಕ್ಷದ ನಾಯಕ, ನನಗೇ ಪ್ರಶ್ನೆ ಕೇಳಲು ಅವಕಾಶ ನೀಡುವುದಿಲ್ಲವೆಂದರೆ ಏನರ್ಥ’ ಎಂದು ಆರ್. ಅಶೋಕ ಪ್ರಶ್ನಿಸಿದರು. ಆಗ ಸಭಾಧ್ಯಕ್ಷರು, ‘ಮುಖ್ಯಮಂತ್ರಿ ಪರಿಷತ್ಗೆ ಹೋಗಿದ್ದಾರೆ’ ಎಂದರು. </p><p>‘ಮುಖ್ಯಮಂತ್ರಿ ಹೋಗಲಿ. ನಮಗೆ ಡಿ.ಕೆ. ಶಿವಕುಮಾರ್ ಇದ್ದರೆ ಸಾಕು. ಅವರೇ ಮುಖ್ಯಮಂತ್ರಿ ಅಂದುಕೊಳ್ಳುತ್ತೇವೆ’ ಎಂದ ಆರ್. ಅಶೋಕ, ‘ಮಾತನಾಡಲು ಅವಕಾಶ ನೀಡಲೇಬೇಕು’ ಎಂದು ಪಟ್ಟುಹಿಡಿದರು. ಆದರೆ, ಸಭಾಧ್ಯಕ್ಷರು ಅವಕಾಶ ನೀಡಲಿಲ್ಲ. ಹೀಗಾಗಿ, ಬಿಜೆಪಿ, ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.</p><p>ಆಗ ಕಾನೂನು ಸಚಿವ ಎಚ್.ಕೆ. ಪಾಟೀಲ, ‘ಒಳ ಮೀಸಲಾತಿ ಹಂಚಿಕೆ ಐತಿಹಾಸಿಕ ನಿರ್ಣಯ. ಹೇಗಾದರೂ ಮಾಡಿ ಗೊಂದಲ ಸೃಷ್ಟಿಸಿ, ರಾಜಕೀಯ ಮಾಡಬೇಕೆಂಬುದು ಬಿಜೆಪಿಯವರ ಉದ್ದೇಶ. ನಮ್ಮ ಸೂತ್ರ ಎಲ್ಲರಿಗೂ ಒಪ್ಪಿಗೆ ಆಗಿದೆ. ವಿಪಕ್ಷಗಳ ಸಭಾತ್ಯಾಗ ರಾಜಕೀಯ ನಾಟಕವೇ ಹೊರತು ವಿವೇಕದ ನಡೆ ಅಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>