<p><strong>ಬೆಂಗಳೂರು</strong>: ‘ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಾಗ, ಪರಿಶಿಷ್ಟ ಜಾತಿಗಿರುವ ಶೇ 15ರ ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಅನ್ವಯಿಸುವ ಕುರಿತಂತೆ ಇದೇ 5ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಎಚ್. ಆಂಜನೇಯ ಸೇರಿದಂತೆ ಎಡಗೈ ಸಮುದಾಯದ ಮುಖಂಡರ ಜೊತೆ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಅವರು ಮಾತನಾಡಿದರು. ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈ ವಿಚಾರದಲ್ಲಿ ಆದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಯಾವುದೇ ಅನುಮಾನ ಬೇಡ’ ಎಂದರು.</p>.<p>‘ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿದ್ದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ 50ರಿಂದ ಶೇ 56ಕ್ಕೆ ಹೆಚ್ಚಳವಾಗಿದೆ. ಹೆಚ್ಚಿಸಿದ ಮೀಸಲಾತಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರೂಪಿಸಿದ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಆದರೆ, ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸಿರುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ ಕಾರಣ, ಫೆ. 26ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದಿನಂತೆ ಶೇ 50ರಷ್ಟು ಮೀಸಲಾತಿ ಅನ್ವಯಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒಪ್ಪಿಗೆ ನೀಡಲಾಗಿತ್ತು’ ಎಂದು ಅವರು ತಿಳಿಸಿದರು.</p>.<p>‘ಒಳ ಮೀಸಲಾತಿ ಅನ್ವಯಿಸಿ, ಕೋರ್ಟ್ನ ಅಂತಿಮ ತೀರ್ಪಿಗೆ ಒಳಪಟ್ಟು ನೇಮಕಾತಿ ಪ್ರಕ್ರಿಯೆ ನಡೆಸುವಂತೆ ನಾವು ಸಂಪುಟ ಸಭೆಯಲ್ಲಿ ಬೇಡಿಕೆ ಒಟ್ಟಿದ್ದೆವು. ಆದರೆ, ನೇಮಕಾತಿ ಆರಂಭಿಸುವ ಕುರಿತು ಡಿಪಿಎಆರ್ ಹೊರಡಿಸಿದ ಆದೇಶದಲ್ಲಿ ಒಳ ಮೀಸಲಾತಿ ಅಳವಡಿಸುವ ಪ್ರಸ್ತಾವ ಇಲ್ಲ. ಈ ಆದೇಶದಿಂದ ನಮಗೆ ಆಘಾತವಾಗಿದೆ. ನಾವು ಅಡ್ವೊಕೇಟ್ ಜನರಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಒಳ ಮೀಸಲಾತಿ ಅನುಷ್ಠಾನಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಯವರ ಜೊತೆಗೂ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ಆದೇಶ ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದರು.</p>.<p>ಆರ್.ಬಿ. ತಿಮ್ಮಾಪುರ ಮಾತನಾಡಿ, ‘ನೇಮಕಾತಿ ಆರಂಭಿಸುವ ಕುರಿತು ಹೊರಡಿಸಿರುವ ಆದೇಶದಲ್ಲಿ ಒಳ ಮೀಸಲಾತಿ ಅಂಶ ಇಲ್ಲ. ಈ ಬಗ್ಗೆ ಗೊಂದಲ ನಿವಾರಣೆ ಬಗ್ಗೆ ಚರ್ಚಿಸಿ ತೀರ್ಮಾನಿಸೋಣ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಮುದಾಯದವರು ಗಲಾಟೆ, ಗೊಂದಲ ಮಾಡಬೇಕಿಲ್ಲ. ಸಮುದಾಯದ ಪರವಾಗಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.</p>.<p>‘ಒಳ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದಿನ ಹೋರಾಟಗಳ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಎಡಗೈ ಸಮುದಾಯದ ನಾಯಕರು ಎಚ್ಚರಿಕೆ ನೀಡಿದರು.</p>.<p>ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕ ಕೆ.ಎಸ್. ಬಸವಂತಪ್ಪ, ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಉಪಸ್ಥಿತರಿದ್ದರು.</p>.<p>ಒಳ ಮೀಸಲಾತಿ ಅಳವಡಿಸದೆ ಸರ್ಕಾರ ನೇಮಕಾತಿ ಪ್ರಕ್ರಿಯೆ ಆರಂಭಿಸಿದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗಲಿದೆ. ನಮಗೆ ನ್ಯಾಯ ಸಿಗಬೇಕು</p><p>–ಎಚ್. ಆಂಜನೇಯ ಮಾಜಿ ಸಚಿವ</p><p>–––</p>.<p>ಒಳಮೀಸಲಾತಿ ಕಲ್ಪಿಸದೆ ಯಾವುದೇ ಕಾರಣಕ್ಕೂ ಖಾಲಿ ಹುದ್ದೆಗಳಿಗೆ ನೇಮಕಾತಿ ಆಗಬಾರದು ಎಂಬುದು ನಮ್ಮೆಲ್ಲರ (ಎಡಗೈ ಸಮುದಾಯ) ಒಕ್ಕೊರಲ ಆಗ್ರಹ</p><p>–ಎಲ್. ಹನುಮಂತಯ್ಯ ರಾಜ್ಯ ಸಭೆಯ ಮಾಜಿ ಸದಸ್ಯ</p>
<p><strong>ಬೆಂಗಳೂರು</strong>: ‘ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಾಗ, ಪರಿಶಿಷ್ಟ ಜಾತಿಗಿರುವ ಶೇ 15ರ ಮೀಸಲಾತಿಯಲ್ಲಿಯೇ ಒಳ ಮೀಸಲಾತಿ ಅನ್ವಯಿಸುವ ಕುರಿತಂತೆ ಇದೇ 5ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.</p>.<p>ಸಚಿವ ಆರ್.ಬಿ. ತಿಮ್ಮಾಪುರ, ಮಾಜಿ ಸಚಿವ ಎಚ್. ಆಂಜನೇಯ ಸೇರಿದಂತೆ ಎಡಗೈ ಸಮುದಾಯದ ಮುಖಂಡರ ಜೊತೆ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಅವರು ಮಾತನಾಡಿದರು. ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈ ವಿಚಾರದಲ್ಲಿ ಆದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಯಾವುದೇ ಅನುಮಾನ ಬೇಡ’ ಎಂದರು.</p>.<p>‘ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿದ್ದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ 50ರಿಂದ ಶೇ 56ಕ್ಕೆ ಹೆಚ್ಚಳವಾಗಿದೆ. ಹೆಚ್ಚಿಸಿದ ಮೀಸಲಾತಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರೂಪಿಸಿದ ಮಸೂದೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಆದರೆ, ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸಿರುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ ಕಾರಣ, ಫೆ. 26ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದಿನಂತೆ ಶೇ 50ರಷ್ಟು ಮೀಸಲಾತಿ ಅನ್ವಯಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒಪ್ಪಿಗೆ ನೀಡಲಾಗಿತ್ತು’ ಎಂದು ಅವರು ತಿಳಿಸಿದರು.</p>.<p>‘ಒಳ ಮೀಸಲಾತಿ ಅನ್ವಯಿಸಿ, ಕೋರ್ಟ್ನ ಅಂತಿಮ ತೀರ್ಪಿಗೆ ಒಳಪಟ್ಟು ನೇಮಕಾತಿ ಪ್ರಕ್ರಿಯೆ ನಡೆಸುವಂತೆ ನಾವು ಸಂಪುಟ ಸಭೆಯಲ್ಲಿ ಬೇಡಿಕೆ ಒಟ್ಟಿದ್ದೆವು. ಆದರೆ, ನೇಮಕಾತಿ ಆರಂಭಿಸುವ ಕುರಿತು ಡಿಪಿಎಆರ್ ಹೊರಡಿಸಿದ ಆದೇಶದಲ್ಲಿ ಒಳ ಮೀಸಲಾತಿ ಅಳವಡಿಸುವ ಪ್ರಸ್ತಾವ ಇಲ್ಲ. ಈ ಆದೇಶದಿಂದ ನಮಗೆ ಆಘಾತವಾಗಿದೆ. ನಾವು ಅಡ್ವೊಕೇಟ್ ಜನರಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಒಳ ಮೀಸಲಾತಿ ಅನುಷ್ಠಾನಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಅವರು ಹೇಳಿದ್ದಾರೆ. ಮುಖ್ಯಮಂತ್ರಿಯವರ ಜೊತೆಗೂ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ಆದೇಶ ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದರು.</p>.<p>ಆರ್.ಬಿ. ತಿಮ್ಮಾಪುರ ಮಾತನಾಡಿ, ‘ನೇಮಕಾತಿ ಆರಂಭಿಸುವ ಕುರಿತು ಹೊರಡಿಸಿರುವ ಆದೇಶದಲ್ಲಿ ಒಳ ಮೀಸಲಾತಿ ಅಂಶ ಇಲ್ಲ. ಈ ಬಗ್ಗೆ ಗೊಂದಲ ನಿವಾರಣೆ ಬಗ್ಗೆ ಚರ್ಚಿಸಿ ತೀರ್ಮಾನಿಸೋಣ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಮುದಾಯದವರು ಗಲಾಟೆ, ಗೊಂದಲ ಮಾಡಬೇಕಿಲ್ಲ. ಸಮುದಾಯದ ಪರವಾಗಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.</p>.<p>‘ಒಳ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದಿನ ಹೋರಾಟಗಳ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಎಡಗೈ ಸಮುದಾಯದ ನಾಯಕರು ಎಚ್ಚರಿಕೆ ನೀಡಿದರು.</p>.<p>ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕ ಕೆ.ಎಸ್. ಬಸವಂತಪ್ಪ, ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಉಪಸ್ಥಿತರಿದ್ದರು.</p>.<p>ಒಳ ಮೀಸಲಾತಿ ಅಳವಡಿಸದೆ ಸರ್ಕಾರ ನೇಮಕಾತಿ ಪ್ರಕ್ರಿಯೆ ಆರಂಭಿಸಿದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗಲಿದೆ. ನಮಗೆ ನ್ಯಾಯ ಸಿಗಬೇಕು</p><p>–ಎಚ್. ಆಂಜನೇಯ ಮಾಜಿ ಸಚಿವ</p><p>–––</p>.<p>ಒಳಮೀಸಲಾತಿ ಕಲ್ಪಿಸದೆ ಯಾವುದೇ ಕಾರಣಕ್ಕೂ ಖಾಲಿ ಹುದ್ದೆಗಳಿಗೆ ನೇಮಕಾತಿ ಆಗಬಾರದು ಎಂಬುದು ನಮ್ಮೆಲ್ಲರ (ಎಡಗೈ ಸಮುದಾಯ) ಒಕ್ಕೊರಲ ಆಗ್ರಹ</p><p>–ಎಲ್. ಹನುಮಂತಯ್ಯ ರಾಜ್ಯ ಸಭೆಯ ಮಾಜಿ ಸದಸ್ಯ</p>