ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳು ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು, ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ, ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ಸ್ವಾಮೀಜಿ, ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಳ್ಳಲಿದ್ದಾರೆ.