ನವದೆಹಲಿ: ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಶ್ರಮಜೀವಿಗಳಿಗೆ ನಾಡಿನ ಗಣ್ಯರು ಕಾರ್ಮಿಕ ದಿನದ ಶುಭಾಶಯಗಳನ್ನು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಕಾಯಕವೇ ಕೈಲಾಸವೆಂದು ನಂಬಿ ರಾಷ್ಟ್ರನಿರ್ಮಾಣದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕಾರ್ಮಿಕರಿಗೆ ಕಾರ್ಮಿಕ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.
ಕಾಯಕವೇ ಕೈಲಾಸವೆಂದು ನಂಬಿ ರಾಷ್ಟ್ರನಿರ್ಮಾಣದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಎಲ್ಲ ಕಾರ್ಮಿಕರಿಗೆ ಕಾರ್ಮಿಕ ದಿನದ ಶುಭಾಶಯಗಳು.
— Siddaramaiah (@siddaramaiah) May 1, 2024
ನಿಮ್ಮ ಜೊತೆ ನಾನಿದ್ದೇನೆ, ಕಾಂಗ್ರೆಸ್ ಪಕ್ಷವಿದೆ. ಪ್ರತಿಯೊಬ್ಬ ಕಾರ್ಮಿಕನಿಗೆ ₹400 ಕನಿಷ್ಠ ವೇತನ, ಸಾಮಾಜಿಕ ಮತ್ತು ಸೇವಾ ಭದ್ರತೆ, ಆರೋಗ್ಯ ಹಕ್ಕು ಜಾರಿ, ಘನತೆಯುತವಾದ ಕೆಲಸದ ವಾತಾವರಣ ನಿರ್ಮಿಸಿಕೊಡಲು… pic.twitter.com/lWHtGD5DgM
ದೇಶವನ್ನು ಸದೃಢವಾಗಿಸುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಕಾರ್ಮಿಕರ ಕಾರ್ಯತತ್ಪರತೆಯನ್ನು ಗುರುತಿಸಿ ಶ್ಲಾಘಿಸೋಣ. ಎಲ್ಲ ಕಾರ್ಮಿಕರಿಗೂ ವಿಶ್ವ ಕಾರ್ಮಿಕರ ದಿನಾಚರಣೆ ಶುಭಾಶಯಗಳು ಎಂದು ಬಿಜೆಪಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೇಶವನ್ನು ಸದೃಢವಾಗಿಸುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಕಾರ್ಮಿಕರ ಕಾರ್ಯತತ್ಪರತೆಯನ್ನು ಗುರುತಿಸಿ ಶ್ಲಾಘಿಸೋಣ. ಎಲ್ಲ ಕಾರ್ಮಿಕರಿಗೂ ವಿಶ್ವ ಕಾರ್ಮಿಕರ ದಿನಾಚರಣೆ ಶುಭಾಶಯಗಳು. pic.twitter.com/TTt8yKhEOo
— R. Ashoka (ಮೋದಿ ಅವರ ಕುಟುಂಬ) (@RAshokaBJP) May 1, 2024
ದೇಶದ ಅಭ್ಯುದಯಕ್ಕೆ ಮಹೋನ್ನತ ಕೊಡುಗೆ ನೀಡುತ್ತಿರುವ ಸಮಸ್ತ ಕಾರ್ಮಿಕ ಬಂಧುಗಳಿಗೆ ಮೇ 1ರ ಕಾರ್ಮಿಕರ ದಿನದ ಹಾರ್ದಿಕ ಶುಭಾಶಯಗಳು. ಶ್ರಮಶಕ್ತಿ ಇಲ್ಲದೆ ಮುನ್ನಡೆ ಇಲ್ಲ. ಹೀಗಾಗಿ ಎಲ್ಲಾ ಕಾರ್ಮಿಕರನ್ನು ಗೌರವಿಸೋಣ, ಅವರ ಹಿತಕ್ಕಾಗಿ ಶ್ರಮಿಸೋಣ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಶುಭಾಶಯ ಹೇಳಿದ್ದಾರೆ.
ದೇಶದ ಅಭ್ಯುದಯಕ್ಕೆ ಮಹೋನ್ನತ ಕೊಡುಗೆ ನೀಡುತ್ತಿರುವ ಸಮಸ್ತ ಕಾರ್ಮಿಕ ಬಂಧುಗಳಿಗೆ ಮೇ 1ರ ಕಾರ್ಮಿಕರ ದಿನದ ಹಾರ್ದಿಕ ಶುಭಾಶಯಗಳು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2024
ಶ್ರಮಶಕ್ತಿ ಇಲ್ಲದೆ ಮುನ್ನಡೆ ಇಲ್ಲ. ಹೀಗಾಗಿ ಎಲ್ಲಾ ಕಾರ್ಮಿಕರನ್ನು ಗೌರವಿಸೋಣ, ಅವರ ಹಿತಕ್ಕಾಗಿ ಶ್ರಮಿಸೋಣ.#LabourDay pic.twitter.com/9nuucBgEe0
ದುಡಿಮೆಯ ನಂಬಿ ಬದುಕು ಅದರಲೆ ದೇವರ ಹುಡುಕು! ಕೃಷಿಕ, ಶ್ರಮಿಕ, ಸೈನಿಕ, ಶಿಕ್ಷಕ ಸಮಾಜದ ಆಧಾರ ಸ್ತಂಭಗಳು. ದೇಶದ ಬೆಳವಣಿಗೆಗಾಗಿ ಹಗಲಿರುಳು ದುಡಿಯುತ್ತಿರುವ ಕಾರ್ಮಿಕ ವರ್ಗದ ಸೇವೆಯನ್ನು ಎಷ್ಟು ಬಣ್ಣಿಸಿದರೂ ಸಾಲದು. ಅಂತಾರಾಷ್ಟ್ರೀಯ ಕಾರ್ಮಿಕರ ದಿನದಂದು ಆ ದುಡಿಯುವ ಕೈಗಳಿಗೆ ನನ್ನ ನಮನಗಳು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುಭಾಶಯ ಕೋರಿದ್ದಾರೆ.
ದುಡಿಮೆಯ ನಂಬಿ ಬದುಕು
— DK Shivakumar (@DKShivakumar) May 1, 2024
ಅದರಲೆ ದೇವರ ಹುಡುಕು!
ಕೃಷಿಕ, ಶ್ರಮಿಕ, ಸೈನಿಕ, ಶಿಕ್ಷಕ ಸಮಾಜದ ಆಧಾರ ಸ್ತಂಭಗಳು. ದೇಶದ ಬೆಳವಣಿಗೆಗಾಗಿ ಹಗಲಿರುಳು ದುಡಿಯುತ್ತಿರುವ ಕಾರ್ಮಿಕ ವರ್ಗದ ಸೇವೆಯನ್ನು ಎಷ್ಟು ಬಣ್ಣಿಸಿದರೂ ಸಾಲದು. ಅಂತಾರಾಷ್ಟ್ರೀಯ ಕಾರ್ಮಿಕರ ದಿನದಂದು ಆ ದುಡಿಯುವ ಕೈಗಳಿಗೆ ನನ್ನ ನಮನಗಳು. #LaboursDay pic.twitter.com/0g6YmHekFB
'ಕಾಯಕವೇ ಕೈಲಾಸ' ತತ್ವವನ್ನು ಅಕ್ಷರಶಃ ಅನುಷ್ಠಾನಕ್ಕೆ ತಂದು ದುಡಿಯುವ ನಾಡಿನ ಸಮಸ್ತ ಕಾರ್ಮಿಕರ ಬಂಧುಗಳಿಗೆ 'ಅಂತಾರಾಷ್ಟ್ರೀಯ ಕಾರ್ಮಿಕರ ದಿನ'ದ ಹಾರ್ದಿಕ ಶುಭಾಶಯಗಳು. ದೇಶದ ಆರ್ಥಿಕ ಪ್ರಗತಿಯ ಪಾಲುದಾರರಾದ ಕಾರ್ಮಿಕರ ಕಠಿಣ ಪರಿಶ್ರಮ, ಸಮರ್ಪಣಾ ಭಾವ ಮತ್ತು ಇಚ್ಛಾಶಕ್ತಿಯನ್ನು ನಾವೆಲ್ಲರೂ ಗೌರವಿಸೋಣ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸಾಮಾಜಿಕ ಮಾಧ್ಯಮಗಳ ಮೂಲಕ ಶುಭ ಕೋರಿದ್ದಾರೆ.
'ಕಾಯಕವೇ ಕೈಲಾಸ' ತತ್ವವನ್ನು ಅಕ್ಷರಶಃ ಅನುಷ್ಠಾನಕ್ಕೆ ತಂದು ದುಡಿಯುವ ನಾಡಿನ ಸಮಸ್ತ ಕಾರ್ಮಿಕರ ಬಂಧುಗಳಿಗೆ 'ಅಂತಾರಾಷ್ಟ್ರೀಯ ಕಾರ್ಮಿಕರ ದಿನ'ದ ಹಾರ್ದಿಕ ಶುಭಾಶಯಗಳು. ದೇಶದ ಆರ್ಥಿಕ ಪ್ರಗತಿಯ ಪಾಲುದಾರರಾದ ಕಾರ್ಮಿಕರ ಕಠಿಣ ಪರಿಶ್ರಮ, ಸಮರ್ಪಣಾ ಭಾವ ಮತ್ತು ಇಚ್ಛಾಶಕ್ತಿಯನ್ನು ನಾವೆಲ್ಲರೂ ಗೌರವಿಸೋಣ.#InternationalLabourDay pic.twitter.com/TVtODsFxWd
— Vijayendra Yediyurappa (Modi Ka Parivar) (@BYVijayendra) May 1, 2024
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.