ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳು, ಸುಪ್ರೀಂ ಕೋರ್ಟ್ನಲ್ಲಿರುವ ದಾವೆಗಳ ಕುರಿತಂತೆ ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಶುಕ್ರವಾರ (ಫೆ.26) ನಡೆಯಲಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಕೂಡಾ ಭಾಗವಹಿಸಲಿದ್ದಾರೆ.