<p><strong>ನವದೆಹಲಿ: </strong>ರಾಜೀನಾಮೆ ಕುರಿತು ಸ್ಪೀಕರ್ಗೆ ನಿರ್ದೇಶನ ನೀಡುವಂತೆ ಕೋರಿ 10 ಜನ ಅತೃಪ್ತ ಶಾಸಕರು ಸಲ್ಲಿಸಿದ್ದ ಮೇಲ್ಮನವಿಯೊಂದಿಗೆ ಇತರ ಐವರು ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.</p>.<p>ರಾಜೀನಾಮೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್ ಕೆ.ಆರ್. ರಮೇಶಕುಮಾರ್ ಅವರಿಗೆ ಸೂಚಿಸಬೇಕು ಎಂದು ಶಾಸಕರಾದ ಆನಂದ್ ಸಿಂಗ್, ಕೆ.ಸುಧಾಕರ್, ರೋಷನ್ ಬೇಗ್, ಎಂಟಿಬಿ ನಾಗರಾಜ್ ಮತ್ತು ಮುನಿರತ್ನ ಕಳೆದ ಶನಿವಾರ ಮೇಲ್ಮನವಿ ಸಲ್ಲಿಸಿದ್ದರು.</p>.<p>ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ನ ಇತರ 10 ಜನ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಮುಕುಲ್ ರೋಹಟ್ಗಿ ಸೋಮವಾರ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠದ ಎದುರು ಮನವಿ ಮಾಡಿದರು. ಮಂಗಳವಾರದ ವಿಚಾರಣೆ ವೇಳೆ ಈ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸಮ್ಮತಿ ನೀಡಿತು.</p>.<p>ರಾಜೀನಾಮೆ ಮತ್ತು ಅನರ್ಹತೆ ಪ್ರಕರಣಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಳೆದ ಶುಕ್ರವಾರವೇ ಆದೇಶ ನೀಡಿದ್ದ ನ್ಯಾಯಪೀಠ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜೀನಾಮೆ ಕುರಿತು ಸ್ಪೀಕರ್ಗೆ ನಿರ್ದೇಶನ ನೀಡುವಂತೆ ಕೋರಿ 10 ಜನ ಅತೃಪ್ತ ಶಾಸಕರು ಸಲ್ಲಿಸಿದ್ದ ಮೇಲ್ಮನವಿಯೊಂದಿಗೆ ಇತರ ಐವರು ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.</p>.<p>ರಾಜೀನಾಮೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್ ಕೆ.ಆರ್. ರಮೇಶಕುಮಾರ್ ಅವರಿಗೆ ಸೂಚಿಸಬೇಕು ಎಂದು ಶಾಸಕರಾದ ಆನಂದ್ ಸಿಂಗ್, ಕೆ.ಸುಧಾಕರ್, ರೋಷನ್ ಬೇಗ್, ಎಂಟಿಬಿ ನಾಗರಾಜ್ ಮತ್ತು ಮುನಿರತ್ನ ಕಳೆದ ಶನಿವಾರ ಮೇಲ್ಮನವಿ ಸಲ್ಲಿಸಿದ್ದರು.</p>.<p>ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ನ ಇತರ 10 ಜನ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಮುಕುಲ್ ರೋಹಟ್ಗಿ ಸೋಮವಾರ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠದ ಎದುರು ಮನವಿ ಮಾಡಿದರು. ಮಂಗಳವಾರದ ವಿಚಾರಣೆ ವೇಳೆ ಈ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸಮ್ಮತಿ ನೀಡಿತು.</p>.<p>ರಾಜೀನಾಮೆ ಮತ್ತು ಅನರ್ಹತೆ ಪ್ರಕರಣಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಳೆದ ಶುಕ್ರವಾರವೇ ಆದೇಶ ನೀಡಿದ್ದ ನ್ಯಾಯಪೀಠ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>