<p><strong>ಬೆಂಗಳೂರು:</strong> ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.</p>.<p>ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ನಗರದ ಕೇಂದ್ರ ಭಾಗದಲ್ಲಿ ಈ ಜಾಗ ಇರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರವನ್ನೂ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು.</p>.<p>ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.</p>.<p>ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ನಗರದ ಕೇಂದ್ರ ಭಾಗದಲ್ಲಿ ಈ ಜಾಗ ಇರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರವನ್ನೂ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು.</p>.<p>ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>