ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಹಗರಣವನ್ನು ಸಿಬಿಐಗೆ ವಹಿಸಲು ಎಲ್ಲ ರೀತಿಯ ತಯಾರಿ ನಡೆದಿದೆ ಎಂದು ಕರ್ನಾಟಕದ ಸಹಕಾರ ಸಚಿವರು ಈ ವರ್ಷದ ಜನವರಿಯಲ್ಲಿ ತಿಳಿಸಿದ್ದರು. ಸಿಐಡಿ, ಸಹಕಾರ ಇಲಾಖೆ ಮತ್ತು ಇ.ಡಿ (ಜಾರಿ ನಿರ್ದೇಶನಾಲಯ) ಹಗರಣದ ತನಿಖೆ ನಡೆಸಿ, ₹1,290 ಕೋಟಿ ವಂಚನೆ ಪತ್ತೆಹಚ್ಚಿವೆ. ಸಿಐಡಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ ಸಿಬಿಐಗೆ ವಹಿಸಿದರೆ ತನಿಖೆ ವಿಳಂಬ ಆಗಬಹುದು ಎಂಬ ಕಾರಣಕ್ಕೆ ತಡೆಹಿಡಿಯಲಾಗಿತ್ತು ಎಂದೂ ಸಮಜಾಯಿಷಿ ನೀಡಿದ್ದರು.